<p><strong>ಬೆಂಗಳೂರು:</strong> 'ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಲ್ಲಿ ಚುನಾವಣಾ ಆಯೋಗವನ್ನು ಯಾರೂ ಈ ಪ್ರಮಾಣ ದಲ್ಲಿ ದುರುಪಯೋಗಪಡಿಸಿಕೊಂಡಿರಲಿಲ್ಲ. ಆಯೋಗದ ಶಕ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಕುಂದಿಸಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಪ್ರೊ.ಬಿ.ಕೆ.ಚಂದ್ರಶೇಖರ್ ಇಲ್ಲಿ ಶನಿವಾರ ಆರೋಪಿಸಿದರು.</p>.<p>ಲೋಕಸಭೆ ಚುನಾವಣೆ ಸಮಯದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ಆಯೋಗಕ್ಕೆ ದೂರು ನೀಡಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ. ಚುನಾವಣೆ ದೂರುಗಳನ್ನು ಒಂದೆರಡು ಗಂಟೆಗಳಲ್ಲಿ ಪರಿಹರಿಸಬೇಕಿದ್ದರೂ, ನಿಧಾನ ಮಾಡಲಾಗುತ್ತಿದೆ. ಆ ಮೂಲಕ ಬಿಜೆಪಿ ನಾಯಕರ ರಕ್ಷಣೆ ಮಾಡಲಾಗುತ್ತಿದೆ. ಅಷ್ಟರ ಮಟ್ಟಿಗೆ ಆಯೋಗವನ್ನು ಪ್ರಧಾನಿ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ದೂರಿದರು.</p>.<p>ಮೋದಿ, ಶಾ ವಿರುದ್ಧ ಈವರೆಗೆ 41 ದೂರುಗಳನ್ನು ಕಾಂಗ್ರೆಸ್ ನೀಡಿದೆ. ಅದರಲ್ಲಿ 8 ಗಂಭೀರ ಆರೋಪಗಳಿದ್ದು, ಒಂದರಲ್ಲಿ ಮಾತ್ರ ನಿರ್ಧಾರ ಪ್ರಕಟಿಸಿದೆ. ಉಳಿದಂತೆ ಯಾವುದೇ ಕ್ರಮ ಕೈಗೊಂಡಿಲ್ಲ. ಪ್ರಧಾನಿ ಭಯ ಅಥವಾ ನಿವೃತ್ತಿ ನಂತರ ಸಿಗುವ ಲಾಭ, ಆಮಿಷಕ್ಕೆ ಒಳಗಾಗಿ ಈ ರೀತಿ ನಡೆದುಕೊಳ್ಳಲಾಗುತ್ತಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.</p>.<p>ಮೋದಿ ಪ್ರಧಾನಿ ಆದ ನಂತರ ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ಇಂಥವರುಯುವಕರಿಗೆ ಮಾದರಿ ಯಾಗಬೇಕೇ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> 'ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಲ್ಲಿ ಚುನಾವಣಾ ಆಯೋಗವನ್ನು ಯಾರೂ ಈ ಪ್ರಮಾಣ ದಲ್ಲಿ ದುರುಪಯೋಗಪಡಿಸಿಕೊಂಡಿರಲಿಲ್ಲ. ಆಯೋಗದ ಶಕ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಕುಂದಿಸಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಪ್ರೊ.ಬಿ.ಕೆ.ಚಂದ್ರಶೇಖರ್ ಇಲ್ಲಿ ಶನಿವಾರ ಆರೋಪಿಸಿದರು.</p>.<p>ಲೋಕಸಭೆ ಚುನಾವಣೆ ಸಮಯದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ಆಯೋಗಕ್ಕೆ ದೂರು ನೀಡಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ. ಚುನಾವಣೆ ದೂರುಗಳನ್ನು ಒಂದೆರಡು ಗಂಟೆಗಳಲ್ಲಿ ಪರಿಹರಿಸಬೇಕಿದ್ದರೂ, ನಿಧಾನ ಮಾಡಲಾಗುತ್ತಿದೆ. ಆ ಮೂಲಕ ಬಿಜೆಪಿ ನಾಯಕರ ರಕ್ಷಣೆ ಮಾಡಲಾಗುತ್ತಿದೆ. ಅಷ್ಟರ ಮಟ್ಟಿಗೆ ಆಯೋಗವನ್ನು ಪ್ರಧಾನಿ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ದೂರಿದರು.</p>.<p>ಮೋದಿ, ಶಾ ವಿರುದ್ಧ ಈವರೆಗೆ 41 ದೂರುಗಳನ್ನು ಕಾಂಗ್ರೆಸ್ ನೀಡಿದೆ. ಅದರಲ್ಲಿ 8 ಗಂಭೀರ ಆರೋಪಗಳಿದ್ದು, ಒಂದರಲ್ಲಿ ಮಾತ್ರ ನಿರ್ಧಾರ ಪ್ರಕಟಿಸಿದೆ. ಉಳಿದಂತೆ ಯಾವುದೇ ಕ್ರಮ ಕೈಗೊಂಡಿಲ್ಲ. ಪ್ರಧಾನಿ ಭಯ ಅಥವಾ ನಿವೃತ್ತಿ ನಂತರ ಸಿಗುವ ಲಾಭ, ಆಮಿಷಕ್ಕೆ ಒಳಗಾಗಿ ಈ ರೀತಿ ನಡೆದುಕೊಳ್ಳಲಾಗುತ್ತಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.</p>.<p>ಮೋದಿ ಪ್ರಧಾನಿ ಆದ ನಂತರ ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ಇಂಥವರುಯುವಕರಿಗೆ ಮಾದರಿ ಯಾಗಬೇಕೇ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>