<p><strong>ಬೆಂಗಳೂರು: </strong>ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಜಾಲತಾಣ (www. karnatakasangeetanrityaacademy.org) ವನ್ನು ನಗರದ ಕನ್ನಡಭವನದಲ್ಲಿರುವ ಅಕಾಡೆಮಿ ಕಾರ್ಯಾಲಯದಲ್ಲಿ ಸೋಮವಾರ ಬಿಡುಗಡೆ ಮಾಡಲಾಯಿತು.<br /> <br /> `ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಸುಗಮ ಸಂಗೀತ, ನೃತ್ಯ, ಕಥಾಕೀರ್ತನೆ ಹಾಗೂ ಗಮಕ ಕಲೆಗಳಿಗೆ ಸಂಬಂಧಿಸಿದಂತೆ ಅಕಾಡೆಮಿ ನಡೆಸಿದ ಚಟುವಟಿಕೆಗಳನ್ನು ಛಾಯಾಚಿತ್ರ, ವಿಡಿಯೋ ಚಿತ್ರ ಹಾಗೂ ಅಕ್ಷರರೂಪದಲ್ಲಿ ದಾಖಲಿಸಲಾಗಿದೆ. ಇದೀಗ ವೆಬ್ಸೈಟ್ ಮೂಲಕ ಅಕಾಡೆಮಿಯ ಚಟುವಟಿಕೆಗಳನ್ನು ಹೆಚ್ಚು ವ್ಯಾಪಕಗೊಳಿಸಲು ಉದ್ದೇಶಿಸಲಾಗಿದೆ~ ಎಂದು ಅಕಾಡೆಮಿಯ ಅಧ್ಯಕ್ಷೆ ವೈಜಯಂತಿ ಕಾಶಿ ತಿಳಿಸಿದರು. <br /> <br /> `ಹೊಸ ತಂತ್ರಜ್ಞಾನಗಳನ್ನು ಬಳಸಿ ಕಲಾವಿದರ ಸಾಧನೆಗಳ ದಾಖಲೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯದ ನಾನಾಭಾಗದ ಕಲಾವಿದರನ್ನು ಗುರುತಿಸಿ ವೆಬ್ಸೈಟ್ನಲ್ಲಿ ಅವರ ಪರಿಚಯ ಹಾಕಲಾಗುವುದು. ಎಲ್ಲ ಕಲಾ ಪ್ರಕಾರಗಳಿಗೂ ಸಾಮಾಜಿಕ ನ್ಯಾಯ ಒದಗಿಸುವುದು ಅಕಾಡೆಮಿಯ ಗುರಿ. ಯುವ ಕಲಾವಿದರಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು~ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಜಾಲತಾಣ (www. karnatakasangeetanrityaacademy.org) ವನ್ನು ನಗರದ ಕನ್ನಡಭವನದಲ್ಲಿರುವ ಅಕಾಡೆಮಿ ಕಾರ್ಯಾಲಯದಲ್ಲಿ ಸೋಮವಾರ ಬಿಡುಗಡೆ ಮಾಡಲಾಯಿತು.<br /> <br /> `ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಸುಗಮ ಸಂಗೀತ, ನೃತ್ಯ, ಕಥಾಕೀರ್ತನೆ ಹಾಗೂ ಗಮಕ ಕಲೆಗಳಿಗೆ ಸಂಬಂಧಿಸಿದಂತೆ ಅಕಾಡೆಮಿ ನಡೆಸಿದ ಚಟುವಟಿಕೆಗಳನ್ನು ಛಾಯಾಚಿತ್ರ, ವಿಡಿಯೋ ಚಿತ್ರ ಹಾಗೂ ಅಕ್ಷರರೂಪದಲ್ಲಿ ದಾಖಲಿಸಲಾಗಿದೆ. ಇದೀಗ ವೆಬ್ಸೈಟ್ ಮೂಲಕ ಅಕಾಡೆಮಿಯ ಚಟುವಟಿಕೆಗಳನ್ನು ಹೆಚ್ಚು ವ್ಯಾಪಕಗೊಳಿಸಲು ಉದ್ದೇಶಿಸಲಾಗಿದೆ~ ಎಂದು ಅಕಾಡೆಮಿಯ ಅಧ್ಯಕ್ಷೆ ವೈಜಯಂತಿ ಕಾಶಿ ತಿಳಿಸಿದರು. <br /> <br /> `ಹೊಸ ತಂತ್ರಜ್ಞಾನಗಳನ್ನು ಬಳಸಿ ಕಲಾವಿದರ ಸಾಧನೆಗಳ ದಾಖಲೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯದ ನಾನಾಭಾಗದ ಕಲಾವಿದರನ್ನು ಗುರುತಿಸಿ ವೆಬ್ಸೈಟ್ನಲ್ಲಿ ಅವರ ಪರಿಚಯ ಹಾಕಲಾಗುವುದು. ಎಲ್ಲ ಕಲಾ ಪ್ರಕಾರಗಳಿಗೂ ಸಾಮಾಜಿಕ ನ್ಯಾಯ ಒದಗಿಸುವುದು ಅಕಾಡೆಮಿಯ ಗುರಿ. ಯುವ ಕಲಾವಿದರಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು~ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>