ಮಹಾಲಕ್ಷ್ಮಿ ಎಸ್ಟೇಟ್ಸ್ ಸಂಸ್ಥೆ ಮೂಲಕ ನಿವೇಶನ ನೀಡುವುದಾಗಿ ನಂಬಿಸಿ ಪ್ರಶಾಂತ ಐಹೊಳೆ ₹2ಲಕ್ಷ ಪಡೆದಿದ್ದರು. ನಿವೇಶನ ನೀಡದೇ, ಹಣ ಕೂಡ ವಾಪಸ್ ಕೊಡದೇ ವಂಚಿಸಿದ್ದಾರೆ ಎಂದು ಅಥಣಿಯ ಸಂಜಯ ಸಂಕಪಾಲಕರ್ ಏ. 27ರಂದು ಅಥಣಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಮೇ 17ರಂದು ಪ್ರಶಾಂತ ಐಹೊಳೆ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.