ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಶಂಕರನಾಯ್ಕ್, ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶೇಶಿ (ಹಾಲಿ ಪ್ರಾದೇಶಿಕ ಅರಣ್ಯ ವಿಭಾಗ ದಾವಣಗೆರೆ) ಹಾಗೂ ಹೊರಗುತ್ತಿಗೆ ತಾಂತ್ರಿಕ ಸಹಾಯಕ ಕುಮಾರ ನಾಯ್ಕ್ ಅವರ ವಿರುದ್ಧ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಮತಾ ಹೊಸಗೌಡರ ಅವರು ಭಾನುವಾರ ಹರಪನಹಳ್ಳಿ ಹಾಗೂ ಅರಸೀಕೆರೆ ಠಾಣೆಗಳಲ್ಲಿ ಪ್ರತ್ಯೇಕ ದೂರು ಸಲ್ಲಿಸಿದ್ದಾರೆ.