<p><strong>ಬೆಂಗಳೂರು:</strong> ‘ಅಲ್ಪಸಂಖ್ಯಾತರ ಇಲಾಖೆಯಲ್ಲಿ ಯೋಜನೆಗಳ ಕುರಿತು ಮಾಹಿತಿ ನೀಡಲು ಸ್ಥಾಪಿಸಿದ ಸಹಾಯವಾಣಿ ನಿರ್ವಹಿಸಿದ ಒಬ್ಬರಿಗೆ ತಿಂಗಳಿಗೆ ₹ 4 ಲಕ್ಷ ವೇತನ ನೀಡಿದ ಮತ್ತು ಅದರಿಂದ ಪ್ರಯೋಜನ ಆಗದಿದ್ದರೂ ಮುಂದುವರಿಸಿದ ಬಗ್ಗೆ ತನಿಖೆ ನಡೆಸಿ ವರದಿ ನೀಡಬೇಕು’ ಎಂದು ಅಧಿಕಾರಿಗಳಿಗೆ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಜೆಡ್. ಜಮೀರ್ ಅಹಮದ್ ಸೂಚನೆ ನೀಡಿದರು.</p>.<p>ಸೋಮವಾರ ಅವರು ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.</p>.<p>‘ರಾಜ್ಯದ ಮುಖ್ಯ ಕಾರ್ಯದರ್ಶಿಗೆ ನೀಡುವುದಕ್ಕಿಂತ ಮೂರು ಪಟ್ಟು ವೇತನ ನೀಡಿದ್ದು ಹೇಗೆ? ಸಹಾಯವಾಣಿ ಕೇಂದ್ರಕ್ಕೆ ವಾರ್ಷಿಕ ₹ 2.5 ಕೋಟಿ ವೆಚ್ಚ ಮಾಡುತ್ತಿದ್ದರೂ ಪ್ರತ್ಯೇಕವಾಗಿ ಸಹಾಯವಾಣಿ ವ್ಯವಸ್ಥೆಯ ಅಗತ್ಯವೇನಿತ್ತು? ಈ ಕುರಿತು ತನಿಖೆ ಮಾಡಬೇಕು’ ಎಂದೂ ಸಚಿವರು ತಿಳಿಸಿದರು.</p>.<p>ಅಲ್ಪಸಂಖ್ಯಾತ ಕಾಲೊನಿ ಅಭಿವೃದ್ಧಿ ಯೋಜನೆಯಲ್ಲಿ ಐದು ವರ್ಷಗಳಲ್ಲಿ ಕೈಗೊಂಡಿರುವ ಕಾಮಗಾರಿಗಳ ಗುತ್ತಿಗೆದಾರರಿಗೆ ಪಾವತಿಸಿದ ಮೊತ್ತದ ಮಾಹಿತಿ ನೀಡುವಂತೆ ಸೂಚಿಸಿದ ಸಚಿವರು, ಕಾಲೊನಿಗಳ ಅಭಿವೃದ್ಧಿ ಪ್ರಸ್ತಾವನೆ ಬಂದರೆ ಸ್ಥಳಕ್ಕೆ ತೆರಳಿ ವರದಿ ಕೊಡಲು ತಜ್ಞರ ತಂಡ ರಚಿಸುವಂತೆ ಸೂಚಿಸಿದರು.</p>.<p>ಬಾಡಿಗೆ ಕಟ್ಟಡದಲ್ಲಿರುವ 29 ಅಲ್ಪಸಂಖ್ಯಾತ ವಸತಿ ಶಾಲಾ ಕಾಲೇಜುಗಳು ಒಂದು ವರ್ಷದಲ್ಲಿ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸಬೇಕು. ವಿದ್ಯಾಸಿರಿ ಯೋಜನೆಯಡಿಯಲ್ಲಿ ಹಾಸ್ಟೆಲ್ ವ್ಯವಸ್ಥೆ ಸಿಗದ 18,800 ವಿದ್ಯಾರ್ಥಿಗಳಿಗೆ ವಾರ್ಷಿಕ ₹ 27 ಕೋಟಿ ಪಾವತಿಸುತ್ತಿದ್ದು, ಅದನ್ನು ತಪ್ಪಿಸಲು ಹೊಸ ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೆ ಜಮೀನು ಗುರುತಿಸಬೇಕು ಎಂದೂ ನಿರ್ದೇಶನ ನೀಡಿದರು.</p>.<p>‘ಸಮುದಾಯ ಭವನ ನವೀಕರಣ, ಹೊಸ ಸಮುದಾಯ ಭವನ ನಿರ್ಮಾಣ ಸೇರಿ ಯಾವುದೇ ಕಾಮಗಾರಿಗಳಲ್ಲಿ ದುರುಪಯೋಗ, ಲೋಪ ಕಂಡುಬಂದರೆ ಕ್ರಮ ಖಚಿತ’ ಎಂದು ಎಚ್ಚರಿಕೆ ನೀಡಿದರು.</p>.<p>ಅಪೂರ್ಣಗೊಂಡಿರುವ 126 ಶಾದಿ ಮಹಲ್ಗಳ ಕಾಮಗಾರಿ ಪೂರ್ಣಗೊಳಿಸಲು ₹ 56 ಕೋಟಿ ಅಗತ್ಯವಿದ್ದು, ಹೊಸದಾಗಿ ಶಾದಿ ಮಹಲ್ ನಿರ್ಮಾಣಕ್ಕೂ ಬೇಡಿಕೆಯಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<p>ಇಲಾಖೆಯ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶಕ ರಾಘವೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಅಲ್ಪಸಂಖ್ಯಾತರ ಇಲಾಖೆಯಲ್ಲಿ ಯೋಜನೆಗಳ ಕುರಿತು ಮಾಹಿತಿ ನೀಡಲು ಸ್ಥಾಪಿಸಿದ ಸಹಾಯವಾಣಿ ನಿರ್ವಹಿಸಿದ ಒಬ್ಬರಿಗೆ ತಿಂಗಳಿಗೆ ₹ 4 ಲಕ್ಷ ವೇತನ ನೀಡಿದ ಮತ್ತು ಅದರಿಂದ ಪ್ರಯೋಜನ ಆಗದಿದ್ದರೂ ಮುಂದುವರಿಸಿದ ಬಗ್ಗೆ ತನಿಖೆ ನಡೆಸಿ ವರದಿ ನೀಡಬೇಕು’ ಎಂದು ಅಧಿಕಾರಿಗಳಿಗೆ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಜೆಡ್. ಜಮೀರ್ ಅಹಮದ್ ಸೂಚನೆ ನೀಡಿದರು.</p>.<p>ಸೋಮವಾರ ಅವರು ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.</p>.<p>‘ರಾಜ್ಯದ ಮುಖ್ಯ ಕಾರ್ಯದರ್ಶಿಗೆ ನೀಡುವುದಕ್ಕಿಂತ ಮೂರು ಪಟ್ಟು ವೇತನ ನೀಡಿದ್ದು ಹೇಗೆ? ಸಹಾಯವಾಣಿ ಕೇಂದ್ರಕ್ಕೆ ವಾರ್ಷಿಕ ₹ 2.5 ಕೋಟಿ ವೆಚ್ಚ ಮಾಡುತ್ತಿದ್ದರೂ ಪ್ರತ್ಯೇಕವಾಗಿ ಸಹಾಯವಾಣಿ ವ್ಯವಸ್ಥೆಯ ಅಗತ್ಯವೇನಿತ್ತು? ಈ ಕುರಿತು ತನಿಖೆ ಮಾಡಬೇಕು’ ಎಂದೂ ಸಚಿವರು ತಿಳಿಸಿದರು.</p>.<p>ಅಲ್ಪಸಂಖ್ಯಾತ ಕಾಲೊನಿ ಅಭಿವೃದ್ಧಿ ಯೋಜನೆಯಲ್ಲಿ ಐದು ವರ್ಷಗಳಲ್ಲಿ ಕೈಗೊಂಡಿರುವ ಕಾಮಗಾರಿಗಳ ಗುತ್ತಿಗೆದಾರರಿಗೆ ಪಾವತಿಸಿದ ಮೊತ್ತದ ಮಾಹಿತಿ ನೀಡುವಂತೆ ಸೂಚಿಸಿದ ಸಚಿವರು, ಕಾಲೊನಿಗಳ ಅಭಿವೃದ್ಧಿ ಪ್ರಸ್ತಾವನೆ ಬಂದರೆ ಸ್ಥಳಕ್ಕೆ ತೆರಳಿ ವರದಿ ಕೊಡಲು ತಜ್ಞರ ತಂಡ ರಚಿಸುವಂತೆ ಸೂಚಿಸಿದರು.</p>.<p>ಬಾಡಿಗೆ ಕಟ್ಟಡದಲ್ಲಿರುವ 29 ಅಲ್ಪಸಂಖ್ಯಾತ ವಸತಿ ಶಾಲಾ ಕಾಲೇಜುಗಳು ಒಂದು ವರ್ಷದಲ್ಲಿ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸಬೇಕು. ವಿದ್ಯಾಸಿರಿ ಯೋಜನೆಯಡಿಯಲ್ಲಿ ಹಾಸ್ಟೆಲ್ ವ್ಯವಸ್ಥೆ ಸಿಗದ 18,800 ವಿದ್ಯಾರ್ಥಿಗಳಿಗೆ ವಾರ್ಷಿಕ ₹ 27 ಕೋಟಿ ಪಾವತಿಸುತ್ತಿದ್ದು, ಅದನ್ನು ತಪ್ಪಿಸಲು ಹೊಸ ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೆ ಜಮೀನು ಗುರುತಿಸಬೇಕು ಎಂದೂ ನಿರ್ದೇಶನ ನೀಡಿದರು.</p>.<p>‘ಸಮುದಾಯ ಭವನ ನವೀಕರಣ, ಹೊಸ ಸಮುದಾಯ ಭವನ ನಿರ್ಮಾಣ ಸೇರಿ ಯಾವುದೇ ಕಾಮಗಾರಿಗಳಲ್ಲಿ ದುರುಪಯೋಗ, ಲೋಪ ಕಂಡುಬಂದರೆ ಕ್ರಮ ಖಚಿತ’ ಎಂದು ಎಚ್ಚರಿಕೆ ನೀಡಿದರು.</p>.<p>ಅಪೂರ್ಣಗೊಂಡಿರುವ 126 ಶಾದಿ ಮಹಲ್ಗಳ ಕಾಮಗಾರಿ ಪೂರ್ಣಗೊಳಿಸಲು ₹ 56 ಕೋಟಿ ಅಗತ್ಯವಿದ್ದು, ಹೊಸದಾಗಿ ಶಾದಿ ಮಹಲ್ ನಿರ್ಮಾಣಕ್ಕೂ ಬೇಡಿಕೆಯಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<p>ಇಲಾಖೆಯ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶಕ ರಾಘವೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>