ಬೆಂಗಳೂರು: ‘15 ದಿನಗಳ ಹಿಂದೆ ಯೋಗೇಶ್ವರ್ ನನ್ನ ಬಳಿ ಬಂದು ಕಾಲು ಹಿಡಿದುಕೊಂಡ. ಎಷ್ಟು ಹೇಳಿದರೂ ಪಾದ ಬಿಡಲೇ ಇಲ್ಲ. ನನ್ನನ್ನು ಕಾಂಗ್ರೆಸ್ಗೆ ಸೇರಿಸಿಕೊಳ್ಳಿ. ಸದ್ಯದಲ್ಲೇ ಯಡಿಯೂರಪ್ಪನವರನ್ನು ಕುರ್ಚಿಯಿಂದ ಕೆಳಗಿಸುತ್ತಾರೆ ಎಂದಿದ್ದ. ಆಗ ನಾನು ಬೇಡಪ್ಪ, ನೀನು ಬಿಜೆಪಿಗೆ ನಿಷ್ಠನಾಗಿರು ಎಂದು ವಾಪಸು ಕಳುಹಿಸಿದ್ದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.