<p><strong>ಮಂಡ್ಯ:</strong> ಸ್ಥಳೀಯ ಸಂಸ್ಥೆಗಳಲ್ಲಿ ಶೇ 22.75ರ ಅನುದಾನದ ಹಣವು ಪರಿಣಾಮಕಾರಿಯಾಗಿ ಬಳಕೆ ಆಗುತ್ತಿಲ್ಲ ಎಂಬ ಆಕ್ಷೇಪ ಮಂಗಳವಾರ ನಗರದಲ್ಲಿ ನಡೆದ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯಲ್ಲಿ ವ್ಯಕ್ತವಾಯಿತು. ಜಿಲ್ಲಾಧಿಕಾರಿ ಡಾ.ಪಿ.ಸಿ.ಜಾಫರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಈ ಕುರಿತು ಆಕ್ಷೇಪವನ್ನು ವ್ಯಕ್ತಪಡಿಸಿದರು.<br /> <br /> ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಆಯಾ ಸ್ಥಳೀಯ ಸಂಸ್ಥೆಗಳಲ್ಲಿ ಈ ನಿರ್ದಿಷ್ಟ ಅನುದಾನದ ಮೊತ್ತ ಸಮರ್ಪಕವಾಗಿ ಬಳಕೆ ಆಗಿ, ಫಲಾನುಭವಿಗಳಿಗೆ ತಲುಪುವಂತೆ ಪರಿಶೀಲಿಸುವ ಭರವಸೆ ನೀಡಿದರು. ಅಲ್ಲದೆ, ದುರ್ಬಳಕೆ ಯತ್ನ ಕಂಡುಬಂದರೆ ಕ್ರಮಕೈಗೊಳ್ಳುವುದಾಗಿ ಹೇಳಿದರು.<br /> <br /> ಗುತ್ತಿಗೆ ನೀಡುವಾಗಿ ಪರಿಶಿಷ್ಟ ಜಾತಿ, ವರ್ಗದ ಗುತ್ತಿಗೆದಾರರಿಗೆ ಕನಿಷ್ಠ 5 ಲಕ್ಷ ರೂಪಾಯಿ ಮೌಲ್ಯದ ಗುತ್ತಿಗೆ ನೀಡಬೇಕು. ಹಾಸ್ಟೆಲ್ ಸಮಸ್ಯೆ, ಜಾತಿ ಪ್ರಮಾಣ ಪತ್ರ ಪಡೆಯುವ ತೊಡಕು ಸಮಸ್ಯೆಗಳೂ ಸಭೆಯಲ್ಲಿ ಪ್ರಸ್ತಾಪವಾದವು.<br /> <br /> ಸಭೆಯಲ್ಲಿ ಜಿ.ಪಂ. ಸಿಇಒ ಜಯರಾಂ, ಪೊಲೀಸ್ ವರಿಷ್ಠಾಧಿಕಾರಿ ಕೌಶಲೇಂದ್ರ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಪುಟ್ಟಮಾದಯ್ಯ ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಸ್ಥಳೀಯ ಸಂಸ್ಥೆಗಳಲ್ಲಿ ಶೇ 22.75ರ ಅನುದಾನದ ಹಣವು ಪರಿಣಾಮಕಾರಿಯಾಗಿ ಬಳಕೆ ಆಗುತ್ತಿಲ್ಲ ಎಂಬ ಆಕ್ಷೇಪ ಮಂಗಳವಾರ ನಗರದಲ್ಲಿ ನಡೆದ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯಲ್ಲಿ ವ್ಯಕ್ತವಾಯಿತು. ಜಿಲ್ಲಾಧಿಕಾರಿ ಡಾ.ಪಿ.ಸಿ.ಜಾಫರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಈ ಕುರಿತು ಆಕ್ಷೇಪವನ್ನು ವ್ಯಕ್ತಪಡಿಸಿದರು.<br /> <br /> ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಆಯಾ ಸ್ಥಳೀಯ ಸಂಸ್ಥೆಗಳಲ್ಲಿ ಈ ನಿರ್ದಿಷ್ಟ ಅನುದಾನದ ಮೊತ್ತ ಸಮರ್ಪಕವಾಗಿ ಬಳಕೆ ಆಗಿ, ಫಲಾನುಭವಿಗಳಿಗೆ ತಲುಪುವಂತೆ ಪರಿಶೀಲಿಸುವ ಭರವಸೆ ನೀಡಿದರು. ಅಲ್ಲದೆ, ದುರ್ಬಳಕೆ ಯತ್ನ ಕಂಡುಬಂದರೆ ಕ್ರಮಕೈಗೊಳ್ಳುವುದಾಗಿ ಹೇಳಿದರು.<br /> <br /> ಗುತ್ತಿಗೆ ನೀಡುವಾಗಿ ಪರಿಶಿಷ್ಟ ಜಾತಿ, ವರ್ಗದ ಗುತ್ತಿಗೆದಾರರಿಗೆ ಕನಿಷ್ಠ 5 ಲಕ್ಷ ರೂಪಾಯಿ ಮೌಲ್ಯದ ಗುತ್ತಿಗೆ ನೀಡಬೇಕು. ಹಾಸ್ಟೆಲ್ ಸಮಸ್ಯೆ, ಜಾತಿ ಪ್ರಮಾಣ ಪತ್ರ ಪಡೆಯುವ ತೊಡಕು ಸಮಸ್ಯೆಗಳೂ ಸಭೆಯಲ್ಲಿ ಪ್ರಸ್ತಾಪವಾದವು.<br /> <br /> ಸಭೆಯಲ್ಲಿ ಜಿ.ಪಂ. ಸಿಇಒ ಜಯರಾಂ, ಪೊಲೀಸ್ ವರಿಷ್ಠಾಧಿಕಾರಿ ಕೌಶಲೇಂದ್ರ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಪುಟ್ಟಮಾದಯ್ಯ ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>