‘ಬೆಳಿಗ್ಗೆ 11 ಗಂಟೆಗೆ ದೆಹಲಿ ತಲುಪಲಿರುವ ಮುಖ್ಯಮಂತ್ರಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಅಮಿತ್ ಶಾ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಸಂಪುಟ ವಿಸ್ತರಣೆಗೆ ಒತ್ತಡ ಹೆಚ್ಚಿದೆ. ಹೀಗಾಗಿ, ಈ ಇಬ್ಬರನ್ನೂ ಭೇಟಿ ಮಾಡಿ ಸಂಪುಟ ವಿಸ್ತರಣೆಗೆ ಒಪ್ಪಿಗೆ ಪಡೆಯುವ ಸಾಧ್ಯತೆ ಇದೆ. ಅಲ್ಲದೆ ಯಾರನ್ನೆಲ್ಲ ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂಬ ಬಗ್ಗೆಯೂ ಚರ್ಚಿಸುವ ಸಾಧ್ಯತೆ ಇದೆ’ ಎಂದೂ ಮೂಲ
ಗಳು ಹೇಳಿವೆ. ಶನಿವಾರ ರಾತ್ರಿ 7 ಗಂಟೆಯ ಬಳಿಕ ದೆಹಲಿಗೆ ಪ್ರವಾಸ ನಿಗದಿಯಾಗಿದೆ. ಹೀಗಾಗಿ, ವರಿಷ್ಠರಿಂದ ಕರೆ ಬಂದ ಕಾರಣಕ್ಕೆ ಯಡಿಯೂರಪ್ಪ ದೆಹಲಿಗೆ ಹೊರಟಿದ್ದಾರೆಯೇ ಎಂಬ ಬಗ್ಗೆ ಖಚಿತವಾಗಿಲ್ಲ.