ಹಂಚಿಕೆಯಾದ ನಂತರ ಉಳಿಯುವ ನೀರಿನ ಮೇಲೆ ಈ ಮುಂಚೆ ರಾಜ್ಯಕ್ಕೆ ಅಧಿಕಾರ ಇರಲಿಲ್ಲ. ಆದರೆ, ಈಗ ಉಳಿಕೆ ನೀರು ರಾಜ್ಯಕ್ಕೆ ದೊರೆಯಲಿದೆ ಎಂದು ಸಚಿವ ಎಚ್.ಕೆ. ಪಾಟೀಲ ತಿಳಿಸಿದರು. ಐತೀರ್ಪಿನಿಂದ ರಾಜ್ಯಕ್ಕೆ ಅನು ಕೂಲವಾಗಿದೆ ಎಂದು ಕೆಲವರು ಹೇಳು ತ್ತಾರೆ, ಅನುಕೂಲಕ್ಕಿಂತ ಅನಾನು ಕೂಲವೇ ಜಾಸ್ತಿ ಎಂದು ಇನ್ನೂ ಕೆಲವರು ಹೇಳುತ್ತಾರೆ. ಆದ್ದರಿಂದ ಈ ಬಗ್ಗೆ ಚರ್ಚೆಯಾಗಬೇಕು ಎಂದು ವಿರೋಧ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದರು.
ಆಲಮಟ್ಟಿ ಜಲಾಶಯದ ಮಟ್ಟವನ್ನು ೫೨೪.೨೫೬ ಮೀಟರ್ ಎತ್ತರಕ್ಕೆ ಏರಿ ಸುವುದನ್ನು ಪುನರುಚ್ಚರಿಸಿರು ವುದು ಬಿಟ್ಟರೆ ಉಳಿ ದಂತೆ ಯಾವುದೇ ಅನುಕೂಲ ಆಗಿಲ್ಲ. ಆದ್ದರಿಂದ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸು ವುದು ಸೂಕ್ತ ಎಂದು ಕೆಜೆಪಿಯ ಬಿ.ಎಸ್. ಯಡಿಯೂರಪ್ಪ ಸಲಹೆ ಮಾಡಿದರು. ಸುಪ್ರೀಂ ಕೋರ್ಟ್ ಮೊರೆ ಹೋಗಲು ಆಂಧ್ರಪ್ರದೇಶ ಈಗಾಗಲೇ ಸಿದ್ಧತೆ ಮಾಡಿಕೊಂಡಿದೆ. ರಾಜ್ಯ ಸರ್ಕಾರ ಈ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿ ಬೇಗ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಬಿಜೆಪಿಯ ಬಸವರಾಜ ಬೊಮ್ಮಾಯಿ ಸಲಹೆ ಮಾಡಿದರು.