ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುವ ವೇಳೆ ಅಲ್ಲಿದ್ದ ಬಿಜೆಪಿ ಕಾರ್ಯಕರ್ತರು ತೀವ್ರ ಪ್ರತಿರೋಧ ವ್ಯಕ್ತಪಡಿಸಿದರು. ಅಲ್ಲದೆ, ಕಾಂಗ್ರೆಸ್ ಕಾರ್ಯಕರ್ತರತ್ತ ನುಗ್ಗಲು ಯತ್ನಿಸಿದರು. ಆಗ ಪೊಲೀಸರು ಮಧ್ಯಪ್ರವೇಶಿಸಿ ತಡೆದರು. ಹನುಮಧ್ವಜ ಹಿಡಿದು ಕಾಂಗ್ರೆಸ್ಗೆ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು, ಮೋದಿ ಪರ ಘೋಷಣೆ ಮೊಳಗಿಸಿದರು. ಈ ವೇಳೆ ಎರಡೂ ಕಡೆಯ ಕಾರ್ಯಕರ್ತರನ್ನು ತಡೆಯಲು ಪೊಲೀಸರು ಹರಸಾಹಸಪಟ್ಟರು.