<p><strong>ದಾವಣಗೆರೆ:</strong> ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಷ್ಟ್ರೀಯ ನಾಯಕರನ್ನು ನಿರಂತರವಾಗಿ ಬ್ಲ್ಯಾಕ್ಮೇಲ್ ಮಾಡಿಕೊಂಡು ಬಂದಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಸಂದರ್ಭದಲ್ಲಿ ಮಠಾಧೀಶರನ್ನು ಮುಂದಿಟ್ಟುಕೊಂಡು ಆಟವಾಡಿದರು. ಪುತ್ರನ ವಿಚಾರದಲ್ಲಿ ಮತ್ತೆ ಹಳೆಯ ಆಟವನ್ನು ಮುಂದುವರಿಸಿದ್ದಾರೆ ಎಂದು ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಕಿಡಿಕಾರಿದರು.</p>.<p>‘ವೀರಶೈವ ಲಿಂಗಾಯತ ನಾಯಕರ ಸಮಾವೇಶ ಮಾಡುವುದರಲ್ಲಿ ಅರ್ಥವಿಲ್ಲ. ರಾಷ್ಟ್ರೀಯ ನಾಯಕರು ತಮ್ಮ ಜೊತೆಗಿಲ್ಲ ಎಂಬ ಭಾವನೆ ಇರುವವರು ಇಂತಹ ಸಮಾವೇಶ ಸಂಘಟಿಸುತ್ತಿರಬಹುದು. ಈ ಭಯ ನಮಗಿಲ್ಲ. ಪಕ್ಷಕ್ಕೆ ದ್ರೋಹ ಎಸಗಿದವರು, ಭ್ರಷ್ಟರು, ಹೊಂದಾಣಿಕೆ ರಾಜಕಾರಣ ಮಾಡಿದವರನ್ನು ಪಕ್ಷದಿಂದ ತೊಲಗಿಸುವ ಹೋರಾಟ ಮುಂದುವರಿಯಲಿದೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>‘ಬಿಜೆಪಿಯ ಆಂತರಿಕ ಕಿತ್ತಾಟದಿಂದ ರಾಜ್ಯದ ಜನ ಬೇಸತ್ತಿದ್ದಾರೆ. ಪಕ್ಷದ ಆಂತರಿಕ ಬೇಗುದಿ ಬಗೆಹರಿಸಲು ರಾಷ್ಟ್ರೀಯ ನಾಯಕರು ಇನ್ನೂ ಗಮನ ಹರಿಸಿದಂತೆ ಕಾಣುತ್ತಿಲ್ಲ. ನಾವು ಇನ್ನೂ ಆಶಾದಾಯಕರಾಗಿದ್ದೇವೆ. ಮುಂಬರುವ ದಿನಗಳಲ್ಲಿ ಪಕ್ಷದ ವರಿಷ್ಠರು ಕೈಗೊಳ್ಳುವ ತೀರ್ಮಾನಕ್ಕೆ ಬದ್ಧರಾಗಿ ಇರುತ್ತೇವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಷ್ಟ್ರೀಯ ನಾಯಕರನ್ನು ನಿರಂತರವಾಗಿ ಬ್ಲ್ಯಾಕ್ಮೇಲ್ ಮಾಡಿಕೊಂಡು ಬಂದಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಸಂದರ್ಭದಲ್ಲಿ ಮಠಾಧೀಶರನ್ನು ಮುಂದಿಟ್ಟುಕೊಂಡು ಆಟವಾಡಿದರು. ಪುತ್ರನ ವಿಚಾರದಲ್ಲಿ ಮತ್ತೆ ಹಳೆಯ ಆಟವನ್ನು ಮುಂದುವರಿಸಿದ್ದಾರೆ ಎಂದು ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಕಿಡಿಕಾರಿದರು.</p>.<p>‘ವೀರಶೈವ ಲಿಂಗಾಯತ ನಾಯಕರ ಸಮಾವೇಶ ಮಾಡುವುದರಲ್ಲಿ ಅರ್ಥವಿಲ್ಲ. ರಾಷ್ಟ್ರೀಯ ನಾಯಕರು ತಮ್ಮ ಜೊತೆಗಿಲ್ಲ ಎಂಬ ಭಾವನೆ ಇರುವವರು ಇಂತಹ ಸಮಾವೇಶ ಸಂಘಟಿಸುತ್ತಿರಬಹುದು. ಈ ಭಯ ನಮಗಿಲ್ಲ. ಪಕ್ಷಕ್ಕೆ ದ್ರೋಹ ಎಸಗಿದವರು, ಭ್ರಷ್ಟರು, ಹೊಂದಾಣಿಕೆ ರಾಜಕಾರಣ ಮಾಡಿದವರನ್ನು ಪಕ್ಷದಿಂದ ತೊಲಗಿಸುವ ಹೋರಾಟ ಮುಂದುವರಿಯಲಿದೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>‘ಬಿಜೆಪಿಯ ಆಂತರಿಕ ಕಿತ್ತಾಟದಿಂದ ರಾಜ್ಯದ ಜನ ಬೇಸತ್ತಿದ್ದಾರೆ. ಪಕ್ಷದ ಆಂತರಿಕ ಬೇಗುದಿ ಬಗೆಹರಿಸಲು ರಾಷ್ಟ್ರೀಯ ನಾಯಕರು ಇನ್ನೂ ಗಮನ ಹರಿಸಿದಂತೆ ಕಾಣುತ್ತಿಲ್ಲ. ನಾವು ಇನ್ನೂ ಆಶಾದಾಯಕರಾಗಿದ್ದೇವೆ. ಮುಂಬರುವ ದಿನಗಳಲ್ಲಿ ಪಕ್ಷದ ವರಿಷ್ಠರು ಕೈಗೊಳ್ಳುವ ತೀರ್ಮಾನಕ್ಕೆ ಬದ್ಧರಾಗಿ ಇರುತ್ತೇವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>