<p>ಬೆಂಗಳೂರು: ಎಲ್.ಕೆ. ಅಡ್ವಾಣಿ ಅವರ `ಜನಚೇತನ ಯಾತ್ರೆ~ಯ ಅಂಗವಾಗಿ ಬೆಂಗಳೂರಿನಲ್ಲಿ ಸಾರ್ವಜನಿಕ ಸಮಾವೇಶ ನಡೆಯುವುದು ಖಚಿತ ಎಂದು ಸ್ಪಷ್ಟನೆ ನೀಡಿರುವ ಬಿಜೆಪಿ ರಾಜ್ಯ ಘಟಕ, ಸಮಾವೇಶದ ಸಿದ್ಧತೆಗಾಗಿ ಸೋಮವಾರ ಸರಣಿ ಸಭೆಗಳನ್ನು ನಡೆಸಿತು.<br /> <br /> ಮಲ್ಲೇಶ್ವರದಲ್ಲಿರುವ ಪಕ್ಷದ ರಾಜ್ಯ ಕಚೇರಿ `ಜಗನ್ನಾಥ ಭವನ~ದಲ್ಲಿ ನಡೆದ ಸಭೆಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ, `ಜನಚೇತನ ಯಾತ್ರೆ~ಯ ಬೆಂಗಳೂರು ಕಾರ್ಯಕ್ರಮದ ಉಸ್ತುವಾರಿ ಹೊತ್ತಿರುವ ಹುಬ್ಬಳ್ಳಿ-ಧಾರವಾಡ ಸಂಸದ ಪ್ರಹ್ಲಾದ ಜೋಷಿ ಮತ್ತಿತರರು ಪಾಲ್ಗೊಂಡಿದ್ದರು.<br /> <br /> ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಸದಸ್ಯರು, ಶಾಸಕರು, ಸಂಸದರಿಗಾಗಿ ಪ್ರತ್ಯೇಕ ಸಭೆಗಳನ್ನು ನಡೆಸಲಾಯಿತು. ಆದರೆ ಗೃಹ ಮತ್ತು ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಆರ್. ಅಶೋಕ ಅವರು ಯಾವುದೇ ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ.<br /> <br /> ವೆಬ್ಸೈಟ್ಗೆ ಚಾಲನೆ: ಮಧ್ಯಾಹ್ನ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಈಶ್ವರಪ್ಪ ಅವರು ಜನಚೇತನ ಯಾತ್ರೆಯ ಕುರಿತು ಮಾಹಿತಿ ನೀಡುವ ವೆಬ್ಸೈಟ್(ಡಿಡಿಡಿ.ಚ್ಜಿಟ್ಜಚ್ಞ್ಚಛಿಠ್ಞಿಠ್ಟಿ.ಡಿಟ್ಟಟ್ಟಛಿ.್ಚಟಞ) ಚಾಲನೆ ನೀಡಿದರು. <br /> <br /> ಅಲ್ಲದೆ, ಕಾರ್ಯಕರ್ತರಿಗೆ ಪಕ್ಷದ ಚಟುವಟಿಕೆಗಳ ಕುರಿತು ಮಾಹಿತಿ ನೀಡಲು ಆರಂಭಿಸಲಾದ ಎಲೆಕ್ಟ್ರಾನಿಕ್ ವಾರ್ತಾಪತ್ರವನ್ನೂ ಅವರು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು.<br /> <br /> `ವ್ಯಕ್ತಿ ಮುಖ್ಯವಲ್ಲ~: `ಅಡ್ವಾಣಿ ಅವರ ಈ ಯಾತ್ರೆಯ ಉದ್ದೇಶ ಉತ್ತಮ ಆಡಳಿತ ಮತ್ತು ಸ್ವಚ್ಛ ರಾಜಕಾರಣವನ್ನು ಆಚರಣೆಗೆ ತರುವುದಾಗಿದೆ. ಇಲ್ಲಿ ಯಾವುದೇ ವ್ಯಕ್ತಿ ಮುಖ್ಯವಲ್ಲ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಎಲ್.ಕೆ. ಅಡ್ವಾಣಿ ಅವರ `ಜನಚೇತನ ಯಾತ್ರೆ~ಯ ಅಂಗವಾಗಿ ಬೆಂಗಳೂರಿನಲ್ಲಿ ಸಾರ್ವಜನಿಕ ಸಮಾವೇಶ ನಡೆಯುವುದು ಖಚಿತ ಎಂದು ಸ್ಪಷ್ಟನೆ ನೀಡಿರುವ ಬಿಜೆಪಿ ರಾಜ್ಯ ಘಟಕ, ಸಮಾವೇಶದ ಸಿದ್ಧತೆಗಾಗಿ ಸೋಮವಾರ ಸರಣಿ ಸಭೆಗಳನ್ನು ನಡೆಸಿತು.<br /> <br /> ಮಲ್ಲೇಶ್ವರದಲ್ಲಿರುವ ಪಕ್ಷದ ರಾಜ್ಯ ಕಚೇರಿ `ಜಗನ್ನಾಥ ಭವನ~ದಲ್ಲಿ ನಡೆದ ಸಭೆಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ, `ಜನಚೇತನ ಯಾತ್ರೆ~ಯ ಬೆಂಗಳೂರು ಕಾರ್ಯಕ್ರಮದ ಉಸ್ತುವಾರಿ ಹೊತ್ತಿರುವ ಹುಬ್ಬಳ್ಳಿ-ಧಾರವಾಡ ಸಂಸದ ಪ್ರಹ್ಲಾದ ಜೋಷಿ ಮತ್ತಿತರರು ಪಾಲ್ಗೊಂಡಿದ್ದರು.<br /> <br /> ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಸದಸ್ಯರು, ಶಾಸಕರು, ಸಂಸದರಿಗಾಗಿ ಪ್ರತ್ಯೇಕ ಸಭೆಗಳನ್ನು ನಡೆಸಲಾಯಿತು. ಆದರೆ ಗೃಹ ಮತ್ತು ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಆರ್. ಅಶೋಕ ಅವರು ಯಾವುದೇ ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ.<br /> <br /> ವೆಬ್ಸೈಟ್ಗೆ ಚಾಲನೆ: ಮಧ್ಯಾಹ್ನ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಈಶ್ವರಪ್ಪ ಅವರು ಜನಚೇತನ ಯಾತ್ರೆಯ ಕುರಿತು ಮಾಹಿತಿ ನೀಡುವ ವೆಬ್ಸೈಟ್(ಡಿಡಿಡಿ.ಚ್ಜಿಟ್ಜಚ್ಞ್ಚಛಿಠ್ಞಿಠ್ಟಿ.ಡಿಟ್ಟಟ್ಟಛಿ.್ಚಟಞ) ಚಾಲನೆ ನೀಡಿದರು. <br /> <br /> ಅಲ್ಲದೆ, ಕಾರ್ಯಕರ್ತರಿಗೆ ಪಕ್ಷದ ಚಟುವಟಿಕೆಗಳ ಕುರಿತು ಮಾಹಿತಿ ನೀಡಲು ಆರಂಭಿಸಲಾದ ಎಲೆಕ್ಟ್ರಾನಿಕ್ ವಾರ್ತಾಪತ್ರವನ್ನೂ ಅವರು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು.<br /> <br /> `ವ್ಯಕ್ತಿ ಮುಖ್ಯವಲ್ಲ~: `ಅಡ್ವಾಣಿ ಅವರ ಈ ಯಾತ್ರೆಯ ಉದ್ದೇಶ ಉತ್ತಮ ಆಡಳಿತ ಮತ್ತು ಸ್ವಚ್ಛ ರಾಜಕಾರಣವನ್ನು ಆಚರಣೆಗೆ ತರುವುದಾಗಿದೆ. ಇಲ್ಲಿ ಯಾವುದೇ ವ್ಯಕ್ತಿ ಮುಖ್ಯವಲ್ಲ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>