<p><strong>ಬೆಳಗಾವಿ: </strong>ಸೋಮವಾರ, ಮಂಗಳವಾರ ನಿಗದಿಯಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿ ಕಾರ್ಯಕ್ರಮ ರದ್ದಾಗಿದ್ದು, ಏ.12, 13ಕ್ಕೆ ಮುಂದೂಡಲಾಗಿದೆ ಎಂದು ಪಕ್ಷದ ವಿಭಾಗೀಯ ಉಸ್ತುವಾರಿ ಈರಣ್ಣ ಕಡಾಡಿ ತಿಳಿಸಿದರು.</p>.<p>ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಮಿತ್ ಶಾ ಅವರು ರಾಜ್ಯಸಭೆ ಕಲಾಪದಲ್ಲಿ ಪಾಲ್ಗೊಳ್ಳಬೇಕಿರುವುದರಿಂದ ಕಾರ್ಯಕ್ರಮ ಮುಂದೂಡಲಾಗಿದೆ’ ಎಂದರು.</p>.<p>ಹಾವೇರಿ ಜಿಲ್ಲೆಯ ಕಾಗಿನೆಲೆಯಲ್ಲಿ ಏ.3ರಂದು ಸಂಜೆ ಆಯೋಜಿಸಲಾಗಿರುವ ಹಿಂದುಳಿದ ವರ್ಗಗಳ ಸಮಾವೇಶ ನಿಗದಿಯಂತೆ ನಡೆಯಲಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ ಸಿಂಗ್ ಚೌಹಾಣ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.</p>.<p>ಬೆಳಗಾವಿ ಹಾಗೂ ಬಾಗಲಕೋಟೆಯಲ್ಲಿ ಶಾ ಅವರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. </p>.<p><strong>ಇದನ್ನೂ ಓದಿ... </strong></p>.<p><strong><a href="https://elections.prajavani.net/article/bjp-president-amit-shah-visit-nandgad-april-2-720" target="_blank">ಏಪ್ರಿಲ್ 2ಕ್ಕೆ ನಂದಗಡಕ್ಕೆ ಶಾ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಸೋಮವಾರ, ಮಂಗಳವಾರ ನಿಗದಿಯಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿ ಕಾರ್ಯಕ್ರಮ ರದ್ದಾಗಿದ್ದು, ಏ.12, 13ಕ್ಕೆ ಮುಂದೂಡಲಾಗಿದೆ ಎಂದು ಪಕ್ಷದ ವಿಭಾಗೀಯ ಉಸ್ತುವಾರಿ ಈರಣ್ಣ ಕಡಾಡಿ ತಿಳಿಸಿದರು.</p>.<p>ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಮಿತ್ ಶಾ ಅವರು ರಾಜ್ಯಸಭೆ ಕಲಾಪದಲ್ಲಿ ಪಾಲ್ಗೊಳ್ಳಬೇಕಿರುವುದರಿಂದ ಕಾರ್ಯಕ್ರಮ ಮುಂದೂಡಲಾಗಿದೆ’ ಎಂದರು.</p>.<p>ಹಾವೇರಿ ಜಿಲ್ಲೆಯ ಕಾಗಿನೆಲೆಯಲ್ಲಿ ಏ.3ರಂದು ಸಂಜೆ ಆಯೋಜಿಸಲಾಗಿರುವ ಹಿಂದುಳಿದ ವರ್ಗಗಳ ಸಮಾವೇಶ ನಿಗದಿಯಂತೆ ನಡೆಯಲಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ ಸಿಂಗ್ ಚೌಹಾಣ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.</p>.<p>ಬೆಳಗಾವಿ ಹಾಗೂ ಬಾಗಲಕೋಟೆಯಲ್ಲಿ ಶಾ ಅವರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. </p>.<p><strong>ಇದನ್ನೂ ಓದಿ... </strong></p>.<p><strong><a href="https://elections.prajavani.net/article/bjp-president-amit-shah-visit-nandgad-april-2-720" target="_blank">ಏಪ್ರಿಲ್ 2ಕ್ಕೆ ನಂದಗಡಕ್ಕೆ ಶಾ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>