‘ಎನ್ಕೌಂಟರ್ ಮೂಲಕ ಅಪರಾಧ ಕೃತ್ಯಗಳನ್ನು ನಿಯಂತ್ರಿಸುತ್ತೇವೆ ಎಂಬುದು ಭ್ರಮೆ. ಅಪರಾಧ ಸಾಬೀತಾಗುವ ಮುನ್ನವೆ ಗುಂಡಿಟ್ಟು ಹತ್ಯೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಉತ್ತರಪ್ರದೇಶದ ಬಿಜೆಪಿ ಸರ್ಕಾರ ಸಂವಿಧಾನ ಬಾಹಿರವಾಗಿ ನಡೆದುಕೊಳ್ಳುತ್ತಿದೆ. ಇದು ಪ್ರಜಾಪ್ರಭುತ್ವ ಆಶಯಗಳಿಗೆ ವಿರುದ್ಧವಾಗಿದ್ದು, ನ್ಯಾಯಾಂಗ ವ್ಯವಸ್ಥೆಯನ್ನು ಅಣಕಿಸುತ್ತಿದೆ’ ಎಂದು ಚಂದ್ರಶೇಖರ್ ಆಕ್ರೋಶ ಹೊರಹಾಕಿದರು.