<p><strong>ಬೆಂಗಳೂರು: </strong>ಅರಣ್ಯದಲ್ಲಿ ನೆಲೆಸಿರುವ ಬುಡಕಟ್ಟು ಮತ್ತು ಪಾರಂಪರಿಕ ನಿವಾಸಿಗಳಿಗೆ ಹಕ್ಕುಪತ್ರ ನೀಡುವ ಜವಾಬ್ದಾರಿಯನ್ನು ಗ್ರಾಮ ಅರಣ್ಯ ಹಕ್ಕು ಸಮಿತಿಗಳಿಗೇ ವಹಿಸಲು ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಹಕ್ಕುಪತ್ರದಿಂದಾಗಿ ರಾಜ್ಯದ 9 ಜಿಲ್ಲೆಗಳ 26 ತಾಲ್ಲೂಕುಗಳಲ್ಲಿನ ಅರಣ್ಯವಾಸಿಗಳಿಗೆ ಅನುಕೂಲ ಆಗಲಿದೆ.<br /> <br /> ‘ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಪಾರಂಪರಿಕ ಅರಣ್ಯ ವಾಸಿಗಳ (ಅರಣ್ಯ ಹಕ್ಕುಗಳನ್ನು ಮಾನ್ಯ ಮಾಡುವುದು) 2006ರ ಕಾಯ್ದೆ’– ಪ್ರಕಾರ ಕ್ರಮ ತೆಗೆದುಕೊಳ್ಳಲು ನಿರ್ಧರಿಸಲಾಯಿತು ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.<br /> <br /> ಗ್ರಾಮಸಭೆಗಳು ಗ್ರಾಮ ಮಟ್ಟದ ಅರಣ್ಯ ಹಕ್ಕು ಸಮಿತಿಗಳನ್ನು ರಚಿಸಬೇಕು. ಆ ಸಮಿತಿಗಳು ಹಕ್ಕು ಪತ್ರ ಯಾರಿಗೆ ನೀಡಬಹುದು ಎಂಬುದನ್ನು ತೀರ್ಮಾನಿಸುತ್ತವೆ. ಈ ಬಗ್ಗೆ ತಕರಾರು ಇದ್ದರೂ ಅದನ್ನು ಉಪ ವಿಭಾಗ ಮತ್ತು ಜಿಲ್ಲಾ ಮಟ್ಟದಲ್ಲಿನ ಸಮಿತಿಗಳ ಮುಂದೆ ಪ್ರಶ್ನಿಸಬಹುದು ಎಂದು ಅವರು ಹೇಳಿದರು.<br /> <br /> 2005ರ ಡಿಸೆಂಬರ್ಗೂ ಮೊದಲು ಅರಣ್ಯದಲ್ಲಿ ನೆಲೆಸಿರುವ ಬುಡಕಟ್ಟು ಜನರಿಗೆ ಗರಿಷ್ಠ ನಾಲ್ಕು ಎಕರೆವರೆಗೆ ಜಮೀನು ನೀಡುವುದಕ್ಕೂ ಕಾಯ್ದೆಯಲ್ಲಿ ಅವಕಾಶ ಇದೆ. ಜೀವನೋಪಾಯಕ್ಕೆ ಅರಣ್ಯವನ್ನೇ ಅವಲಂಬಿಸಿರುವವರಿಗೆ ಈ ಅವಕಾಶ ಇದ್ದು, ಅದನ್ನು ತೀರ್ಮಾನಿಸುವ ಅಧಿಕಾರವನ್ನು ಗ್ರಾಮ ಸಮಿತಿಗಳಿಗೆ ನೀಡಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಅರಣ್ಯದಲ್ಲಿ ನೆಲೆಸಿರುವ ಬುಡಕಟ್ಟು ಮತ್ತು ಪಾರಂಪರಿಕ ನಿವಾಸಿಗಳಿಗೆ ಹಕ್ಕುಪತ್ರ ನೀಡುವ ಜವಾಬ್ದಾರಿಯನ್ನು ಗ್ರಾಮ ಅರಣ್ಯ ಹಕ್ಕು ಸಮಿತಿಗಳಿಗೇ ವಹಿಸಲು ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಹಕ್ಕುಪತ್ರದಿಂದಾಗಿ ರಾಜ್ಯದ 9 ಜಿಲ್ಲೆಗಳ 26 ತಾಲ್ಲೂಕುಗಳಲ್ಲಿನ ಅರಣ್ಯವಾಸಿಗಳಿಗೆ ಅನುಕೂಲ ಆಗಲಿದೆ.<br /> <br /> ‘ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಪಾರಂಪರಿಕ ಅರಣ್ಯ ವಾಸಿಗಳ (ಅರಣ್ಯ ಹಕ್ಕುಗಳನ್ನು ಮಾನ್ಯ ಮಾಡುವುದು) 2006ರ ಕಾಯ್ದೆ’– ಪ್ರಕಾರ ಕ್ರಮ ತೆಗೆದುಕೊಳ್ಳಲು ನಿರ್ಧರಿಸಲಾಯಿತು ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.<br /> <br /> ಗ್ರಾಮಸಭೆಗಳು ಗ್ರಾಮ ಮಟ್ಟದ ಅರಣ್ಯ ಹಕ್ಕು ಸಮಿತಿಗಳನ್ನು ರಚಿಸಬೇಕು. ಆ ಸಮಿತಿಗಳು ಹಕ್ಕು ಪತ್ರ ಯಾರಿಗೆ ನೀಡಬಹುದು ಎಂಬುದನ್ನು ತೀರ್ಮಾನಿಸುತ್ತವೆ. ಈ ಬಗ್ಗೆ ತಕರಾರು ಇದ್ದರೂ ಅದನ್ನು ಉಪ ವಿಭಾಗ ಮತ್ತು ಜಿಲ್ಲಾ ಮಟ್ಟದಲ್ಲಿನ ಸಮಿತಿಗಳ ಮುಂದೆ ಪ್ರಶ್ನಿಸಬಹುದು ಎಂದು ಅವರು ಹೇಳಿದರು.<br /> <br /> 2005ರ ಡಿಸೆಂಬರ್ಗೂ ಮೊದಲು ಅರಣ್ಯದಲ್ಲಿ ನೆಲೆಸಿರುವ ಬುಡಕಟ್ಟು ಜನರಿಗೆ ಗರಿಷ್ಠ ನಾಲ್ಕು ಎಕರೆವರೆಗೆ ಜಮೀನು ನೀಡುವುದಕ್ಕೂ ಕಾಯ್ದೆಯಲ್ಲಿ ಅವಕಾಶ ಇದೆ. ಜೀವನೋಪಾಯಕ್ಕೆ ಅರಣ್ಯವನ್ನೇ ಅವಲಂಬಿಸಿರುವವರಿಗೆ ಈ ಅವಕಾಶ ಇದ್ದು, ಅದನ್ನು ತೀರ್ಮಾನಿಸುವ ಅಧಿಕಾರವನ್ನು ಗ್ರಾಮ ಸಮಿತಿಗಳಿಗೆ ನೀಡಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>