<p><strong>ರಾಮನಗರ: </strong>`ಕನಕಪುರದಲ್ಲಿ ಅಕ್ರಮವಾಗಿ ಗ್ರಾನೈಟ್ ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ತಡೆಯಲು ಹೋದ ಅರಣ್ಯ ಇಲಾಖೆಯ ಮೂವರು ಸಿಬ್ಬಂದಿ (ಗಾರ್ಡ್) ಮೇಲೆ ಶಾಸಕ ಡಿ.ಕೆ.ಶಿವಕುಮಾರ್ ಪ್ರಚೋದಿತ ಗೂಂಡಾಗಳ ಗುಂಪು ಹಲ್ಲೆ ನಡೆಸಿದೆ~ ಎಂದು ಅರಣ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪಿ.ಯೋಗೇಶ್ವರ್ ದೂರಿದರು.<br /> <br /> `ಶುಕ್ರವಾರ ರಾತ್ರಿ ಗ್ರಾನೈಟ್ ಕಲ್ಲು ಸಾಗಿಸುತ್ತಿದ್ದ ಲಾರಿಯನ್ನು ಕನಕಪುರದ ಬೇಕುಪ್ಪೆ ವೃತ್ತದ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಅಡ್ಡಗಟ್ಟಿದ್ದಾರೆ. ಈ ವೇಳೆ ಎರಡು ಕಾರುಗಳಲ್ಲಿ ಬಂದ 10ರಿಂದ 15 ಜನ ಗೂಂಡಾಗಳು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಈ ಕುರಿತು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ತಾಖತ್ ಸಿಂಗ್ ರಾಣಾವತ್ ಅವರು ಕನಕಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ~ ಎಂದು ಅವರು ಶನಿವಾರ ಕಂದಾಯ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಲಾರಿ ಮಾಲೀಕ ಮುತ್ತುರಾಜ್ ಎಂಬುವರ ಮೇಲೆ ದೂರು ನೀಡಲಾಗಿದೆ ಎಂದರು. <br /> <br /> `ಕನಕಪುರ ವ್ಯಾಪ್ತಿಯಲ್ಲಿ ನಿತ್ಯ ನೂರಾರು ಲಾರಿಗಳಲ್ಲಿ ಅಕ್ರಮವಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಗ್ರಾನೈಟ್ ಶಿಲೆಗಳು ಸಾಗಾಟವಾಗುತ್ತಿವೆ. ಈ ಭಾಗದಲ್ಲಿ ನಡೆಯುತ್ತಿರುವ ಗಣಿಗಾರಿಕೆ ಬಗ್ಗೆ ಕೆಲ ದಿನಗಳಿಂದ ಅಧಿಕಾರಿಗಳ ತಂಡ ತನಿಖೆ ನಡೆಸಿದ್ದರಿಂದ ಅಕ್ರಮಕ್ಕೆ ಕಡಿವಾಣ ಬೀಳುತ್ತಿದೆ. ಇದರಿಂದ ಕಂಗಾಲಾಗಿರುವವರು ಈ ರೀತಿ ಗೂಂಡಾ ವರ್ತನೆ ತೋರುತ್ತಿದ್ದಾರೆ~ ಎಂದು ಆಪಾದಿಸಿದರು.<br /> <br /> ಜಿಲ್ಲೆಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದರೂ ಕ್ರಮ ತೆಗೆದುಕೊಳ್ಳದೆ ನಿರ್ಲಕ್ಷ್ಯವಹಿಸಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕ ತಿಮ್ಮಪ್ಪ ಅವರನ್ನು ಸರ್ಕಾರ ಶನಿವಾರ ವರ್ಗಾವಣೆ ಮಾಡಿದೆ. <br /> ಅವರನ್ನು ಅಮಾನತಿನಲ್ಲಿಟ್ಟು, ವಿಚಾರಣೆ ನಡೆಸಿ ನಂತರ ಅವರಿಗೆ ಸ್ಥಳ ನಿಯುಕ್ತಿಗೊಳಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿರುವುದಾಗಿ ಸಚಿವರು ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>`ಕನಕಪುರದಲ್ಲಿ ಅಕ್ರಮವಾಗಿ ಗ್ರಾನೈಟ್ ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ತಡೆಯಲು ಹೋದ ಅರಣ್ಯ ಇಲಾಖೆಯ ಮೂವರು ಸಿಬ್ಬಂದಿ (ಗಾರ್ಡ್) ಮೇಲೆ ಶಾಸಕ ಡಿ.ಕೆ.ಶಿವಕುಮಾರ್ ಪ್ರಚೋದಿತ ಗೂಂಡಾಗಳ ಗುಂಪು ಹಲ್ಲೆ ನಡೆಸಿದೆ~ ಎಂದು ಅರಣ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪಿ.ಯೋಗೇಶ್ವರ್ ದೂರಿದರು.<br /> <br /> `ಶುಕ್ರವಾರ ರಾತ್ರಿ ಗ್ರಾನೈಟ್ ಕಲ್ಲು ಸಾಗಿಸುತ್ತಿದ್ದ ಲಾರಿಯನ್ನು ಕನಕಪುರದ ಬೇಕುಪ್ಪೆ ವೃತ್ತದ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಅಡ್ಡಗಟ್ಟಿದ್ದಾರೆ. ಈ ವೇಳೆ ಎರಡು ಕಾರುಗಳಲ್ಲಿ ಬಂದ 10ರಿಂದ 15 ಜನ ಗೂಂಡಾಗಳು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಈ ಕುರಿತು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ತಾಖತ್ ಸಿಂಗ್ ರಾಣಾವತ್ ಅವರು ಕನಕಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ~ ಎಂದು ಅವರು ಶನಿವಾರ ಕಂದಾಯ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಲಾರಿ ಮಾಲೀಕ ಮುತ್ತುರಾಜ್ ಎಂಬುವರ ಮೇಲೆ ದೂರು ನೀಡಲಾಗಿದೆ ಎಂದರು. <br /> <br /> `ಕನಕಪುರ ವ್ಯಾಪ್ತಿಯಲ್ಲಿ ನಿತ್ಯ ನೂರಾರು ಲಾರಿಗಳಲ್ಲಿ ಅಕ್ರಮವಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಗ್ರಾನೈಟ್ ಶಿಲೆಗಳು ಸಾಗಾಟವಾಗುತ್ತಿವೆ. ಈ ಭಾಗದಲ್ಲಿ ನಡೆಯುತ್ತಿರುವ ಗಣಿಗಾರಿಕೆ ಬಗ್ಗೆ ಕೆಲ ದಿನಗಳಿಂದ ಅಧಿಕಾರಿಗಳ ತಂಡ ತನಿಖೆ ನಡೆಸಿದ್ದರಿಂದ ಅಕ್ರಮಕ್ಕೆ ಕಡಿವಾಣ ಬೀಳುತ್ತಿದೆ. ಇದರಿಂದ ಕಂಗಾಲಾಗಿರುವವರು ಈ ರೀತಿ ಗೂಂಡಾ ವರ್ತನೆ ತೋರುತ್ತಿದ್ದಾರೆ~ ಎಂದು ಆಪಾದಿಸಿದರು.<br /> <br /> ಜಿಲ್ಲೆಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದರೂ ಕ್ರಮ ತೆಗೆದುಕೊಳ್ಳದೆ ನಿರ್ಲಕ್ಷ್ಯವಹಿಸಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕ ತಿಮ್ಮಪ್ಪ ಅವರನ್ನು ಸರ್ಕಾರ ಶನಿವಾರ ವರ್ಗಾವಣೆ ಮಾಡಿದೆ. <br /> ಅವರನ್ನು ಅಮಾನತಿನಲ್ಲಿಟ್ಟು, ವಿಚಾರಣೆ ನಡೆಸಿ ನಂತರ ಅವರಿಗೆ ಸ್ಥಳ ನಿಯುಕ್ತಿಗೊಳಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿರುವುದಾಗಿ ಸಚಿವರು ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>