<p><strong>ಮೈಸೂರು</strong>: 'ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಾಂಗ್ರೆಸ್ನಿಂದ ಸುಪಾರಿ ಪಡೆದು ಬಿಜೆಪಿ ವಿರುದ್ಧವೇ ಹೋರಾಟ ಮಾಡುತ್ತಿದ್ದಾರೆ' ಎಂದು ಬಿಜೆಪಿ ಮುಖಂಡ ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು. </p><p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಜೊತೆ ಮ್ಯಾಚ್ ಫಿಕ್ಸಿಂಗ್ಸ್ ಮಾಡಿಕೊಂಡು ಮುಡಾ ಪಾದಯಾತ್ರೆಗೆ ಬರಲಿಲ್ಲ. ಭ್ರಷ್ಟಾಚಾರವನ್ನು ಪರೋಕ್ಷವಾಗಿ ಬೆಂಬಲಿಸಿದ್ದಾರೆ. ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡುತ್ತಿದ್ದಾರೆ. ಬ್ಲಾಕ್ಮೇಲ್ ರಾಜಕಾರಣ ಮಾಡುತ್ತಿದ್ದಾರೆ. ಈ ರೀತಿಯ ಬ್ಲಾಕ್ ಮೇಲ್ ರಾಜಕಾರಣ ನಡೆಯದು' ಎಂದರು.</p><p>'ಯಡಿಯೂರಪ್ಪ ಅವರಿಗೆ ಇಂತಹ ಕೆಲವರು ಶಕುನಿಗಳು, ಮೀರ್ ಸಾಧಕರು ಕಾಟ ಕೊಡುತ್ತಲೇ ಇದ್ದಾರೆ. ವಿಜಯೇಂದ್ರ ಅವರನ್ನು ರಾಜ್ಯ ಅಧ್ಯಕ್ಷರಾಗಿ ಮಾಡಿದ್ದು ಬಿಜೆಪಿ ಹೈಕಮಾಂಡ್ ಹೊರತು ಯಡಿಯೂರಪ್ಪ ಅಲ್ಲ. ಹೀಗಾಗಿ ಅವರಿಗೆ ಬೈಯ್ದರೆ ಹೈಕಮಾಂಡ್ ಗೆ ಬೈಯ್ದಂತೆ' ಎಂದರು. </p><p><strong>ಹಿಂದುತ್ವದ ಮುಖವಾಡ</strong></p><p>ಯತ್ನಾಳ ಹಿಂದುತ್ವದ ಮುಖವಾಡ ಧರಿಸಿದ್ದಾರೆ. ಅವರ ಹರಕು ಬಾಯಿಯಿಂದ ಬಿಜೆಪಿಗೆ ಚುನಾವಣೆಯಲ್ಲಿ ಸೋಲಾಯಿತು. ಉಪ ಚುನಾವಣೆ ಸೋಲಿಗೆ ಅವರೇ ಕಾರಣ. ವಿಜಯಪುರದ ಪ್ರಭಾವಿ ಸಚಿವರ ಜೊತೆಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ ಎಂದು ದೂರಿದರು. </p><p><strong>ಬೆದರಿಕೆ ಕರೆ:</strong> 'ಯತ್ನಾಳ ವಿರುದ್ಧ ಮಾತನಾಡಿದ್ದಕ್ಕೆ ನಿನ್ನೆಯಿಂದ ಬೆದರಿಕೆಗಳು ಬರುತ್ತಿವೆ. ಆದರೆ ನಾನು ಯಾವುದಕ್ಕೂ ಹೆದರುವುದಿಲ್ಲ' ಎಂದರು.</p><p><strong>ಛೀಮಾರಿ ಹಾಕಿ:</strong> ' ಬಸವಣ್ಣ ಎಲ್ಲ ವರ್ಗದವರಿಗೆ ಸೇರಿದ ವಿಶ್ವಗುರು. ಅಂತಹವರಿಗೆ ಅಪಮಾನ ಮಾಡಿರುವ ಯತ್ನಾಳ ವಿರುದ್ಧ ಮಠಾಧೀಶರು ಛೀಮಾರಿ ಹಾಕಬೇಕು. ಪಕ್ಷದಿಂದ ಉಚ್ಛಾಟಿಸುವಂತೆ ಒತ್ತಾಯಿಸಬೇಕು' ಎಂದು ಆಗ್ರಹಿಸಿದರು.</p><p>'ನಾವು ಬಣ ರಾಜಕೀಯ ಮಾಡುತ್ತಿಲ್ಲ. ವಿಜಯೇಂದ್ರ ಒಂದು ಶಕ್ತಿ. ಯತ್ನಾಳರದ್ದು ನಾಲ್ಕು ಜನರ ಒಂದು ಗುಂಪು ಅಷ್ಟೇ. ತಾಯಿ ಚಾಮುಂಡಿ ಇಂತಹ ಆಂತರಿಕ ದುಷ್ಟರನ್ನು ಸಂಹಾರ ಮಾಡಲಿ' ಎಂದರು.</p><p><strong>ದಾವಣಗೆರೆಯಲ್ಲಿ ಬೃಹತ್ ಸಭೆ</strong></p><p>'ಮುರ್ಡೇಶ್ವರದಲ್ಲಿ ಸದ್ಯದಲ್ಲೇ ಇನ್ನೊಂದು ಸಭೆ ನಡೆಸಲಾಗುವುದು. ನಂತರ ದಾವಣಗೆರೆಯಲ್ಲಿ 3-4 ಲಕ್ಷ ಜನ ಸೇರಿಸಿ ಬಿಜೆಪಿ ನಾಯಕರ ಸಮಾವೇಶ ಆಯೋಜಿಸಲಾಗುವುದು. ಯತ್ನಾಳರ ಉಚ್ಛಾಟನೆಗೆ ಆಗ್ರಹಿಸಿ ಸದ್ಯದಲ್ಲೇ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಲಾಗುವುದು. ಕೇಂದ್ರದ ನಾಯಕರು ಶೀಘ್ರದಲ್ಲೇ ಕ್ರಮ ಕೈಗೊಳ್ಳಲಿದ್ದಾರೆ' ಎಂದರು.</p>.ಮೈಸೂರಿನಲ್ಲಿ ಬಿ.ವೈ. ವಿಜಯೇಂದ್ರ ಬಣದ ಶಕ್ತಿ ಪ್ರದರ್ಶನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: 'ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಾಂಗ್ರೆಸ್ನಿಂದ ಸುಪಾರಿ ಪಡೆದು ಬಿಜೆಪಿ ವಿರುದ್ಧವೇ ಹೋರಾಟ ಮಾಡುತ್ತಿದ್ದಾರೆ' ಎಂದು ಬಿಜೆಪಿ ಮುಖಂಡ ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು. </p><p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಜೊತೆ ಮ್ಯಾಚ್ ಫಿಕ್ಸಿಂಗ್ಸ್ ಮಾಡಿಕೊಂಡು ಮುಡಾ ಪಾದಯಾತ್ರೆಗೆ ಬರಲಿಲ್ಲ. ಭ್ರಷ್ಟಾಚಾರವನ್ನು ಪರೋಕ್ಷವಾಗಿ ಬೆಂಬಲಿಸಿದ್ದಾರೆ. ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡುತ್ತಿದ್ದಾರೆ. ಬ್ಲಾಕ್ಮೇಲ್ ರಾಜಕಾರಣ ಮಾಡುತ್ತಿದ್ದಾರೆ. ಈ ರೀತಿಯ ಬ್ಲಾಕ್ ಮೇಲ್ ರಾಜಕಾರಣ ನಡೆಯದು' ಎಂದರು.</p><p>'ಯಡಿಯೂರಪ್ಪ ಅವರಿಗೆ ಇಂತಹ ಕೆಲವರು ಶಕುನಿಗಳು, ಮೀರ್ ಸಾಧಕರು ಕಾಟ ಕೊಡುತ್ತಲೇ ಇದ್ದಾರೆ. ವಿಜಯೇಂದ್ರ ಅವರನ್ನು ರಾಜ್ಯ ಅಧ್ಯಕ್ಷರಾಗಿ ಮಾಡಿದ್ದು ಬಿಜೆಪಿ ಹೈಕಮಾಂಡ್ ಹೊರತು ಯಡಿಯೂರಪ್ಪ ಅಲ್ಲ. ಹೀಗಾಗಿ ಅವರಿಗೆ ಬೈಯ್ದರೆ ಹೈಕಮಾಂಡ್ ಗೆ ಬೈಯ್ದಂತೆ' ಎಂದರು. </p><p><strong>ಹಿಂದುತ್ವದ ಮುಖವಾಡ</strong></p><p>ಯತ್ನಾಳ ಹಿಂದುತ್ವದ ಮುಖವಾಡ ಧರಿಸಿದ್ದಾರೆ. ಅವರ ಹರಕು ಬಾಯಿಯಿಂದ ಬಿಜೆಪಿಗೆ ಚುನಾವಣೆಯಲ್ಲಿ ಸೋಲಾಯಿತು. ಉಪ ಚುನಾವಣೆ ಸೋಲಿಗೆ ಅವರೇ ಕಾರಣ. ವಿಜಯಪುರದ ಪ್ರಭಾವಿ ಸಚಿವರ ಜೊತೆಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ ಎಂದು ದೂರಿದರು. </p><p><strong>ಬೆದರಿಕೆ ಕರೆ:</strong> 'ಯತ್ನಾಳ ವಿರುದ್ಧ ಮಾತನಾಡಿದ್ದಕ್ಕೆ ನಿನ್ನೆಯಿಂದ ಬೆದರಿಕೆಗಳು ಬರುತ್ತಿವೆ. ಆದರೆ ನಾನು ಯಾವುದಕ್ಕೂ ಹೆದರುವುದಿಲ್ಲ' ಎಂದರು.</p><p><strong>ಛೀಮಾರಿ ಹಾಕಿ:</strong> ' ಬಸವಣ್ಣ ಎಲ್ಲ ವರ್ಗದವರಿಗೆ ಸೇರಿದ ವಿಶ್ವಗುರು. ಅಂತಹವರಿಗೆ ಅಪಮಾನ ಮಾಡಿರುವ ಯತ್ನಾಳ ವಿರುದ್ಧ ಮಠಾಧೀಶರು ಛೀಮಾರಿ ಹಾಕಬೇಕು. ಪಕ್ಷದಿಂದ ಉಚ್ಛಾಟಿಸುವಂತೆ ಒತ್ತಾಯಿಸಬೇಕು' ಎಂದು ಆಗ್ರಹಿಸಿದರು.</p><p>'ನಾವು ಬಣ ರಾಜಕೀಯ ಮಾಡುತ್ತಿಲ್ಲ. ವಿಜಯೇಂದ್ರ ಒಂದು ಶಕ್ತಿ. ಯತ್ನಾಳರದ್ದು ನಾಲ್ಕು ಜನರ ಒಂದು ಗುಂಪು ಅಷ್ಟೇ. ತಾಯಿ ಚಾಮುಂಡಿ ಇಂತಹ ಆಂತರಿಕ ದುಷ್ಟರನ್ನು ಸಂಹಾರ ಮಾಡಲಿ' ಎಂದರು.</p><p><strong>ದಾವಣಗೆರೆಯಲ್ಲಿ ಬೃಹತ್ ಸಭೆ</strong></p><p>'ಮುರ್ಡೇಶ್ವರದಲ್ಲಿ ಸದ್ಯದಲ್ಲೇ ಇನ್ನೊಂದು ಸಭೆ ನಡೆಸಲಾಗುವುದು. ನಂತರ ದಾವಣಗೆರೆಯಲ್ಲಿ 3-4 ಲಕ್ಷ ಜನ ಸೇರಿಸಿ ಬಿಜೆಪಿ ನಾಯಕರ ಸಮಾವೇಶ ಆಯೋಜಿಸಲಾಗುವುದು. ಯತ್ನಾಳರ ಉಚ್ಛಾಟನೆಗೆ ಆಗ್ರಹಿಸಿ ಸದ್ಯದಲ್ಲೇ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಲಾಗುವುದು. ಕೇಂದ್ರದ ನಾಯಕರು ಶೀಘ್ರದಲ್ಲೇ ಕ್ರಮ ಕೈಗೊಳ್ಳಲಿದ್ದಾರೆ' ಎಂದರು.</p>.ಮೈಸೂರಿನಲ್ಲಿ ಬಿ.ವೈ. ವಿಜಯೇಂದ್ರ ಬಣದ ಶಕ್ತಿ ಪ್ರದರ್ಶನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>