<p><strong>ಬೆಂಗಳೂರು</strong>: ಅರ್ಜಿ ಸಲ್ಲಿಸಿ ವರ್ಷಗಳು ಕಳೆದಿದ್ದರೂ ಅರ್ಹರಿಗೆ ಪಡಿತರ ಚೀಟಿ ವಿತರಿಸದಿರುವುದು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಹೇಳಿರುವ ರಾಜ್ಯ ಮಾನವ ಹಕ್ಕುಗಳ ಆಯೋಗ, ಅರ್ಹರಿಗೆ ಒಂದು ತಿಂಗಳಲ್ಲಿ ಪಡಿತರ ಚೀಟಿ ವಿತರಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಸೂಚಿಸಿದೆ.<br /> <br /> ಅರ್ಜಿ ಸಲ್ಲಿಸಿ ಮೂರು ವರ್ಷಗಳು ಸಂದಿದ್ದರೂ ಪಡಿತರ ಚೀಟಿ ವಿತರಣೆಯಾಗದ ಕುರಿತು ಉತ್ತರ ಕನ್ನಡ ಜಿಲ್ಲೆಯ ಕೆಲವು ಬಡವರು ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಡಾ.ಎಸ್.ಆರ್. ನಾಯಕ್ ಅವರಿಗೆ ಇದೇ ಅಕ್ಟೋಬರ್ನಲ್ಲಿ ದೂರು ನೀಡಿದ್ದರು. <br /> <br /> ದೂರು ಸ್ವೀಕರಿಸಿದ ಆಯೋಗ ಈ ಕುರಿತು ವಿವರಣೆ ನೀಡುವಂತೆ ಜಿಲ್ಲೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿತ್ತು.<br /> <br /> ಆಯೋಗದ ಸೂಚನೆಗೆ ಪ್ರತಿಕ್ರಿಯಿಸಿದ ಅಧಿಕಾರಿಗಳು, `ಅನರ್ಹ ಪಡಿತರ ಚೀಟಿಗಳನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ. ಇದು ಪೂರ್ಣಗೊಂಡ ನಂತರವೇ ಹೊಸ ಪಡಿತರ ಚೀಟಿಗಳನ್ನು ವಿತರಿಸಲು ಅನುಮತಿ ನೀಡಬಹುದು ಎಂದು ಇಲಾಖೆ ಇದೇ ಫೆಬ್ರವರಿಯಲ್ಲಿ ಸೂಚಿಸಿದೆ~ ಎಂಬ ಮಾಹಿತಿ ನೀಡಿದರು.<br /> <br /> ಈ ಪ್ರಕರಣದ ಕುರಿತು ಆದೇಶ ನೀಡಿದ ಆಯೋಗ, `ಆಹಾರದ ಹಕ್ಕು ರಕ್ಷಿಸುವುದು ಸರ್ಕಾರದ ಆದ್ಯ ಕರ್ತವ್ಯ. ಪಡಿತರ ಚೀಟಿ ನೀಡುವಲ್ಲಿ ವಿಳಂಬ ಮಾಡುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ. <br /> ಈ ಹಿನ್ನೆಲೆಯಲ್ಲಿ ಹೊಸ ಪಡಿತರ ಚೀಟಿಗೆ ಕೋರಿ ಬಂದಿರುವ ಅರ್ಜಿಗಳನ್ನು ಒಂದು ತಿಂಗಳಲ್ಲಿ ವಿಲೇವಾರಿ ಮಾಡಬೇಕು~ ಎಂದು ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಅರ್ಜಿ ಸಲ್ಲಿಸಿ ವರ್ಷಗಳು ಕಳೆದಿದ್ದರೂ ಅರ್ಹರಿಗೆ ಪಡಿತರ ಚೀಟಿ ವಿತರಿಸದಿರುವುದು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಹೇಳಿರುವ ರಾಜ್ಯ ಮಾನವ ಹಕ್ಕುಗಳ ಆಯೋಗ, ಅರ್ಹರಿಗೆ ಒಂದು ತಿಂಗಳಲ್ಲಿ ಪಡಿತರ ಚೀಟಿ ವಿತರಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಸೂಚಿಸಿದೆ.<br /> <br /> ಅರ್ಜಿ ಸಲ್ಲಿಸಿ ಮೂರು ವರ್ಷಗಳು ಸಂದಿದ್ದರೂ ಪಡಿತರ ಚೀಟಿ ವಿತರಣೆಯಾಗದ ಕುರಿತು ಉತ್ತರ ಕನ್ನಡ ಜಿಲ್ಲೆಯ ಕೆಲವು ಬಡವರು ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಡಾ.ಎಸ್.ಆರ್. ನಾಯಕ್ ಅವರಿಗೆ ಇದೇ ಅಕ್ಟೋಬರ್ನಲ್ಲಿ ದೂರು ನೀಡಿದ್ದರು. <br /> <br /> ದೂರು ಸ್ವೀಕರಿಸಿದ ಆಯೋಗ ಈ ಕುರಿತು ವಿವರಣೆ ನೀಡುವಂತೆ ಜಿಲ್ಲೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿತ್ತು.<br /> <br /> ಆಯೋಗದ ಸೂಚನೆಗೆ ಪ್ರತಿಕ್ರಿಯಿಸಿದ ಅಧಿಕಾರಿಗಳು, `ಅನರ್ಹ ಪಡಿತರ ಚೀಟಿಗಳನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ. ಇದು ಪೂರ್ಣಗೊಂಡ ನಂತರವೇ ಹೊಸ ಪಡಿತರ ಚೀಟಿಗಳನ್ನು ವಿತರಿಸಲು ಅನುಮತಿ ನೀಡಬಹುದು ಎಂದು ಇಲಾಖೆ ಇದೇ ಫೆಬ್ರವರಿಯಲ್ಲಿ ಸೂಚಿಸಿದೆ~ ಎಂಬ ಮಾಹಿತಿ ನೀಡಿದರು.<br /> <br /> ಈ ಪ್ರಕರಣದ ಕುರಿತು ಆದೇಶ ನೀಡಿದ ಆಯೋಗ, `ಆಹಾರದ ಹಕ್ಕು ರಕ್ಷಿಸುವುದು ಸರ್ಕಾರದ ಆದ್ಯ ಕರ್ತವ್ಯ. ಪಡಿತರ ಚೀಟಿ ನೀಡುವಲ್ಲಿ ವಿಳಂಬ ಮಾಡುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ. <br /> ಈ ಹಿನ್ನೆಲೆಯಲ್ಲಿ ಹೊಸ ಪಡಿತರ ಚೀಟಿಗೆ ಕೋರಿ ಬಂದಿರುವ ಅರ್ಜಿಗಳನ್ನು ಒಂದು ತಿಂಗಳಲ್ಲಿ ವಿಲೇವಾರಿ ಮಾಡಬೇಕು~ ಎಂದು ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>