ಮೋದಿ ಆರೋಪಕ್ಕೆ ಟ್ವಿಟರ್ನಲ್ಲಿ ತಿರುಗೇಟು ನೀಡಿರುವ ಸಿದ್ದರಾಮಯ್ಯ, ‘ಅಭಿವೃದ್ಧಿ ಕಾರ್ಯ ನಡೆಸುವ ಬದಲು ರಾಜ್ಯ ಸರ್ಕಾರ ಹಣ ಲೂಟಿ ಮಾಡುತ್ತಿದೆ ಎಂದು ಮೋದಿ ಆರೋಪಿಸಿದ್ದಾರೆ. ಇದಕ್ಕೆ ಆಧಾರವೇನು? ಪ್ರಧಾನಿಯವರ ಇಂಥ ಹೇಳಿಕೆಗಳನ್ನು ಯಾರಾದರೂ ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿದೆಯೇ’ ಎಂದು ಪ್ರಶ್ನಿಸಿದ್ದಾರೆ.