<p><strong>ಮಾಲೂರು: </strong>ಆಹಾರ ಮತ್ತು ನೀರನ್ನು ಹುಡುಕಿಕೊಂಡು 22 ಕಾಡಾನೆಗಳು ತಾಲ್ಲೂಕಿನ ಕಸಬಾ ಹೋಬಳಿಯ ಹುಲ್ಕೂರು, ಮೇಡಹಟ್ಟಿ ಮತ್ತು ಸೊಣ್ಣಹಳ್ಳಿ ಗ್ರಾಮದ ಬಳಿ ಇರುವ ನೀಲಗಿರಿ ತೋಪುಗಳಲ್ಲಿ ಶನಿವಾರ ಕಾಣಿಸಿಕೊಂಡಿವೆ. ಇವು ನಾಲ್ವರ ಮೇಲೆ ದಾಳಿ ನಡೆಸಿದ್ದರಿಂದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.<br /> <br /> ತಮಿಳುನಾಡಿನ ಕೃಷ್ಣಗಿರಿ ಅರಣ್ಯದಿಂದ ತಾಲ್ಲೂಕಿನ ಮಾಸ್ತಿ ಹೋಬಳಿಯ ತೀರ್ಥಬಂಡಹಟ್ಟಿ, ಎಂ.ಹೊಸಹಳ್ಳಿ, ದಿನ್ನೇರಿ ಹಾರೋಹಳ್ಳಿ ಮತ್ತು ತಿರುಮಲಹಟ್ಟಿ ಮೂಲಕ ಶುಕ್ರವಾರ ರಾತ್ರಿ ಬಂದ ಆನೆ ಹಿಂಡು ಹುಲ್ಕೂರು ಗ್ರಾಮದ ಕಲ್ಲು ಗುಡ್ಡಗಳಲ್ಲಿ ವಾಸ್ತವ್ಯ ಹೂಡಿದ್ದವು. ಇವುಗಳನ್ನು ನೋಡಲು ಸುತ್ತ-ಮುತ್ತಲಿನ ಸಾವಿರಾರು ಜನರು ಶನಿವಾರ ಬೆಳಗಿನ ಜಾವದಿಂದಲೇ ನೆರೆದಿದ್ದರು.<br /> <br /> ಹುಲ್ಕೂರು ಗ್ರಾಮದಿಂದ ನಡಿಗೆ ಮುಂದುವರಿಸಿದ 12 ಆನೆಗಳ ಹಿಂಡು ಚಾಕನಹಳ್ಳಿ, ಕುಂತೂರು ಮೂಲಕ ಸೊಣ್ಣಹಳ್ಳಿ ಗ್ರಾಮದ ನೀಲಗಿರಿ ತೋಪುಗಳಲ್ಲಿ ಬೀಡುಬಿಟ್ಟ ವೇಳೆ ಸೊಣ್ಣಹಳ್ಳಿ ಗ್ರಾಮದ ಕುರಿಗಾಹಿ ಮಲ್ಲಪ್ಪ (60) ಆನೆ ಕಾಳ್ತುಳಿತಕ್ಕೆ ಸಿಲುಕಿ ಸ್ಥಳದಲ್ಲೇ ಸಾವನಪ್ಪಿದ್ದಾರೆ. </p>.<p>ಅಬ್ಬೇನಹಳ್ಳಿಯಲ್ಲಿ ದನ ಮೇಯಿಸುತ್ತಿದ್ದ ಮುನಿಯಪ್ಪ (60) ಸಹ ಆನೆ ತುಳಿತದಿಂದ ಸಾವನಪ್ಪಿದ್ದಾರೆ. ಹುಲ್ಕೂರು ಗ್ರಾಮದ ಕಿಟ್ಟಿ, ತಿರುಮಲಹಟ್ಟಿ ಗ್ರಾಮದ ಮಂಜಪ್ಪ, ಮಂಜುನಾಥ್ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಬ್ಬ ಗಾಯಾಳು ಬಗ್ಗೆ ವಿವರ ಲಭ್ಯವಾಗಿಲ್ಲ.<br /> <br /> ಘಟನೆಯಿಂದ ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಆನೆಗಳನ್ನು ನೋಡಲು ಬಂದ ಜನರನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಯ 50 ಸಿಬ್ಬಂದಿ, ಅರಣ್ಯ ಇಲಾಖೆಯ 25 ಸಿಬ್ಬಂದಿ ಹರಸಾಹಸ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು: </strong>ಆಹಾರ ಮತ್ತು ನೀರನ್ನು ಹುಡುಕಿಕೊಂಡು 22 ಕಾಡಾನೆಗಳು ತಾಲ್ಲೂಕಿನ ಕಸಬಾ ಹೋಬಳಿಯ ಹುಲ್ಕೂರು, ಮೇಡಹಟ್ಟಿ ಮತ್ತು ಸೊಣ್ಣಹಳ್ಳಿ ಗ್ರಾಮದ ಬಳಿ ಇರುವ ನೀಲಗಿರಿ ತೋಪುಗಳಲ್ಲಿ ಶನಿವಾರ ಕಾಣಿಸಿಕೊಂಡಿವೆ. ಇವು ನಾಲ್ವರ ಮೇಲೆ ದಾಳಿ ನಡೆಸಿದ್ದರಿಂದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.<br /> <br /> ತಮಿಳುನಾಡಿನ ಕೃಷ್ಣಗಿರಿ ಅರಣ್ಯದಿಂದ ತಾಲ್ಲೂಕಿನ ಮಾಸ್ತಿ ಹೋಬಳಿಯ ತೀರ್ಥಬಂಡಹಟ್ಟಿ, ಎಂ.ಹೊಸಹಳ್ಳಿ, ದಿನ್ನೇರಿ ಹಾರೋಹಳ್ಳಿ ಮತ್ತು ತಿರುಮಲಹಟ್ಟಿ ಮೂಲಕ ಶುಕ್ರವಾರ ರಾತ್ರಿ ಬಂದ ಆನೆ ಹಿಂಡು ಹುಲ್ಕೂರು ಗ್ರಾಮದ ಕಲ್ಲು ಗುಡ್ಡಗಳಲ್ಲಿ ವಾಸ್ತವ್ಯ ಹೂಡಿದ್ದವು. ಇವುಗಳನ್ನು ನೋಡಲು ಸುತ್ತ-ಮುತ್ತಲಿನ ಸಾವಿರಾರು ಜನರು ಶನಿವಾರ ಬೆಳಗಿನ ಜಾವದಿಂದಲೇ ನೆರೆದಿದ್ದರು.<br /> <br /> ಹುಲ್ಕೂರು ಗ್ರಾಮದಿಂದ ನಡಿಗೆ ಮುಂದುವರಿಸಿದ 12 ಆನೆಗಳ ಹಿಂಡು ಚಾಕನಹಳ್ಳಿ, ಕುಂತೂರು ಮೂಲಕ ಸೊಣ್ಣಹಳ್ಳಿ ಗ್ರಾಮದ ನೀಲಗಿರಿ ತೋಪುಗಳಲ್ಲಿ ಬೀಡುಬಿಟ್ಟ ವೇಳೆ ಸೊಣ್ಣಹಳ್ಳಿ ಗ್ರಾಮದ ಕುರಿಗಾಹಿ ಮಲ್ಲಪ್ಪ (60) ಆನೆ ಕಾಳ್ತುಳಿತಕ್ಕೆ ಸಿಲುಕಿ ಸ್ಥಳದಲ್ಲೇ ಸಾವನಪ್ಪಿದ್ದಾರೆ. </p>.<p>ಅಬ್ಬೇನಹಳ್ಳಿಯಲ್ಲಿ ದನ ಮೇಯಿಸುತ್ತಿದ್ದ ಮುನಿಯಪ್ಪ (60) ಸಹ ಆನೆ ತುಳಿತದಿಂದ ಸಾವನಪ್ಪಿದ್ದಾರೆ. ಹುಲ್ಕೂರು ಗ್ರಾಮದ ಕಿಟ್ಟಿ, ತಿರುಮಲಹಟ್ಟಿ ಗ್ರಾಮದ ಮಂಜಪ್ಪ, ಮಂಜುನಾಥ್ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಬ್ಬ ಗಾಯಾಳು ಬಗ್ಗೆ ವಿವರ ಲಭ್ಯವಾಗಿಲ್ಲ.<br /> <br /> ಘಟನೆಯಿಂದ ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಆನೆಗಳನ್ನು ನೋಡಲು ಬಂದ ಜನರನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಯ 50 ಸಿಬ್ಬಂದಿ, ಅರಣ್ಯ ಇಲಾಖೆಯ 25 ಸಿಬ್ಬಂದಿ ಹರಸಾಹಸ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>