<p><strong>ಸುವರ್ಣ ವಿಧಾನಸೌಧ(ಬೆಳಗಾವಿ):</strong> ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯನ್ನು 2027ರ ಅಕ್ಟೋಬರ್ ವೇಳೆಗೆ ಪೂರ್ಣಗೊಳಿಸುವುದಾಗಿ ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದ್ದಾರೆ. </p>.<p>ವಿಧಾನಸಭೆಯಲ್ಲಿ ಜೆಡಿಎಸ್ನ ಜಿ.ಕೆ.ವೆಂಕಟಶಿವಾರೆಡ್ಡಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಈ ಮಾಹಿತಿ ನೀಡಿದ್ದಾರೆ.</p>.<p>ಈಗಾಗಲೇ ಮೀಸಲಿರಿಸಿರುವ ಅನುದಾನದಲ್ಲಿ ಯೋಜನೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ. ಬಯಲುಸೀಮೆ ಪ್ರದೇಶಗಳಾದ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸಲಾಗುವುದು. ಈ ಯೋಜನೆಯಡಿ ಕೋಲಾರ ಗುರುತ್ವ ಪೈಪ್ಲೈನ್ ಪ್ಯಾಕೇಜ್ 3 ಮತ್ತು 4, ಕೋಲಾರ ಫೀಡರ್ ಪೈಪ್ಲೈನ್ ಪ್ಯಾಕೇಜ್ 5 ಮತ್ತು 6 ಹಾಗೂ ಶ್ರೀನಿವಾಸಪುರ ಫೀಡರ್ ಪೈಪ್ಲೈನ್ ಪ್ಯಾಕೇಜ್ 1 ರಿಂದ 3ರ ಕಾಮಗಾರಿಗಳನ್ನು ಆರಂಭಿಸಲು ಕಳೆದ ಮೇ 16ರಂದೇ ಅನುಮೋದನೆ ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ.</p>.<p>ಪ್ರಸ್ತುತ ಕಾಮಗಾರಿಗಳ ಪೈಪ್ಲೈನ್ ಅಲೈನ್ಮೆಂಟ್, ವಿನ್ಯಾಸ, ನಕ್ಷೆಗಳ ತಯಾರಿಕೆ ಕಾರ್ಯ ಪೂರ್ಣಗೊಂಡಿದೆ. ಗುಣಮಟ್ಟ ಖಾತರಿ ಯೋಜನೆ ಕೂಡ ಅನುಮೋದನೆ ಹಂತದಲ್ಲಿದೆ. ಭೂಸ್ವಾಧೀನ ಪ್ರಕ್ರಿಯೆ ಜಾರಿಯಲ್ಲಿದೆ. ಗುತ್ತಿಗೆ ಕರಾರಿನ ಅನ್ವಯ ಕಾಮಗಾರಿ ಪೂರ್ಣಗೊಳಿಸಲು ಕ್ರಮವಹಿಸಲಾಗಿದೆ ಎಂದು ಶಿವಕುಮಾರ್ ಹೇಳಿದ್ದಾರೆ.</p>.<p>ರೈತರೊಂದಿಗೆ ತ್ರಿಪಕ್ಷೀಯ ಒಪ್ಪಂದ ಮಾಡಿಕೊಂಡಿದ್ದು, ಈ ಎಲ್ಲ ಪ್ರಕ್ರಿಯೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುವರ್ಣ ವಿಧಾನಸೌಧ(ಬೆಳಗಾವಿ):</strong> ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯನ್ನು 2027ರ ಅಕ್ಟೋಬರ್ ವೇಳೆಗೆ ಪೂರ್ಣಗೊಳಿಸುವುದಾಗಿ ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದ್ದಾರೆ. </p>.<p>ವಿಧಾನಸಭೆಯಲ್ಲಿ ಜೆಡಿಎಸ್ನ ಜಿ.ಕೆ.ವೆಂಕಟಶಿವಾರೆಡ್ಡಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಈ ಮಾಹಿತಿ ನೀಡಿದ್ದಾರೆ.</p>.<p>ಈಗಾಗಲೇ ಮೀಸಲಿರಿಸಿರುವ ಅನುದಾನದಲ್ಲಿ ಯೋಜನೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ. ಬಯಲುಸೀಮೆ ಪ್ರದೇಶಗಳಾದ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸಲಾಗುವುದು. ಈ ಯೋಜನೆಯಡಿ ಕೋಲಾರ ಗುರುತ್ವ ಪೈಪ್ಲೈನ್ ಪ್ಯಾಕೇಜ್ 3 ಮತ್ತು 4, ಕೋಲಾರ ಫೀಡರ್ ಪೈಪ್ಲೈನ್ ಪ್ಯಾಕೇಜ್ 5 ಮತ್ತು 6 ಹಾಗೂ ಶ್ರೀನಿವಾಸಪುರ ಫೀಡರ್ ಪೈಪ್ಲೈನ್ ಪ್ಯಾಕೇಜ್ 1 ರಿಂದ 3ರ ಕಾಮಗಾರಿಗಳನ್ನು ಆರಂಭಿಸಲು ಕಳೆದ ಮೇ 16ರಂದೇ ಅನುಮೋದನೆ ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ.</p>.<p>ಪ್ರಸ್ತುತ ಕಾಮಗಾರಿಗಳ ಪೈಪ್ಲೈನ್ ಅಲೈನ್ಮೆಂಟ್, ವಿನ್ಯಾಸ, ನಕ್ಷೆಗಳ ತಯಾರಿಕೆ ಕಾರ್ಯ ಪೂರ್ಣಗೊಂಡಿದೆ. ಗುಣಮಟ್ಟ ಖಾತರಿ ಯೋಜನೆ ಕೂಡ ಅನುಮೋದನೆ ಹಂತದಲ್ಲಿದೆ. ಭೂಸ್ವಾಧೀನ ಪ್ರಕ್ರಿಯೆ ಜಾರಿಯಲ್ಲಿದೆ. ಗುತ್ತಿಗೆ ಕರಾರಿನ ಅನ್ವಯ ಕಾಮಗಾರಿ ಪೂರ್ಣಗೊಳಿಸಲು ಕ್ರಮವಹಿಸಲಾಗಿದೆ ಎಂದು ಶಿವಕುಮಾರ್ ಹೇಳಿದ್ದಾರೆ.</p>.<p>ರೈತರೊಂದಿಗೆ ತ್ರಿಪಕ್ಷೀಯ ಒಪ್ಪಂದ ಮಾಡಿಕೊಂಡಿದ್ದು, ಈ ಎಲ್ಲ ಪ್ರಕ್ರಿಯೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>