ಈ ಕುರಿತಂತೆ 40ಕ್ಕೂ ಹೆಚ್ಚು ಖಾಸಗಿ ಗಣಿ ಕಂಪೆನಿಗಳು ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ಮಾನ್ಯ ಮಾಡಿದ್ದು, ‘ರಾಜ್ಯ ಸರ್ಕಾರಕ್ಕೆ ಇಂತಹ ಶುಲ್ಕವನ್ನು ಹೇರುವ ಅಧಿಕಾರ ಇಲ್ಲ’ ಎಂದು ಹೇಳಿದೆ.