<p><strong>ಬೆಂಗಳೂರು</strong>: ‘ಎತ್ತಿನಹೊಳೆ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಮುಗಿದಿದೆ. ಆದರೆ, ಯೋಜನೆಗೆ ಅವಕಾಶ ಸಿಗುತ್ತಿಲ್ಲ’ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ನ ಕೆ.ಎಂ. ಶಿವಲಿಂಗೇಗೌಡ ಆಕ್ರೋಶ ವ್ಯಕ್ತಪಡಿಸಿದರು.</p>.<p>ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಿವಲಿಂಗೇಗೌಡ ಅವರ ಮಾತಿಗೆ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.</p>.<p>ಗದ್ದಲದ ನಡುವೆಯೂ ಮಾತು ಮುಂದುವರಿಸಿದ ಶಿವಲಿಂಗೇಗೌಡ, ‘ನೀವು ನೀರಾವರಿ ಯೋಜನೆಯನ್ನು ಹಾಳು ಮಾಡಿದವರು. ಯಾವ ಯೋಜನೆಗೆ ಕೇಂದ್ರದವರು ಅನುಮತಿ ಕೊಟ್ಟಿದ್ದಾರೆ? ಮಹದಾಯಿ ಯೋಜನೆಗೆ ಅವಕಾಶ ಕೊಟ್ರಾ’ ಎಂದು ಕೆಣಕಿದರು.</p>.<p>‘ನಾವು ಭಾರತ ದೇಶದ ಪ್ರಜೆಗಳು ಕಣ್ರೀ. ಕೇಳೋ ಹಕ್ಕು ನಮಗಿದೆ. ಎಲ್ಲದಕ್ಕೂ ಕೇಂದ್ರ ಸರ್ಕಾರ ಅಡ್ಡಿ ಮಾಡುತ್ತಿದೆ’ ಎಂದೂ ಕಿಡಿಕಾರಿದರು. </p>.<p>ಅರಣ್ಯ ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯಿಸಿ, ‘ಎತ್ತಿನ ಹೊಳೆ ಯೋಜನೆಗೆ ಅರಣ್ಯ ಇಲಾಖೆಯ ಭೂಮಿ ಬೇಕಿದ್ದು, ಅದಕ್ಕೆ ಕೇಂದ್ರ ಸರ್ಕಾರದ ಅನುಮೋದನೆ ಬೇಕಿದೆ. ಅವರು ಕೇಳಿದ ಎಲ್ಲ ಸ್ಪಷ್ಟೀಕರಣ ಕೊಟ್ಟಿದ್ದೇವೆ. ಎಲ್ಲ ಷರತ್ತುಗಳನ್ನೂ ಪೂರೈಸಿದ್ದೇವೆ. ಕೇಂದ್ರ ನಮಗೆ ಅವಕಾಶ ಮಾಡಿಕೊಡಬೇಕು’ ಎಂದರು.</p>.<p><strong>ಇಂಧನ ಇಲಾಖೆಗೆ ನಷ್ಟ</strong>: ಟೆಂಡರ್ ಪ್ರಕ್ರಿಯೆ, ಕಾಮಗಾರಿ ಲೋಪಗಳಿಂದ ಇಂಧನ ಇಲಾಖೆಗೆ ನಷ್ಟ ಉಂಟಾಗಿರುವ ಕುರಿತು ಬಿಜೆಪಿಯ ರವಿ ಸುಬ್ರಹ್ಮಣ್ಯ ವಿಷಯ ಪ್ರಸ್ತಾಪಿಸಿದರು.</p>.<p>‘ಇಂಧನ ಇಲಾಖೆಯು ನಾಲ್ಕೈದು ಗುತ್ತಿಗೆದಾರರ ಹಿಡಿತದಲ್ಲಿದೆ. ಬೇರೆ ಬೇರೆ ಎಸ್ಕಾಂಗಳಲ್ಲಿ ಅವ್ಯವಹಾರ ಆಗಿದೆ. ಇದೇ ರೀತಿ ಮುಂದುವರಿದರೆ ಮುಂದೆ ಕಷ್ಟ. ಉದ್ಯೋಗಿಗಳಿಗೆ ಸಂಬಳ ಕೊಡಲು ಕೂಡಾ ಆಗಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಎತ್ತಿನಹೊಳೆ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಮುಗಿದಿದೆ. ಆದರೆ, ಯೋಜನೆಗೆ ಅವಕಾಶ ಸಿಗುತ್ತಿಲ್ಲ’ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ನ ಕೆ.ಎಂ. ಶಿವಲಿಂಗೇಗೌಡ ಆಕ್ರೋಶ ವ್ಯಕ್ತಪಡಿಸಿದರು.</p>.<p>ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಿವಲಿಂಗೇಗೌಡ ಅವರ ಮಾತಿಗೆ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.</p>.<p>ಗದ್ದಲದ ನಡುವೆಯೂ ಮಾತು ಮುಂದುವರಿಸಿದ ಶಿವಲಿಂಗೇಗೌಡ, ‘ನೀವು ನೀರಾವರಿ ಯೋಜನೆಯನ್ನು ಹಾಳು ಮಾಡಿದವರು. ಯಾವ ಯೋಜನೆಗೆ ಕೇಂದ್ರದವರು ಅನುಮತಿ ಕೊಟ್ಟಿದ್ದಾರೆ? ಮಹದಾಯಿ ಯೋಜನೆಗೆ ಅವಕಾಶ ಕೊಟ್ರಾ’ ಎಂದು ಕೆಣಕಿದರು.</p>.<p>‘ನಾವು ಭಾರತ ದೇಶದ ಪ್ರಜೆಗಳು ಕಣ್ರೀ. ಕೇಳೋ ಹಕ್ಕು ನಮಗಿದೆ. ಎಲ್ಲದಕ್ಕೂ ಕೇಂದ್ರ ಸರ್ಕಾರ ಅಡ್ಡಿ ಮಾಡುತ್ತಿದೆ’ ಎಂದೂ ಕಿಡಿಕಾರಿದರು. </p>.<p>ಅರಣ್ಯ ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯಿಸಿ, ‘ಎತ್ತಿನ ಹೊಳೆ ಯೋಜನೆಗೆ ಅರಣ್ಯ ಇಲಾಖೆಯ ಭೂಮಿ ಬೇಕಿದ್ದು, ಅದಕ್ಕೆ ಕೇಂದ್ರ ಸರ್ಕಾರದ ಅನುಮೋದನೆ ಬೇಕಿದೆ. ಅವರು ಕೇಳಿದ ಎಲ್ಲ ಸ್ಪಷ್ಟೀಕರಣ ಕೊಟ್ಟಿದ್ದೇವೆ. ಎಲ್ಲ ಷರತ್ತುಗಳನ್ನೂ ಪೂರೈಸಿದ್ದೇವೆ. ಕೇಂದ್ರ ನಮಗೆ ಅವಕಾಶ ಮಾಡಿಕೊಡಬೇಕು’ ಎಂದರು.</p>.<p><strong>ಇಂಧನ ಇಲಾಖೆಗೆ ನಷ್ಟ</strong>: ಟೆಂಡರ್ ಪ್ರಕ್ರಿಯೆ, ಕಾಮಗಾರಿ ಲೋಪಗಳಿಂದ ಇಂಧನ ಇಲಾಖೆಗೆ ನಷ್ಟ ಉಂಟಾಗಿರುವ ಕುರಿತು ಬಿಜೆಪಿಯ ರವಿ ಸುಬ್ರಹ್ಮಣ್ಯ ವಿಷಯ ಪ್ರಸ್ತಾಪಿಸಿದರು.</p>.<p>‘ಇಂಧನ ಇಲಾಖೆಯು ನಾಲ್ಕೈದು ಗುತ್ತಿಗೆದಾರರ ಹಿಡಿತದಲ್ಲಿದೆ. ಬೇರೆ ಬೇರೆ ಎಸ್ಕಾಂಗಳಲ್ಲಿ ಅವ್ಯವಹಾರ ಆಗಿದೆ. ಇದೇ ರೀತಿ ಮುಂದುವರಿದರೆ ಮುಂದೆ ಕಷ್ಟ. ಉದ್ಯೋಗಿಗಳಿಗೆ ಸಂಬಳ ಕೊಡಲು ಕೂಡಾ ಆಗಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>