<p>ಬೆಂಗಳೂರು: ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹಿಷ್ಕರಿಸುವ ಉಪನ್ಯಾಸಕರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಆಯುಕ್ತರಾದ ವಿ.ರಶ್ಮಿ ಎಚ್ಚರಿಕೆ ನೀಡಿದ್ದಾರೆ.<br /> <br /> ಶನಿವಾರದಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಿದ್ದು, ಮುಖ್ಯ ಪರೀಕ್ಷಕರು, ಉಪ ಮುಖ್ಯ ಪರೀಕ್ಷಕರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಸಹಾಯಕ ಮೌಲ್ಯಮಾಪಕರು ನಿಗದಿಯಂತೆ ಇದೇ 9ರಿಂದ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<br /> <br /> ಪ್ರತಿ ವರ್ಷ ಮೌಲ್ಯಮಾಪನವನ್ನೇ ಅಸ್ತ್ರವಾಗಿ ಬಳಸಿಕೊಂಡು, ಉಪನ್ಯಾಸಕರು ವೇತನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ, ಧರಣಿ ನಡೆಸುತ್ತಿರುವುದಕ್ಕೆ ಪೋಷಕರು, ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.<br /> ಈ ಹಿನ್ನೆಲೆಯಲ್ಲಿ ಸೋಮವಾರ ಉಪನ್ಯಾಸಕರು ಮೌಲ್ಯಮಾಪನಕ್ಕೆ ಹಾಜರಾಗದಿದ್ದರೆ <br /> <br /> ಅಮಾನತುಗೊಳಿಸುವುದು ಸೇರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸಿದೆ. ಬಹುತೇಕ ಉಪನ್ಯಾಸಕರು ಮೌಲ್ಯಮಾಪನಕ್ಕೆ ಹಾಜರಾಗಲು ಸಿದ್ಧರಿದ್ದಾರೆ. ಆದರೆ ಕೆಲ ಪದಾಧಿಕಾರಿಗಳು ವಿನಾ ಕಾರಣ ಗೊಂದಲವನ್ನುಂಟು ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.<br /> <br /> ಈ ಮಧ್ಯೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಕಾರ್ಯದರ್ಶಿ ಜಿ.ಕುಮಾರ ನಾಯಕ ಅವರು ಶನಿವಾರ ಉಪನ್ಯಾಸಕರ ಸಂಘದ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಮೌಲ್ಯಮಾಪನಕ್ಕೆ ಹಾಜರಾಗುವಂತೆ ಮನವಿ ಮಾಡಿದರು.<br /> <br /> ಕಳೆದ ವರ್ಷ ಮೌಲ್ಯಮಾಪನ ಬಹಿಷ್ಕರಿಸಿದಾಗ ವೇತನ ತಾರತಮ್ಯ ಕುರಿತು ವರದಿ ನೀಡಲು ಸರ್ಕಾರ ಸಮಿತಿ ರಚಿಸಿತ್ತು. ಸಮಿತಿ ನೀಡಿದ್ದ ವರದಿಯನ್ನು ಅಧಿಕಾರಿಗಳ ವೇತನ ಸಮಿತಿ ಪರಿಶೀಲಿಸಿ 11,400-21,600ರಿಂದ 22,800-43,200ಕ್ಕೆ ವೇತನ ಹೆಚ್ಚಿಸಲು ಶಿಫಾರಸು ಮಾಡಿತ್ತು. ಆ ಪ್ರಕಾರ ವೇತನ ಶ್ರೇಣಿ ಜಾರಿಯಾಗಿದೆ ಎಂದು ಮನವರಿಕೆ ಮಾಡಿಕೊಟ್ಟರು.<br /> <br /> 5.92 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಮೌಲ್ಯಮಾಪನವನ್ನು ಸುಸೂತ್ರವಾಗಿ ನಡೆಸಿ ನಿಗದಿತ ದಿನಾಂಕದ ಒಳಗೆ ಫಲಿತಾಂಶ ಪ್ರಕಟಿಸುವುದು ಪದವಿ ಪೂರ್ವ ಶಿಕ್ಷಣ ಇಲಾಖೆ, ಉಪನ್ಯಾಸಕರು, ಪ್ರಾಂಶುಪಾಲರ ಕರ್ತವ್ಯವಾಗಿದೆ ಎಂದು ರಶ್ಮಿ ತಿಳಿಸಿದ್ದಾರೆ.<br /> <br /> ಹೊರ ರಾಜ್ಯಗಳ ವೇತನ ಶ್ರೇಣಿಯನ್ನು ಪರಿಶೀಲಿಸಿದಾಗ ಕರ್ನಾಟಕದಲ್ಲಿ ಉಪನ್ಯಾಸಕರ ವೇತನ ಉತ್ತಮವಾಗಿದೆ. ಮಹಾರಾಷ್ಟ್ರದಲ್ಲಿ ರೂ 9,300-34,400. ತಮಿಳುನಾಡಿನಲ್ಲಿ ರೂ 9,300-34,800. ಆಂಧ್ರಪ್ರದೇಶದಲ್ಲಿ ರೂ 18,030-43,630. ಕೇರಳದಲ್ಲಿ ರೂ 16,180-29,180 ಇದ್ದರೆ ಕರ್ನಾಟಕದಲ್ಲಿ ರೂ 22,800-43,200 ಇದೆ. ಇದಲ್ಲದೆ 500 ರೂಪಾಯಿ ವಿಶೇಷ ವೇತನ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹಿಷ್ಕರಿಸುವ ಉಪನ್ಯಾಸಕರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಆಯುಕ್ತರಾದ ವಿ.ರಶ್ಮಿ ಎಚ್ಚರಿಕೆ ನೀಡಿದ್ದಾರೆ.<br /> <br /> ಶನಿವಾರದಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಿದ್ದು, ಮುಖ್ಯ ಪರೀಕ್ಷಕರು, ಉಪ ಮುಖ್ಯ ಪರೀಕ್ಷಕರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಸಹಾಯಕ ಮೌಲ್ಯಮಾಪಕರು ನಿಗದಿಯಂತೆ ಇದೇ 9ರಿಂದ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<br /> <br /> ಪ್ರತಿ ವರ್ಷ ಮೌಲ್ಯಮಾಪನವನ್ನೇ ಅಸ್ತ್ರವಾಗಿ ಬಳಸಿಕೊಂಡು, ಉಪನ್ಯಾಸಕರು ವೇತನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ, ಧರಣಿ ನಡೆಸುತ್ತಿರುವುದಕ್ಕೆ ಪೋಷಕರು, ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.<br /> ಈ ಹಿನ್ನೆಲೆಯಲ್ಲಿ ಸೋಮವಾರ ಉಪನ್ಯಾಸಕರು ಮೌಲ್ಯಮಾಪನಕ್ಕೆ ಹಾಜರಾಗದಿದ್ದರೆ <br /> <br /> ಅಮಾನತುಗೊಳಿಸುವುದು ಸೇರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸಿದೆ. ಬಹುತೇಕ ಉಪನ್ಯಾಸಕರು ಮೌಲ್ಯಮಾಪನಕ್ಕೆ ಹಾಜರಾಗಲು ಸಿದ್ಧರಿದ್ದಾರೆ. ಆದರೆ ಕೆಲ ಪದಾಧಿಕಾರಿಗಳು ವಿನಾ ಕಾರಣ ಗೊಂದಲವನ್ನುಂಟು ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.<br /> <br /> ಈ ಮಧ್ಯೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಕಾರ್ಯದರ್ಶಿ ಜಿ.ಕುಮಾರ ನಾಯಕ ಅವರು ಶನಿವಾರ ಉಪನ್ಯಾಸಕರ ಸಂಘದ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಮೌಲ್ಯಮಾಪನಕ್ಕೆ ಹಾಜರಾಗುವಂತೆ ಮನವಿ ಮಾಡಿದರು.<br /> <br /> ಕಳೆದ ವರ್ಷ ಮೌಲ್ಯಮಾಪನ ಬಹಿಷ್ಕರಿಸಿದಾಗ ವೇತನ ತಾರತಮ್ಯ ಕುರಿತು ವರದಿ ನೀಡಲು ಸರ್ಕಾರ ಸಮಿತಿ ರಚಿಸಿತ್ತು. ಸಮಿತಿ ನೀಡಿದ್ದ ವರದಿಯನ್ನು ಅಧಿಕಾರಿಗಳ ವೇತನ ಸಮಿತಿ ಪರಿಶೀಲಿಸಿ 11,400-21,600ರಿಂದ 22,800-43,200ಕ್ಕೆ ವೇತನ ಹೆಚ್ಚಿಸಲು ಶಿಫಾರಸು ಮಾಡಿತ್ತು. ಆ ಪ್ರಕಾರ ವೇತನ ಶ್ರೇಣಿ ಜಾರಿಯಾಗಿದೆ ಎಂದು ಮನವರಿಕೆ ಮಾಡಿಕೊಟ್ಟರು.<br /> <br /> 5.92 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಮೌಲ್ಯಮಾಪನವನ್ನು ಸುಸೂತ್ರವಾಗಿ ನಡೆಸಿ ನಿಗದಿತ ದಿನಾಂಕದ ಒಳಗೆ ಫಲಿತಾಂಶ ಪ್ರಕಟಿಸುವುದು ಪದವಿ ಪೂರ್ವ ಶಿಕ್ಷಣ ಇಲಾಖೆ, ಉಪನ್ಯಾಸಕರು, ಪ್ರಾಂಶುಪಾಲರ ಕರ್ತವ್ಯವಾಗಿದೆ ಎಂದು ರಶ್ಮಿ ತಿಳಿಸಿದ್ದಾರೆ.<br /> <br /> ಹೊರ ರಾಜ್ಯಗಳ ವೇತನ ಶ್ರೇಣಿಯನ್ನು ಪರಿಶೀಲಿಸಿದಾಗ ಕರ್ನಾಟಕದಲ್ಲಿ ಉಪನ್ಯಾಸಕರ ವೇತನ ಉತ್ತಮವಾಗಿದೆ. ಮಹಾರಾಷ್ಟ್ರದಲ್ಲಿ ರೂ 9,300-34,400. ತಮಿಳುನಾಡಿನಲ್ಲಿ ರೂ 9,300-34,800. ಆಂಧ್ರಪ್ರದೇಶದಲ್ಲಿ ರೂ 18,030-43,630. ಕೇರಳದಲ್ಲಿ ರೂ 16,180-29,180 ಇದ್ದರೆ ಕರ್ನಾಟಕದಲ್ಲಿ ರೂ 22,800-43,200 ಇದೆ. ಇದಲ್ಲದೆ 500 ರೂಪಾಯಿ ವಿಶೇಷ ವೇತನ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>