<p><strong>ಬೆಂಗಳೂರು</strong>: ‘ಕೇಂದ್ರದ ಬೆಲೆ ಏರಿಕೆ ನೀತಿಯಿಂದಾಗಿ ಅಡುಗೆ ಅನಿಲ ಸಿಲಿಂಡರ್ ಸೇರಿದಂತೆ ದಿನಬಳಕೆ ವಸ್ತುಗಳಿಗೆ ಕೆಲವೇ ದಿನಗಳಲ್ಲಿ ‘ಝಡ್ ಪ್ಲಸ್ʼ ಭದ್ರತೆ ನೀಡಬೇಕಾದ ಪರಿಸ್ಥಿತಿ ಎದುರಾಗಲಿದೆ’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಹೆದ್ದಾರಿಗಳ ಟೋಲ್ ಶುಲ್ಕದಿಂದ ರೈಲು ಪ್ರಯಾಣ ದರದವರೆಗೆ, ಅಡುಗೆ ಅನಿಲ ಸಿಲಿಂಡರ್ನಿಂದ ದಿನಬಳಕೆ ವಸ್ತುಗಳವರೆಗೆ ಬೆಲೆ ಏರಿಕೆ ಮಾಡಿ ಜನಸಾಮಾನ್ಯನ ಪರಿಸ್ಥಿತಿಯನ್ನು ಮೋದಿ ಸರ್ಕಾರ ಜರ್ಜರಿತಗೊಳಿಸಿದೆ. ಇದು ಒಂದು ರೀತಿಯ ಕ್ರೂರ ನೀತಿ’ ಎಂದರು.</p>.<p>‘ರೈಲ್ವೆ ಹಳಿಗಳು, ಹೆದ್ದಾರಿಗಳ ಮೂಲಕ ಮೋದಿ ಸರ್ಕಾರ ದರೋಡೆ ನಡೆಸುತ್ತಿದೆ. ಜನರನ್ನು ಪಿಕ್ ಪಾಕೆಟ್ ಮಾಡುವ ಷಡ್ಯಂತ್ರವಿದು. ಈ ಕಾರಣಕ್ಕೆ ಬಿಜೆಪಿಯನ್ನು‘ಭಾರತೀಯರ ಜೇಬು ಕತ್ತರಿಸುವ ಪಕ್ಷ’ ಎಂದು ವ್ಯಾಖ್ಯಾನಿಸಬಹುದು’ ಎಂದ ಅವರು, ‘ರೈಲು ಟಿಕೆಟ್ ಏರಿಕೆಯನ್ನು ತಕ್ಷಣ ವಾಪಸ್ ಪಡೆಯಬೇಕು’ ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.</p>.<p>‘ಕೇಂದ್ರ ಸರ್ಕಾರ ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಿಸಿತ್ತು. ಜುಲೈ 1ರಿಂದ ರೈಲು ಟಿಕೆಟ್ ದರಗಳನ್ನು ಹೆಚ್ಚಿಸಿ ಸುಮಾರು ₹700 ಕೋಟಿಯಷ್ಟು ಹೊರೆಯನ್ನು ಜನರ ಮೇಲೆ ಹಾಕಲಾಗುತ್ತಿದೆ. ಈಗ ಬೆಂಗಳೂರು ಎಲಿವೇಟೆಡ್ ಕಾರಿಡಾರ್ ಟೋಲ್ ಶುಲ್ಕವನ್ನು ಹೆಚ್ಚಿಸಿ ಬರೆ ಹಾಕಿದೆ. ಬುಲೆಟ್ ಟ್ರೈನ್ ನೀಡುತ್ತೇವೆ ಎಂದಿದ್ದ ಮೋದಿ, ರೈಲುಗಳನ್ನೇ ಮಾಯ ಮಾಡಿದ್ದಾರೆ. ಜನರ ನಿರೀಕ್ಷೆಗಳನ್ನು ಹುಸಿಗೊಳಿಸಿದ್ದಾರೆ’ ಎಂದರು.</p>.<p>‘2024ರ ಏಪ್ರಿಲ್ 1ರಿಂದ 2025ರ ಮಾರ್ಚ್31ರವರೆಗೆ ರೈಲಿನಲ್ಲಿ ಪ್ರಯಾಣಿಸಿದವರ ಅಂಕಿಅಂಶಗಳನ್ನು ತೆಗೆದುಕೊಂಡರೆ, ಈ ಒಂದು ವರ್ಷದಲ್ಲಿ 715 ಕೋಟಿ ಪ್ರಯಾಣ ದಾಖಲಾಗಿದೆ. 2023-24ರಲ್ಲಿ ನೈರುತ್ಯ ರೈಲ್ವೆಯಲ್ಲಿ 2.48 ಕೋಟಿ ಜನರು ಪ್ರಯಾಣಿಸಿದ್ದಾರೆ. 2023-24ರ ಸಾಲಿನಲ್ಲಿ ₹2.56 ಲಕ್ಷ ಕೋಟಿ ವಹಿವಾಟು ನಡೆಸಿದ್ದು ₹3 ಸಾವಿರ ಕೋಟಿ ನಿವ್ವಳ ಲಾಭ ಮಾಡಿದೆ. ರೈಲು ಅಪಘಾತದಿಂದ ದೇಶದಲ್ಲಿ 2.60 ಲಕ್ಷ ಜನರು ಸಾವಿಗೀಡಾಗಿದ್ದಾರೆ. ಹಿರಿಯ ನಾಗರಿಕರಿಗಿದ್ದ ರೈಲು ಟಿಕೆಟ್ ರಿಯಾಯಿತಿಯನ್ನು ಕಿತ್ತುಕೊಳ್ಳಲಾಗಿದೆ. ಬ್ಲಾಂಕೆಟ್ ನೀಡುವುದಕ್ಕೆ ಹೆಚ್ಚುವರಿ ಹಣ ನೀಡಬೇಕಾಗಿದೆ’ ಎಂದರು.</p>.<p>‘ಕರ್ನಾಟಕದ ಜನರಿಂದ ಕಳೆದ ಐದು ವರ್ಷಗಳಲ್ಲಿ ಟೋಲ್ ಮೂಲಕ ₹10 ಸಾವಿರ ಕೋಟಿಯನ್ನು ಕೇಂದ್ರ ಸಂಗ್ರಹಿಸಿದೆ. 2024ರಲ್ಲಿ ₹4.86 ಸಾವಿರ ಕೋಟಿ ಟೋಲ್ ಅನ್ನು ಕರ್ನಾಟಕದ ಜನ ತೆತ್ತಿದ್ದಾರೆ. ಹೊಸೂರು ಟೋಲ್ ಪ್ಲಾಜಾದಲ್ಲಿ ಮತ್ತೆ ಕೇಂದ್ರ ಸರ್ಕಾರ ಟೋಲ್ ಬೆಲೆ ಹೆಚ್ಚಳ ಮಾಡಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕೇಂದ್ರದ ಬೆಲೆ ಏರಿಕೆ ನೀತಿಯಿಂದಾಗಿ ಅಡುಗೆ ಅನಿಲ ಸಿಲಿಂಡರ್ ಸೇರಿದಂತೆ ದಿನಬಳಕೆ ವಸ್ತುಗಳಿಗೆ ಕೆಲವೇ ದಿನಗಳಲ್ಲಿ ‘ಝಡ್ ಪ್ಲಸ್ʼ ಭದ್ರತೆ ನೀಡಬೇಕಾದ ಪರಿಸ್ಥಿತಿ ಎದುರಾಗಲಿದೆ’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಹೆದ್ದಾರಿಗಳ ಟೋಲ್ ಶುಲ್ಕದಿಂದ ರೈಲು ಪ್ರಯಾಣ ದರದವರೆಗೆ, ಅಡುಗೆ ಅನಿಲ ಸಿಲಿಂಡರ್ನಿಂದ ದಿನಬಳಕೆ ವಸ್ತುಗಳವರೆಗೆ ಬೆಲೆ ಏರಿಕೆ ಮಾಡಿ ಜನಸಾಮಾನ್ಯನ ಪರಿಸ್ಥಿತಿಯನ್ನು ಮೋದಿ ಸರ್ಕಾರ ಜರ್ಜರಿತಗೊಳಿಸಿದೆ. ಇದು ಒಂದು ರೀತಿಯ ಕ್ರೂರ ನೀತಿ’ ಎಂದರು.</p>.<p>‘ರೈಲ್ವೆ ಹಳಿಗಳು, ಹೆದ್ದಾರಿಗಳ ಮೂಲಕ ಮೋದಿ ಸರ್ಕಾರ ದರೋಡೆ ನಡೆಸುತ್ತಿದೆ. ಜನರನ್ನು ಪಿಕ್ ಪಾಕೆಟ್ ಮಾಡುವ ಷಡ್ಯಂತ್ರವಿದು. ಈ ಕಾರಣಕ್ಕೆ ಬಿಜೆಪಿಯನ್ನು‘ಭಾರತೀಯರ ಜೇಬು ಕತ್ತರಿಸುವ ಪಕ್ಷ’ ಎಂದು ವ್ಯಾಖ್ಯಾನಿಸಬಹುದು’ ಎಂದ ಅವರು, ‘ರೈಲು ಟಿಕೆಟ್ ಏರಿಕೆಯನ್ನು ತಕ್ಷಣ ವಾಪಸ್ ಪಡೆಯಬೇಕು’ ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.</p>.<p>‘ಕೇಂದ್ರ ಸರ್ಕಾರ ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಿಸಿತ್ತು. ಜುಲೈ 1ರಿಂದ ರೈಲು ಟಿಕೆಟ್ ದರಗಳನ್ನು ಹೆಚ್ಚಿಸಿ ಸುಮಾರು ₹700 ಕೋಟಿಯಷ್ಟು ಹೊರೆಯನ್ನು ಜನರ ಮೇಲೆ ಹಾಕಲಾಗುತ್ತಿದೆ. ಈಗ ಬೆಂಗಳೂರು ಎಲಿವೇಟೆಡ್ ಕಾರಿಡಾರ್ ಟೋಲ್ ಶುಲ್ಕವನ್ನು ಹೆಚ್ಚಿಸಿ ಬರೆ ಹಾಕಿದೆ. ಬುಲೆಟ್ ಟ್ರೈನ್ ನೀಡುತ್ತೇವೆ ಎಂದಿದ್ದ ಮೋದಿ, ರೈಲುಗಳನ್ನೇ ಮಾಯ ಮಾಡಿದ್ದಾರೆ. ಜನರ ನಿರೀಕ್ಷೆಗಳನ್ನು ಹುಸಿಗೊಳಿಸಿದ್ದಾರೆ’ ಎಂದರು.</p>.<p>‘2024ರ ಏಪ್ರಿಲ್ 1ರಿಂದ 2025ರ ಮಾರ್ಚ್31ರವರೆಗೆ ರೈಲಿನಲ್ಲಿ ಪ್ರಯಾಣಿಸಿದವರ ಅಂಕಿಅಂಶಗಳನ್ನು ತೆಗೆದುಕೊಂಡರೆ, ಈ ಒಂದು ವರ್ಷದಲ್ಲಿ 715 ಕೋಟಿ ಪ್ರಯಾಣ ದಾಖಲಾಗಿದೆ. 2023-24ರಲ್ಲಿ ನೈರುತ್ಯ ರೈಲ್ವೆಯಲ್ಲಿ 2.48 ಕೋಟಿ ಜನರು ಪ್ರಯಾಣಿಸಿದ್ದಾರೆ. 2023-24ರ ಸಾಲಿನಲ್ಲಿ ₹2.56 ಲಕ್ಷ ಕೋಟಿ ವಹಿವಾಟು ನಡೆಸಿದ್ದು ₹3 ಸಾವಿರ ಕೋಟಿ ನಿವ್ವಳ ಲಾಭ ಮಾಡಿದೆ. ರೈಲು ಅಪಘಾತದಿಂದ ದೇಶದಲ್ಲಿ 2.60 ಲಕ್ಷ ಜನರು ಸಾವಿಗೀಡಾಗಿದ್ದಾರೆ. ಹಿರಿಯ ನಾಗರಿಕರಿಗಿದ್ದ ರೈಲು ಟಿಕೆಟ್ ರಿಯಾಯಿತಿಯನ್ನು ಕಿತ್ತುಕೊಳ್ಳಲಾಗಿದೆ. ಬ್ಲಾಂಕೆಟ್ ನೀಡುವುದಕ್ಕೆ ಹೆಚ್ಚುವರಿ ಹಣ ನೀಡಬೇಕಾಗಿದೆ’ ಎಂದರು.</p>.<p>‘ಕರ್ನಾಟಕದ ಜನರಿಂದ ಕಳೆದ ಐದು ವರ್ಷಗಳಲ್ಲಿ ಟೋಲ್ ಮೂಲಕ ₹10 ಸಾವಿರ ಕೋಟಿಯನ್ನು ಕೇಂದ್ರ ಸಂಗ್ರಹಿಸಿದೆ. 2024ರಲ್ಲಿ ₹4.86 ಸಾವಿರ ಕೋಟಿ ಟೋಲ್ ಅನ್ನು ಕರ್ನಾಟಕದ ಜನ ತೆತ್ತಿದ್ದಾರೆ. ಹೊಸೂರು ಟೋಲ್ ಪ್ಲಾಜಾದಲ್ಲಿ ಮತ್ತೆ ಕೇಂದ್ರ ಸರ್ಕಾರ ಟೋಲ್ ಬೆಲೆ ಹೆಚ್ಚಳ ಮಾಡಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>