<p><strong>ಬೆಂಗಳೂರು</strong>:‘ಯುವ ರಾಜಕೀಯ ಕಾರ್ಯಕರ್ತರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಯುವ ಕಾಂಗ್ರೆಸ್ ‘ರಾಷ್ಟ್ರೀಯ ಪದಾಧಿಕಾರಿಗಳು’ (ಎನ್ಒಬಿ) ಕಾರ್ಯಕ್ರಮವನ್ನು ಆಯೋಜಿಸಲಿದೆ’ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಿಗಮ್ ಬಂಡಾರಿ ತಿಳಿಸಿದರು.</p>.<p>ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಅವರು, ‘ನಮ್ಮ ಸಂವಿಧಾನ ಅಪಾಯದಲ್ಲಿದೆ. ಅದನ್ನು ಗಮನದಲ್ಲಿ ಇಟ್ಟುಕೊಂಡು ನಮ್ಮ ಹಕ್ಕುಗಳು, ಘನತೆಯ ರಕ್ಷಣೆ, ಸಂವಿಧಾನದ ಆಶಯಗಳು, ಮೌಲ್ಯಗಳ ಪ್ರತಿಪಾದನೆಗೆ ಯುವ ವರ್ಗವನ್ನು ಸಜ್ಜುಗೊಳಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ’ ಎಂದರು.</p>.<p>‘ಎಂಟು ತಿಂಗಳ ಈ ಕಾರ್ಯಕ್ರಮದ ಅವಧಿಯಲ್ಲಿ ಸಂಘಟನೆ, ಚಳವಳಿ, ಸಿದ್ಧಾಂತಗಳು, ನಾಯಕತ್ವ ಕುರಿತು ತರಬೇತಿ ನೀಡಲಾಗುವುದು’ ಎಂದರು.</p>.<p>‘35 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಸಾಮಾಜಿಕ ಅಥವಾ ರಾಜಕೀಯ ಕ್ಷೇತ್ರದಲ್ಲಿ ಕನಿಷ್ಠ ಮೂರು ವರ್ಷ ಕೆಲಸ ಮಾಡಿದ ಅನುಭವ ಇರಬೇಕು. ಯುವ ಕಾಂಗ್ರೆಸ್ ಪದಾಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು ಈ ತರಬೇತಿಯಲ್ಲಿ ಭಾಗವಹಿಸಬಹುದು’ ಎಂದೂ ಅವರು ತಿಳಿಸಿದರು.</p>.<p>‘ಆಸಕ್ತ ಯುವ ನಾಯಕರು www.iyc.in/nob-introduction ನಲ್ಲಿ ಅರ್ಜಿ ಸಲ್ಲಿಸಬಹುದು’ ಎಂದೂ ತಿಳಿಸಿದರು.</p>.<p>ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಎಸ್. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬಾಹುಬಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>:‘ಯುವ ರಾಜಕೀಯ ಕಾರ್ಯಕರ್ತರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಯುವ ಕಾಂಗ್ರೆಸ್ ‘ರಾಷ್ಟ್ರೀಯ ಪದಾಧಿಕಾರಿಗಳು’ (ಎನ್ಒಬಿ) ಕಾರ್ಯಕ್ರಮವನ್ನು ಆಯೋಜಿಸಲಿದೆ’ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಿಗಮ್ ಬಂಡಾರಿ ತಿಳಿಸಿದರು.</p>.<p>ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಅವರು, ‘ನಮ್ಮ ಸಂವಿಧಾನ ಅಪಾಯದಲ್ಲಿದೆ. ಅದನ್ನು ಗಮನದಲ್ಲಿ ಇಟ್ಟುಕೊಂಡು ನಮ್ಮ ಹಕ್ಕುಗಳು, ಘನತೆಯ ರಕ್ಷಣೆ, ಸಂವಿಧಾನದ ಆಶಯಗಳು, ಮೌಲ್ಯಗಳ ಪ್ರತಿಪಾದನೆಗೆ ಯುವ ವರ್ಗವನ್ನು ಸಜ್ಜುಗೊಳಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ’ ಎಂದರು.</p>.<p>‘ಎಂಟು ತಿಂಗಳ ಈ ಕಾರ್ಯಕ್ರಮದ ಅವಧಿಯಲ್ಲಿ ಸಂಘಟನೆ, ಚಳವಳಿ, ಸಿದ್ಧಾಂತಗಳು, ನಾಯಕತ್ವ ಕುರಿತು ತರಬೇತಿ ನೀಡಲಾಗುವುದು’ ಎಂದರು.</p>.<p>‘35 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಸಾಮಾಜಿಕ ಅಥವಾ ರಾಜಕೀಯ ಕ್ಷೇತ್ರದಲ್ಲಿ ಕನಿಷ್ಠ ಮೂರು ವರ್ಷ ಕೆಲಸ ಮಾಡಿದ ಅನುಭವ ಇರಬೇಕು. ಯುವ ಕಾಂಗ್ರೆಸ್ ಪದಾಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು ಈ ತರಬೇತಿಯಲ್ಲಿ ಭಾಗವಹಿಸಬಹುದು’ ಎಂದೂ ಅವರು ತಿಳಿಸಿದರು.</p>.<p>‘ಆಸಕ್ತ ಯುವ ನಾಯಕರು www.iyc.in/nob-introduction ನಲ್ಲಿ ಅರ್ಜಿ ಸಲ್ಲಿಸಬಹುದು’ ಎಂದೂ ತಿಳಿಸಿದರು.</p>.<p>ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಎಸ್. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬಾಹುಬಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>