ಅಭ್ಯರ್ಥಿಗಳ ಆಯ್ಕೆಗಾಗಿ ರಚಿಸಲಾಗಿರುವ ಉಪಸಮಿತಿಗಳ ವರದಿ ಇನ್ನೂ ಸಲ್ಲಿಕೆ ಆಗಬೇಕಿದೆ. ಶೀಘ್ರ ವರದಿ ಸಲ್ಲಿಸಲು ಸೂಚಿಸಲಾಗಿದ್ದು, ನಂತರ ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪ ಅವರು, ಪಕ್ಷದ ಉಸ್ತುವಾರಿಗಳಾದ ಮುರಳೀಧರ್ ರಾವ್, ಪ್ರಕಾಶ್ ಜಾವಡೇಕರ್, ಪಿಯೂಷ್ ಗೋಯಲ್ರ ಮೂಲಕ ಕೇಂದ್ರ ನಾಯಕರಿಗೆ ಪಟ್ಟಿ ಸಲ್ಲಿಸಲಿದ್ದಾರೆ. ನಂತರ ವರಿಷ್ಠರು ತೀರ್ಮಾನ ಕೈಗೊಳ್ಳುವರು ಎಂದು ಅರವಿಂದ ಲಿಂಬಾವಳಿ ತಿಳಿಸಿದರು.