<p><strong>ದಾವಣಗೆರೆ:</strong> ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕೆ.ಆರ್. ಜಯಶೀಲಾ ಅವರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಎಸ್. ಅಶ್ವತಿ ಹಾಗೂ ಉಪ ಕಾರ್ಯದರ್ಶಿ (ಡಿಎಸ್) ಜಿ.ಎಸ್. ಷಡಕ್ಷರಪ್ಪ ವಿರುದ್ಧ ಗುರುತರ ಆರೋಪ ಮಾಡಿದ್ದಾರೆ. ಈ ಇಬ್ಬರೂ ಅಧಿಕಾರಿಗಳು ಜಿಲ್ಲಾ ಪಂಚಾಯಿತಿ ಆಡಳಿತದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರಗಳನ್ನು ನಡೆಸಿದ್ದು, ತನಿಖೆ ಕೈಗೊಳ್ಳುವಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಕ್ಕೆ ದೂರು ಸಲ್ಲಿಸಲು ತೀರ್ಮಾನಿಸಿದ್ದಾರೆ.</p>.<p>ಕೆಳಹಂತದ ಅಧಿಕಾರಿಗಳ ಮೇಲೆ ದೂರು ಬಂದಾಗ ಅವರಿಂದ ಲಂಚ ಪಡೆದು 182ಕ್ಕೂ ಹೆಚ್ಚು ಪ್ರಕರಣಗಳನ್ನು ಮುಚ್ಚಿಹಾಕಿದ್ದಾರೆ. ಭ್ರಷ್ಟಾಚಾರ, ಸ್ವಜನಪಕ್ಷಪಾತಗಳಲ್ಲಿ ಮುಳುಗಿರುವ ಈ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಅವರಿಗೂ ದೂರು ಸಲ್ಲಿಸಲಾಗುವುದು ಎಂದು ಅಧ್ಯಕ್ಷೆ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಇವರಿಬ್ಬರೂ ಮುಚ್ಚಿಹಾಕಿರುವ ಪ್ರಕರಣಗಳನ್ನು ಮರು ತನಿಖೆಗೆ ಒಳಪಡಿಸಬೇಕು. ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೇ, ತಕ್ಷಣ ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಅಶ್ವತಿ ಅವರಿಗೆ ಅಧಿಕಾರದ ಅನುಭವ ಇಲ್ಲ. ಷಡಕ್ಷರಪ್ಪ ಅವರ ಕೈಗೊಂಬೆಯಾಗಿದ್ದಾರೆ. ಕೆಲಸ ಮಾಡಬೇಕೆಂಬ ಆಸಕ್ತಿ ಇಲ್ಲ. ಸದಾ ರಜೆ ಮೇಲೆ ಇರುತ್ತಾರೆ. ಬೆಂಗಳೂರಿನ ಐಷಾರಾಮಿ ಹೋಟೆಲ್ಗಳಲ್ಲಿ ಪಾರ್ಟಿ ನಡೆಸುತ್ತಿದ್ದಾರೆ. ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಗಳ ಸುರಿಮಳೆಗೈದರು.</p>.<p>ಷಡಕ್ಷರಪ್ಪ ಉಪ ಕಾರ್ಯದರ್ಶಿಯಾಗಿ ಹಾಗೂ ಯೋಜನಾ ನಿರ್ದೇಶಕರಾಗಿ ಸುಮಾರು 15 ವರ್ಷಗಳಿಂದ ಜಿಲ್ಲೆಯಲ್ಲೇ ಠಿಕಾಣಿ ಹೂಡಿದ್ದಾರೆ. ಇವರಿಗೆ ಯಾರ ಅಭಯಹಸ್ತ ಇದೆ ಎಂಬುದು ತಿಳಿಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಹಾಗೂ ಕಾರಿಗನೂರು ಗ್ರಾಮ ಪಂಚಾಯಿತಿಗಳಲ್ಲಿ ನಿಯಮಬಾಹಿರವಾಗಿ ಒಬ್ಬರೇ ಗುತ್ತಿಗೆದಾರರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಯಂತ್ರ ಒದಗಿಸಲು ಒಂದೇ ವರ್ಷದಲ್ಲಿ ₹ 1.12 ಕೋಟಿ ಸಂದಾಯ ಮಾಡಿದ್ದಾರೆ. ಕಾನೂನು ಪ್ರಕಾರ ಒಬ್ಬ ಗುತ್ತಿಗೆದಾರನಿಗೆ ಒಂದು ವರ್ಷಕ್ಕೆ ₹ 35 ಲಕ್ಷ ಮಾತ್ರ ಅನುದಾನ ನೀಡಲು ಅವಕಾಶ ಇದೆ. ಅಲ್ಲದೇ, ಹರಪನಹಳ್ಳಿಯ ಅರಣ್ಯ ಇಲಾಖೆಯಲ್ಲಿ ಡಿಟಿಪಿ ಅಂಗಡಿಯ ದೇವರಾಜ್ ನಾಯ್ಕ ಎಂಬುವವರ ಬ್ಯಾಂಕ್ ಖಾತೆಗೆ ₹ 2.90 ಕೋಟಿ ಸಂದಾಯವಾಗಿದೆ. ಇವು ಕೆಲವು ಉದಾಹರಣೆಗಳಷ್ಟೇ; ಇಂತಹ ಹಲವು ಪ್ರಕರಣಗಳಲ್ಲಿ ಇವರಿಬ್ಬರೂ ಲೋಪ ಎಸಗಿದ್ದಾರೆ. ಇದಕ್ಕೆ ದಾಖಲೆಗಳು ಇವೆ ಎಂದು ಪ್ರದರ್ಶಿಸಿದರು.</p>.<p><strong>₹ 4 ಕೋಟಿ ಶಾಸನಬದ್ಧ ಅನುದಾನ</strong></p>.<p>‘ನನ್ನ ನಾಲ್ಕು ತಿಂಗಳ ಅಧಿಕಾರಾವಧಿಯಲ್ಲಿ ಅನುದಾನಕ್ಕಾಗಿ ಸರ್ಕಾರಕ್ಕೆ ಸಾಕಷ್ಟು ಸಲ ಪತ್ರ ಬರೆದಿದ್ದೇನೆ. ಜಿಲ್ಲಾ ಪಂಚಾಯಿತಿ ಶಾನಸಬದ್ಧ ಅನುದಾನ ₹ 4 ಕೋಟಿ ಅಷ್ಟೇ ಬಂದಿದೆ. ಅದನ್ನು ಜಿಲ್ಲಾ ಪಂಚಾಯಿತಿ ಸದಸ್ಯರಿಗೆ ಹಂಚಿಕೆ ಮಾಡಲಾಗಿದೆ’ ಎಂದು ಅಧ್ಯಕ್ಷರು ಹೇಳಿದರು.</p>.<p>ಜಿಲ್ಲೆಯಲ್ಲಿ ನಾಲ್ಕು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದರೂ ಜಿಲ್ಲೆಯ ಹರಪನಹಳ್ಳಿ, ಹರಿಹರ ತಾಲ್ಲೂಕುಗಳಿಗೆ ತಲಾ ₹ 50 ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು.</p>.<p>* ಅಕ್ರಮ ಎಸಗಿದ ಸಿಇಒ, ಡಿಎಸ್ ವಿರುದ್ಧ ಇಂದು ದಾವಣಗೆರೆ ಲೋಕಾಯುಕ್ತ ಕಚೇರಿಗೆ ತೆರಳಿ ದೂರು ಸಲ್ಲಿಸುತ್ತೇನೆ.<br />–ಕೆ.ಆರ್. ಜಯಶೀಲಾ, ಅಧ್ಯಕ್ಷೆ, ಜಿ.ಪಂ.</p>.<p>* ಅಧ್ಯಕ್ಷರ ಆರೋಪ ಗೊತ್ತಿಲ್ಲ. ಸದ್ಯಕ್ಕೆ ಆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ನಾನು ಏನೇ ಮಾಡಿದ್ದರೂ ಅದನ್ನು ಕಾನೂನು ಪ್ರಕಾರವೇ ಮಾಡಿರುತ್ತೇನೆ.<br />–ಎಸ್. ಅಶ್ವತಿ, ಸಿಇಒ, ಜಿ.ಪಂ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕೆ.ಆರ್. ಜಯಶೀಲಾ ಅವರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಎಸ್. ಅಶ್ವತಿ ಹಾಗೂ ಉಪ ಕಾರ್ಯದರ್ಶಿ (ಡಿಎಸ್) ಜಿ.ಎಸ್. ಷಡಕ್ಷರಪ್ಪ ವಿರುದ್ಧ ಗುರುತರ ಆರೋಪ ಮಾಡಿದ್ದಾರೆ. ಈ ಇಬ್ಬರೂ ಅಧಿಕಾರಿಗಳು ಜಿಲ್ಲಾ ಪಂಚಾಯಿತಿ ಆಡಳಿತದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರಗಳನ್ನು ನಡೆಸಿದ್ದು, ತನಿಖೆ ಕೈಗೊಳ್ಳುವಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಕ್ಕೆ ದೂರು ಸಲ್ಲಿಸಲು ತೀರ್ಮಾನಿಸಿದ್ದಾರೆ.</p>.<p>ಕೆಳಹಂತದ ಅಧಿಕಾರಿಗಳ ಮೇಲೆ ದೂರು ಬಂದಾಗ ಅವರಿಂದ ಲಂಚ ಪಡೆದು 182ಕ್ಕೂ ಹೆಚ್ಚು ಪ್ರಕರಣಗಳನ್ನು ಮುಚ್ಚಿಹಾಕಿದ್ದಾರೆ. ಭ್ರಷ್ಟಾಚಾರ, ಸ್ವಜನಪಕ್ಷಪಾತಗಳಲ್ಲಿ ಮುಳುಗಿರುವ ಈ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಅವರಿಗೂ ದೂರು ಸಲ್ಲಿಸಲಾಗುವುದು ಎಂದು ಅಧ್ಯಕ್ಷೆ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಇವರಿಬ್ಬರೂ ಮುಚ್ಚಿಹಾಕಿರುವ ಪ್ರಕರಣಗಳನ್ನು ಮರು ತನಿಖೆಗೆ ಒಳಪಡಿಸಬೇಕು. ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೇ, ತಕ್ಷಣ ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಅಶ್ವತಿ ಅವರಿಗೆ ಅಧಿಕಾರದ ಅನುಭವ ಇಲ್ಲ. ಷಡಕ್ಷರಪ್ಪ ಅವರ ಕೈಗೊಂಬೆಯಾಗಿದ್ದಾರೆ. ಕೆಲಸ ಮಾಡಬೇಕೆಂಬ ಆಸಕ್ತಿ ಇಲ್ಲ. ಸದಾ ರಜೆ ಮೇಲೆ ಇರುತ್ತಾರೆ. ಬೆಂಗಳೂರಿನ ಐಷಾರಾಮಿ ಹೋಟೆಲ್ಗಳಲ್ಲಿ ಪಾರ್ಟಿ ನಡೆಸುತ್ತಿದ್ದಾರೆ. ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಗಳ ಸುರಿಮಳೆಗೈದರು.</p>.<p>ಷಡಕ್ಷರಪ್ಪ ಉಪ ಕಾರ್ಯದರ್ಶಿಯಾಗಿ ಹಾಗೂ ಯೋಜನಾ ನಿರ್ದೇಶಕರಾಗಿ ಸುಮಾರು 15 ವರ್ಷಗಳಿಂದ ಜಿಲ್ಲೆಯಲ್ಲೇ ಠಿಕಾಣಿ ಹೂಡಿದ್ದಾರೆ. ಇವರಿಗೆ ಯಾರ ಅಭಯಹಸ್ತ ಇದೆ ಎಂಬುದು ತಿಳಿಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಹಾಗೂ ಕಾರಿಗನೂರು ಗ್ರಾಮ ಪಂಚಾಯಿತಿಗಳಲ್ಲಿ ನಿಯಮಬಾಹಿರವಾಗಿ ಒಬ್ಬರೇ ಗುತ್ತಿಗೆದಾರರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಯಂತ್ರ ಒದಗಿಸಲು ಒಂದೇ ವರ್ಷದಲ್ಲಿ ₹ 1.12 ಕೋಟಿ ಸಂದಾಯ ಮಾಡಿದ್ದಾರೆ. ಕಾನೂನು ಪ್ರಕಾರ ಒಬ್ಬ ಗುತ್ತಿಗೆದಾರನಿಗೆ ಒಂದು ವರ್ಷಕ್ಕೆ ₹ 35 ಲಕ್ಷ ಮಾತ್ರ ಅನುದಾನ ನೀಡಲು ಅವಕಾಶ ಇದೆ. ಅಲ್ಲದೇ, ಹರಪನಹಳ್ಳಿಯ ಅರಣ್ಯ ಇಲಾಖೆಯಲ್ಲಿ ಡಿಟಿಪಿ ಅಂಗಡಿಯ ದೇವರಾಜ್ ನಾಯ್ಕ ಎಂಬುವವರ ಬ್ಯಾಂಕ್ ಖಾತೆಗೆ ₹ 2.90 ಕೋಟಿ ಸಂದಾಯವಾಗಿದೆ. ಇವು ಕೆಲವು ಉದಾಹರಣೆಗಳಷ್ಟೇ; ಇಂತಹ ಹಲವು ಪ್ರಕರಣಗಳಲ್ಲಿ ಇವರಿಬ್ಬರೂ ಲೋಪ ಎಸಗಿದ್ದಾರೆ. ಇದಕ್ಕೆ ದಾಖಲೆಗಳು ಇವೆ ಎಂದು ಪ್ರದರ್ಶಿಸಿದರು.</p>.<p><strong>₹ 4 ಕೋಟಿ ಶಾಸನಬದ್ಧ ಅನುದಾನ</strong></p>.<p>‘ನನ್ನ ನಾಲ್ಕು ತಿಂಗಳ ಅಧಿಕಾರಾವಧಿಯಲ್ಲಿ ಅನುದಾನಕ್ಕಾಗಿ ಸರ್ಕಾರಕ್ಕೆ ಸಾಕಷ್ಟು ಸಲ ಪತ್ರ ಬರೆದಿದ್ದೇನೆ. ಜಿಲ್ಲಾ ಪಂಚಾಯಿತಿ ಶಾನಸಬದ್ಧ ಅನುದಾನ ₹ 4 ಕೋಟಿ ಅಷ್ಟೇ ಬಂದಿದೆ. ಅದನ್ನು ಜಿಲ್ಲಾ ಪಂಚಾಯಿತಿ ಸದಸ್ಯರಿಗೆ ಹಂಚಿಕೆ ಮಾಡಲಾಗಿದೆ’ ಎಂದು ಅಧ್ಯಕ್ಷರು ಹೇಳಿದರು.</p>.<p>ಜಿಲ್ಲೆಯಲ್ಲಿ ನಾಲ್ಕು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದರೂ ಜಿಲ್ಲೆಯ ಹರಪನಹಳ್ಳಿ, ಹರಿಹರ ತಾಲ್ಲೂಕುಗಳಿಗೆ ತಲಾ ₹ 50 ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು.</p>.<p>* ಅಕ್ರಮ ಎಸಗಿದ ಸಿಇಒ, ಡಿಎಸ್ ವಿರುದ್ಧ ಇಂದು ದಾವಣಗೆರೆ ಲೋಕಾಯುಕ್ತ ಕಚೇರಿಗೆ ತೆರಳಿ ದೂರು ಸಲ್ಲಿಸುತ್ತೇನೆ.<br />–ಕೆ.ಆರ್. ಜಯಶೀಲಾ, ಅಧ್ಯಕ್ಷೆ, ಜಿ.ಪಂ.</p>.<p>* ಅಧ್ಯಕ್ಷರ ಆರೋಪ ಗೊತ್ತಿಲ್ಲ. ಸದ್ಯಕ್ಕೆ ಆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ನಾನು ಏನೇ ಮಾಡಿದ್ದರೂ ಅದನ್ನು ಕಾನೂನು ಪ್ರಕಾರವೇ ಮಾಡಿರುತ್ತೇನೆ.<br />–ಎಸ್. ಅಶ್ವತಿ, ಸಿಇಒ, ಜಿ.ಪಂ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>