<p>ಬೆಂಗಳೂರು: ಪದಾಧಿಕಾರಿಗಳನ್ನು ಜವಾಬ್ದಾರಿಗಳಿಂದ ತಾತ್ಕಾಲಿಕವಾಗಿ ಮುಕ್ತಗೊಳಿಸಿದ ವಿಚಾರಕ್ಕೆ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಮಂಜುನಾಥ ಗೌಡ ಮತ್ತು ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಬೆಂಬಲಿಗರ ನಡುವೆ ಸೋಮವಾರ ನಡೆದ ಗಲಾಟೆ ಕಾರಣಕ್ಕೆ ದೀಪಿಕಾ ರೆಡ್ಡಿ ಜತೆಗಿದ್ದ ಏಳು ಮಂದಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.</p>.<p>ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಂಜುನಾಥ ಗೌಡ ಮತ್ತು ದೀಪಿಕಾ ರೆಡ್ಡಿ ಬೆಂಬಲಿಗರ ನಡುವೆ ತಳ್ಳಾಟ-ನೂಕಾಟ ನಡೆದು ಕೈಕೈ ಮಿಲಾಯಿಸುವ ಹಂತ ತಲುಪಿತು. ಈ ಘಟನೆಯ ಬಗ್ಗೆ ವಾರದೊಳಗೆ ಉತ್ತರ ನೀಡುವಂತೆ ಯುವ ಕಾಂಗ್ರೆಸ್ನ ದೀಪಿಕಾ ರೆಡ್ಡಿ, ನಿಖಿಲ್ ಕೊಂಡಜ್ಜಿ, ಮಂಜು ಮಣಿ ಚೆಟ್ಟಿ, ಸಂದೀಪ್, ಗೋವರ್ಧನ್, ರವಿಕಿರಣ್ ಮತ್ತು ಯಶ್ ಗೌಡ ಅವರಿಗೆ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಗಂ ಭಂಡಾರಿ ನೋಟಿಸ್ ನೀಡಿದ್ದಾರೆ.</p>.<p>ಯುವ ಕಾಂಗ್ರೆಸ್ ಪದಾಧಿಕಾರಿಗಳ ನಡುವಿನ ಗಲಾಟೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಈ ಬಗ್ಗೆ ಪರಾಮರ್ಶೆ ನಡೆಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಅವರಿಗೆ ಸೂಚನೆ ನೀಡಿದ್ದಾರೆ. ಅದರಂತೆ, ಗಲಾಟೆಯಲ್ಲಿ ಭಾಗಿಯಾದ ಪದಾಧಿಕಾರಿಗಳನ್ನು ಕರೆಯಿಸಿಕೊಂಡು ಚಂದ್ರಶೇಖರ್ ಚರ್ಚೆ ನಡೆಸಿದ್ದಾರೆ.</p>.<p>ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಇದೇ 21ರಂದು ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯ ತಯಾರಿ ಕುರಿತು ಚರ್ಚಿಸಲು ಯುವ ಕಾಂಗ್ರೆಸ್ ರಾಜ್ಯ ಘಟಕದ ಕಾರ್ಯಕಾರಿಣಿ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಗಲಾಟೆ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಪದಾಧಿಕಾರಿಗಳನ್ನು ಜವಾಬ್ದಾರಿಗಳಿಂದ ತಾತ್ಕಾಲಿಕವಾಗಿ ಮುಕ್ತಗೊಳಿಸಿದ ವಿಚಾರಕ್ಕೆ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಮಂಜುನಾಥ ಗೌಡ ಮತ್ತು ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಬೆಂಬಲಿಗರ ನಡುವೆ ಸೋಮವಾರ ನಡೆದ ಗಲಾಟೆ ಕಾರಣಕ್ಕೆ ದೀಪಿಕಾ ರೆಡ್ಡಿ ಜತೆಗಿದ್ದ ಏಳು ಮಂದಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.</p>.<p>ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಂಜುನಾಥ ಗೌಡ ಮತ್ತು ದೀಪಿಕಾ ರೆಡ್ಡಿ ಬೆಂಬಲಿಗರ ನಡುವೆ ತಳ್ಳಾಟ-ನೂಕಾಟ ನಡೆದು ಕೈಕೈ ಮಿಲಾಯಿಸುವ ಹಂತ ತಲುಪಿತು. ಈ ಘಟನೆಯ ಬಗ್ಗೆ ವಾರದೊಳಗೆ ಉತ್ತರ ನೀಡುವಂತೆ ಯುವ ಕಾಂಗ್ರೆಸ್ನ ದೀಪಿಕಾ ರೆಡ್ಡಿ, ನಿಖಿಲ್ ಕೊಂಡಜ್ಜಿ, ಮಂಜು ಮಣಿ ಚೆಟ್ಟಿ, ಸಂದೀಪ್, ಗೋವರ್ಧನ್, ರವಿಕಿರಣ್ ಮತ್ತು ಯಶ್ ಗೌಡ ಅವರಿಗೆ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಗಂ ಭಂಡಾರಿ ನೋಟಿಸ್ ನೀಡಿದ್ದಾರೆ.</p>.<p>ಯುವ ಕಾಂಗ್ರೆಸ್ ಪದಾಧಿಕಾರಿಗಳ ನಡುವಿನ ಗಲಾಟೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಈ ಬಗ್ಗೆ ಪರಾಮರ್ಶೆ ನಡೆಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಅವರಿಗೆ ಸೂಚನೆ ನೀಡಿದ್ದಾರೆ. ಅದರಂತೆ, ಗಲಾಟೆಯಲ್ಲಿ ಭಾಗಿಯಾದ ಪದಾಧಿಕಾರಿಗಳನ್ನು ಕರೆಯಿಸಿಕೊಂಡು ಚಂದ್ರಶೇಖರ್ ಚರ್ಚೆ ನಡೆಸಿದ್ದಾರೆ.</p>.<p>ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಇದೇ 21ರಂದು ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯ ತಯಾರಿ ಕುರಿತು ಚರ್ಚಿಸಲು ಯುವ ಕಾಂಗ್ರೆಸ್ ರಾಜ್ಯ ಘಟಕದ ಕಾರ್ಯಕಾರಿಣಿ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಗಲಾಟೆ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>