ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ಕ್ಷೇತ್ರ ಪ್ರತಿನಿಧಿಸುವ ಬಿಜೆಪಿ ನಾಯಕರಿಗೆ 2ನೇ ಬಾರಿ ರಾಜ್ಯಾಧ್ಯಕ್ಷ ಹುದ್ದೆ ಒಲಿದುಬಂದಿದೆ.
ಹಿಂದೆ ಬಿ.ಎಸ್.ಯಡಿಯೂರಪ್ಪ ಅವರು ಶಿಕಾರಿಪುರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಆಗ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದರು.
ಅವರ ಚುನಾವಣಾ ರಾಜಕೀಯದಿಂದ ನಿವೃತ್ತಿಯ ನಂತರ ತಮ್ಮ ಕ್ಷೇತ್ರವನ್ನು ಪುತ್ರ ಬಿ.ವೈ.ವಿಜಯೇಂದ್ರ ಅವರಿಗೆ ಬಿಟ್ಟುಕೊಟ್ಟರು. ಇದಾದ ಬೆನ್ನಲ್ಲೇ ಮಹತ್ವದ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ವಿಜಯೇಂದ್ರಗೆ ಒಲಿದುಬಂದಿದೆ.
ಇದರಿಂದಾಗಿ ಶಿಕಾರಿಪುರ ಕ್ಷೇತ್ರ ಪ್ರತಿನಿಧಿಸುವವರು 2ನೇ ಬಾರಿಗೆ ಬಿಜೆಪಿ ರಾಜ್ಯಾಧ್ಯಕ್ಷರಾಗುವ ಮೂಲಕ ಇತಿಹಾಸದಲ್ಲಿ ದಾಖಲಾಗಿದೆ.