<p><strong>ಕನಕಪುರ:</strong> ತಾಲ್ಲೂಕಿನ ಸಂಗಮ್ ಬಳಿ ಗುರುವಾರ ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಮಗುಚಿದ್ದು ಅದರಲ್ಲಿದ್ದ 17 ಜನರು<br /> ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.</p>.<p>ಬೆಂಗಳೂರಿನ ಆವಲಹಳ್ಳಿ ಸ್ತ್ರೀ ಶಕ್ತಿ ಮಹಿಳಾ ಸಂಘಟನೆಯ ಸದಸ್ಯರಾದ ಸುನಿತಾ, ಪ್ರತಿಭಾ, ಚೆನ್ನಮ್ಮ, ನಳಿನಾ, ವಾಣಿ, ಇಂದ್ರ, ಲಿಲಿತಾ, ಅನಿತಾ, ವಸಂತ, ರಾಜಮ್ಮ, ಗೌರಮ್ಮ, ಚಿಕ್ಕಮ್ಮ, ಸುಶೀಲ, ಸುಮ, ಗಂಗಮ್ಮ, ಕಲಾ, ಜಯಮ್ಮ ಅಪಘಾತದಲ್ಲಿ ಗಾಯಗೊಂಡಿದ್ದಾರೆ.</p>.<p>ಅವರು ಬೆಳಿಗ್ಗೆ ತಾಲ್ಲೂಕಿನ ಕಬ್ಬಾಳಮ್ಮ ದೇವಾಲಯದಲ್ಲಿ ಮೊದಲಿಗೆ ಪೂಜೆ ನೆರವೇರಿಸಿ ನಂತರ ಮುತ್ತತ್ತಿ ದೇವಾಲಯಕ್ಕೆ ಭೇಟಿ ಕೊಟ್ಟು ಅಲ್ಲಿಯೂ ಪೂಜೆ ಮುಗಿಸಿ ಸಂಗಮ ನೋಡಲೆಂದು ಹೊರಟಿದ್ದಾಗ ಈ ದುರ್ಘಟನೆ ಸಂಭವಿಸಿದೆ.</p>.<p>ಸಂಗಮ ಸಮೀಪದ ಮೊದಲ ತಿರುವು ಕುಂಟೆಕ್ರಾಸ್ನಲ್ಲಿ ಮಿನಿಬಸ್ ಉರುಳಿದೆ. ಒಳಗಿದ್ದ ಬಹುತೇಕರಿಗೆ ಕಾಲು, ಕೈ ಮುರಿದಿವೆ. ತಲೆಗೆ ಪೆಟ್ಟಾಗಿದೆ. ಅಪಘಾತವಾಗುತ್ತಿದ್ದ ರಸ್ತೆಯಲ್ಲಿ ಬರುತ್ತಿದ್ದ ಬೇರೆ ಪ್ರಯಾಣಿಕರು ಕೂಡಲೇ ಸಾತನೂರು ಪೊಲೀಸರಿಗೆ ವಿಷಯ ತಿಳಿಸಿದರು.</p>.<p>ಬಸ್ಸಿನಲ್ಲಿ ಗಾಯಗೊಂಡಿದ್ದವರನ್ನು ಸುರಕ್ಷಿತವಾಗಿ ಹೊರಗೆ ಕರೆತಂದು ‘108’ ಆಂಬುಲೆನ್ಸ್ ಮೂಲಕ ದೊಡ್ಡ ಆಲಹಳ್ಳಿ ಸರ್ಕಾರಿ ಆಸ್ಪತ್ರೆ, ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ಕಳಿಸಿಕೊಟ್ಟಿದ್ಧಾರೆ. ವೈದ್ಯರು ಗಂಭೀರವಾಗಿ ಗಾಯಗೊಂಡಿದ್ದವರನ್ನು ಬೆಂಗಳೂರಿನ ನಿಮ್ಹಾನ್ಸ್, ವಿಕ್ಟೋರಿಯಾ, ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಿದ್ದಾರೆ.</p>.<p><strong>ಮರುಕಳಿಸಿದ ಅಪಘಾತ</strong><br /> ಇಂದು ಅಪಘಾತಗೊಂಡಿರುವ ಸ್ಥಳದಲ್ಲೇ ಈ ಹಿಂದೆ ಎರಡು ಬಾರಿ ಬಸ್ ಮಗುಚಿ ಸಾವು ನೋವು ಸಂಭವಿಸಿದೆ. ಈ ಸ್ಥಳದಲ್ಲಿ ಇರುವ ಸಮಸ್ಯೆಯೊ ಅಥವಾ ಚಾಲಕರ ನಿರ್ಲಕ್ಷವೋ ಗೊತ್ತಾಗುತ್ತಿಲ್ಲ. ಆದರೆ, ಪ್ರಯಾಣಿಕರು ಪಾರಾಗುತ್ತಿದ್ದಾರೆ. ಮುಂದೆ ಇಂತಹ ಅಪಘಾತಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ತಾಲ್ಲೂಕಿನ ಸಂಗಮ್ ಬಳಿ ಗುರುವಾರ ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಮಗುಚಿದ್ದು ಅದರಲ್ಲಿದ್ದ 17 ಜನರು<br /> ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.</p>.<p>ಬೆಂಗಳೂರಿನ ಆವಲಹಳ್ಳಿ ಸ್ತ್ರೀ ಶಕ್ತಿ ಮಹಿಳಾ ಸಂಘಟನೆಯ ಸದಸ್ಯರಾದ ಸುನಿತಾ, ಪ್ರತಿಭಾ, ಚೆನ್ನಮ್ಮ, ನಳಿನಾ, ವಾಣಿ, ಇಂದ್ರ, ಲಿಲಿತಾ, ಅನಿತಾ, ವಸಂತ, ರಾಜಮ್ಮ, ಗೌರಮ್ಮ, ಚಿಕ್ಕಮ್ಮ, ಸುಶೀಲ, ಸುಮ, ಗಂಗಮ್ಮ, ಕಲಾ, ಜಯಮ್ಮ ಅಪಘಾತದಲ್ಲಿ ಗಾಯಗೊಂಡಿದ್ದಾರೆ.</p>.<p>ಅವರು ಬೆಳಿಗ್ಗೆ ತಾಲ್ಲೂಕಿನ ಕಬ್ಬಾಳಮ್ಮ ದೇವಾಲಯದಲ್ಲಿ ಮೊದಲಿಗೆ ಪೂಜೆ ನೆರವೇರಿಸಿ ನಂತರ ಮುತ್ತತ್ತಿ ದೇವಾಲಯಕ್ಕೆ ಭೇಟಿ ಕೊಟ್ಟು ಅಲ್ಲಿಯೂ ಪೂಜೆ ಮುಗಿಸಿ ಸಂಗಮ ನೋಡಲೆಂದು ಹೊರಟಿದ್ದಾಗ ಈ ದುರ್ಘಟನೆ ಸಂಭವಿಸಿದೆ.</p>.<p>ಸಂಗಮ ಸಮೀಪದ ಮೊದಲ ತಿರುವು ಕುಂಟೆಕ್ರಾಸ್ನಲ್ಲಿ ಮಿನಿಬಸ್ ಉರುಳಿದೆ. ಒಳಗಿದ್ದ ಬಹುತೇಕರಿಗೆ ಕಾಲು, ಕೈ ಮುರಿದಿವೆ. ತಲೆಗೆ ಪೆಟ್ಟಾಗಿದೆ. ಅಪಘಾತವಾಗುತ್ತಿದ್ದ ರಸ್ತೆಯಲ್ಲಿ ಬರುತ್ತಿದ್ದ ಬೇರೆ ಪ್ರಯಾಣಿಕರು ಕೂಡಲೇ ಸಾತನೂರು ಪೊಲೀಸರಿಗೆ ವಿಷಯ ತಿಳಿಸಿದರು.</p>.<p>ಬಸ್ಸಿನಲ್ಲಿ ಗಾಯಗೊಂಡಿದ್ದವರನ್ನು ಸುರಕ್ಷಿತವಾಗಿ ಹೊರಗೆ ಕರೆತಂದು ‘108’ ಆಂಬುಲೆನ್ಸ್ ಮೂಲಕ ದೊಡ್ಡ ಆಲಹಳ್ಳಿ ಸರ್ಕಾರಿ ಆಸ್ಪತ್ರೆ, ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ಕಳಿಸಿಕೊಟ್ಟಿದ್ಧಾರೆ. ವೈದ್ಯರು ಗಂಭೀರವಾಗಿ ಗಾಯಗೊಂಡಿದ್ದವರನ್ನು ಬೆಂಗಳೂರಿನ ನಿಮ್ಹಾನ್ಸ್, ವಿಕ್ಟೋರಿಯಾ, ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಿದ್ದಾರೆ.</p>.<p><strong>ಮರುಕಳಿಸಿದ ಅಪಘಾತ</strong><br /> ಇಂದು ಅಪಘಾತಗೊಂಡಿರುವ ಸ್ಥಳದಲ್ಲೇ ಈ ಹಿಂದೆ ಎರಡು ಬಾರಿ ಬಸ್ ಮಗುಚಿ ಸಾವು ನೋವು ಸಂಭವಿಸಿದೆ. ಈ ಸ್ಥಳದಲ್ಲಿ ಇರುವ ಸಮಸ್ಯೆಯೊ ಅಥವಾ ಚಾಲಕರ ನಿರ್ಲಕ್ಷವೋ ಗೊತ್ತಾಗುತ್ತಿಲ್ಲ. ಆದರೆ, ಪ್ರಯಾಣಿಕರು ಪಾರಾಗುತ್ತಿದ್ದಾರೆ. ಮುಂದೆ ಇಂತಹ ಅಪಘಾತಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>