ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ʼಯುವ ನಿಧಿʼ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಶಿವಮೊಗ್ಗದಲ್ಲಿ ಚಾಲನೆ ನೀಡಿದ್ದಾರೆ. ವಿನೋಬ ನಗರದ ಫ್ರೀಡಂ ಪಾರ್ಕ್ನಲ್ಲಿ ಯೋಜನೆಗೆ ಚಾಲನೆ ನೀಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆ ವಿವಿಧ ಕಲಾ ತಂಡಗಳು ಅದ್ಧೂರಿಯಾಗಿ ಅವರನ್ನು ಬರಮಾಡಿಕೊಂಡರು.