<p><strong>ಮೈಸೂರು:</strong> ‘ಯಶಸ್ವಿನಿ ಆರೋಗ್ಯ ಯೋಜನೆ ಕೈಬಿಟ್ಟಿದ್ದರಿಂದ ರಾಜ್ಯದ ಜನರಿಗೆ ಅನನುಕೂಲವಾಗಿದೆ. ಹೀಗಾಗಿ, ಈ ಬಾರಿಯ ಬಜೆಟ್ನಲ್ಲಿ ಮತ್ತೆ ಜಾರಿಗೊಳಿಸಲು ನಿರ್ಧರಿಸಿದ್ದೇನೆ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶನಿವಾರ ತಿಳಿಸಿದರು.</p>.<p>ಸುತ್ತೂರಿನಲ್ಲಿ ಸುದ್ದಿಗಾರರೊಂದಿಗೆಮಾತನಾಡಿ, ‘ಯಶಸ್ವಿನಿ ಯೋಜನೆ ತೆಗೆದುಹಾಕಿದ್ದಕ್ಕೆ ಹಲವು ದೂರುಗಳು ಬಂದಿವೆ. ಹೀಗಾಗಿ, ಮತ್ತೆ ಜಾರಿಗೊಳಿಸಿ ಜನರ ಆರೋಗ್ಯ ರಕ್ಷಣೆಗೆ ಸರ್ಕಾರ ಮುಂದಾಗಲಿದೆ’ ಎಂದರು.</p>.<p>‘ಯಶಸ್ವಿನಿ ಯೋಜನೆ, ಆರೋಗ್ಯಶ್ರೀ ಕಾರ್ಯಕ್ರಮಗಳಿಗೆಂದು ರಾಜ್ಯ ಸರ್ಕಾರ ಬಹಳ ವರ್ಷಗಳ ಹಿಂದೆಯೇ ₹700 ಕೋಟಿಗೂ ಅಧಿಕ ಅನುದಾನ ಮೀಸಲಿಟ್ಟಿದೆ. ಆದರೆ, ಆಯುಷ್ಮಾನ್ ಭಾರತ್ ಹಾಗೂ ಕರ್ನಾಟಕ ಆರೋಗ್ಯ ಶ್ರೀ ಸೇರಿಸಿ ಕಾರ್ಯಕ್ರಮ ಜಾರಿಗೆ ತರಲು ಕೇಂದ್ರ ಸರ್ಕಾರ ಮನವಿ ಮಾಡಿದ್ದರಿಂದ, ಅದಕ್ಕೆ ಒಪ್ಪಿಗೆ ನೀಡಿದ್ದೆವು’ ಎಂದು ಹೇಳಿದರು.</p>.<p>‘ಆಯುಷ್ಮಾನ್ ಭಾರತ್ ಯೋಜನೆಗೆ ರಾಜ್ಯದಿಂದಲೇ ಹೆಚ್ಚು ಹಣ ಬಿಡುಗಡೆ ಮಾಡಲಾಗುತ್ತಿದೆ. ಇದರಲ್ಲಿ ಕೇಂದ್ರದ ಪಾಲು ಕೇವಲ ₹ 200 ಕೋಟಿ. ನಮ್ಮ ಪಾಲು ₹ 800 ಕೋಟಿ. ಆದರೆ, ಇದು ತಮ್ಮ ಕಾರ್ಯಕ್ರಮವೆಂದು ಬಿಂಬಿಸಿಕೊಳ್ಳಲು ಕೇಂದ್ರ ಹೊರಟಿದೆ. ಈ ಮೂಲಕ ರಾಜ್ಯದ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ’ ಎಂದು ಅವರು ಆರೋಪಿಸಿದರು.</p>.<p><strong>ದೋಖಾ ಬಜೆಟ್: </strong>‘ಇದೊಂದು ದೋಖಾ ಬಜೆಟ್. ₹ 5 ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ಮಿತಿ ವಿಧಿಸುವುದರಲ್ಲಿ ಹಲವು ಲೋಪಗಳಿವೆ. ರೈತರಿಗೆ ದಿನಕ್ಕೆ ಕೇವಲ ₹ 17 ನೀಡಲು ಮುಂದಾಗಿದೆ. ಇದು ಅವರಿಗೆ ಯಾವ ರೀತಿ ನೆರವು ನೀಡುತ್ತದೆ? ಕೆಲ ಸಂಸ್ಥೆಗಳಿಗೆ ಹಣ ನೀಡಿದ್ದು ಹೊರತುಪಡಿಸಿದರೆ ರಾಜ್ಯದ ಯಾವುದೇ ಬೇಡಿಕೆಗಳು ಈಡೇರಿಲ್ಲ’ ಎಂದು ಕೇಂದ್ರ ಬಜೆಟ್ ಟೀಕಿಸಿದರು.</p>.<p><strong>ಏಕೆ ಬಂಧಿಸಿಲ್ಲ?: </strong>‘2001ರಿಂದಲೇ ರವಿ ಪೂಜಾರಿ ಅಕ್ರಮ ಚಟುವಟಿಕೆ ನಡೆಸುತ್ತಿದ್ದಾನೆ. ಬಿಜೆಪಿಯವರು ಐದು ವರ್ಷ ರಾಜ್ಯ ಆಳಿದರು. ಆಗ ಏಕೆ ಆತನನ್ನು ಬಂಧಿಸಲಿಲ್ಲ’ ಎಂದು ಪ್ರಶ್ನಿಸಿದರು.</p>.<p>ರವಿ ಪೂಜಾರಿಯನ್ನು ಬಂಧಿಸಿದ್ದು ಸಮ್ಮಿಶ್ರ ಸರ್ಕಾರ ಎಂದು ಹೇಳಿಕೊಳ್ಳುವ ಬದಲು ಕಂಪ್ಲಿ ಶಾಸಕರನ್ನು ಬಂಧಿಸುವ ಪೌರುಷವನ್ನು ಕುಮಾರಸ್ವಾಮಿ ತೋರಲಿ ಎಂದು ಬಿಜೆಪಿ ಮಾಡಿರುವ ಟ್ವೀಟ್ಗೆ ಈ ರೀತಿ ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಯಶಸ್ವಿನಿ ಆರೋಗ್ಯ ಯೋಜನೆ ಕೈಬಿಟ್ಟಿದ್ದರಿಂದ ರಾಜ್ಯದ ಜನರಿಗೆ ಅನನುಕೂಲವಾಗಿದೆ. ಹೀಗಾಗಿ, ಈ ಬಾರಿಯ ಬಜೆಟ್ನಲ್ಲಿ ಮತ್ತೆ ಜಾರಿಗೊಳಿಸಲು ನಿರ್ಧರಿಸಿದ್ದೇನೆ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶನಿವಾರ ತಿಳಿಸಿದರು.</p>.<p>ಸುತ್ತೂರಿನಲ್ಲಿ ಸುದ್ದಿಗಾರರೊಂದಿಗೆಮಾತನಾಡಿ, ‘ಯಶಸ್ವಿನಿ ಯೋಜನೆ ತೆಗೆದುಹಾಕಿದ್ದಕ್ಕೆ ಹಲವು ದೂರುಗಳು ಬಂದಿವೆ. ಹೀಗಾಗಿ, ಮತ್ತೆ ಜಾರಿಗೊಳಿಸಿ ಜನರ ಆರೋಗ್ಯ ರಕ್ಷಣೆಗೆ ಸರ್ಕಾರ ಮುಂದಾಗಲಿದೆ’ ಎಂದರು.</p>.<p>‘ಯಶಸ್ವಿನಿ ಯೋಜನೆ, ಆರೋಗ್ಯಶ್ರೀ ಕಾರ್ಯಕ್ರಮಗಳಿಗೆಂದು ರಾಜ್ಯ ಸರ್ಕಾರ ಬಹಳ ವರ್ಷಗಳ ಹಿಂದೆಯೇ ₹700 ಕೋಟಿಗೂ ಅಧಿಕ ಅನುದಾನ ಮೀಸಲಿಟ್ಟಿದೆ. ಆದರೆ, ಆಯುಷ್ಮಾನ್ ಭಾರತ್ ಹಾಗೂ ಕರ್ನಾಟಕ ಆರೋಗ್ಯ ಶ್ರೀ ಸೇರಿಸಿ ಕಾರ್ಯಕ್ರಮ ಜಾರಿಗೆ ತರಲು ಕೇಂದ್ರ ಸರ್ಕಾರ ಮನವಿ ಮಾಡಿದ್ದರಿಂದ, ಅದಕ್ಕೆ ಒಪ್ಪಿಗೆ ನೀಡಿದ್ದೆವು’ ಎಂದು ಹೇಳಿದರು.</p>.<p>‘ಆಯುಷ್ಮಾನ್ ಭಾರತ್ ಯೋಜನೆಗೆ ರಾಜ್ಯದಿಂದಲೇ ಹೆಚ್ಚು ಹಣ ಬಿಡುಗಡೆ ಮಾಡಲಾಗುತ್ತಿದೆ. ಇದರಲ್ಲಿ ಕೇಂದ್ರದ ಪಾಲು ಕೇವಲ ₹ 200 ಕೋಟಿ. ನಮ್ಮ ಪಾಲು ₹ 800 ಕೋಟಿ. ಆದರೆ, ಇದು ತಮ್ಮ ಕಾರ್ಯಕ್ರಮವೆಂದು ಬಿಂಬಿಸಿಕೊಳ್ಳಲು ಕೇಂದ್ರ ಹೊರಟಿದೆ. ಈ ಮೂಲಕ ರಾಜ್ಯದ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ’ ಎಂದು ಅವರು ಆರೋಪಿಸಿದರು.</p>.<p><strong>ದೋಖಾ ಬಜೆಟ್: </strong>‘ಇದೊಂದು ದೋಖಾ ಬಜೆಟ್. ₹ 5 ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ಮಿತಿ ವಿಧಿಸುವುದರಲ್ಲಿ ಹಲವು ಲೋಪಗಳಿವೆ. ರೈತರಿಗೆ ದಿನಕ್ಕೆ ಕೇವಲ ₹ 17 ನೀಡಲು ಮುಂದಾಗಿದೆ. ಇದು ಅವರಿಗೆ ಯಾವ ರೀತಿ ನೆರವು ನೀಡುತ್ತದೆ? ಕೆಲ ಸಂಸ್ಥೆಗಳಿಗೆ ಹಣ ನೀಡಿದ್ದು ಹೊರತುಪಡಿಸಿದರೆ ರಾಜ್ಯದ ಯಾವುದೇ ಬೇಡಿಕೆಗಳು ಈಡೇರಿಲ್ಲ’ ಎಂದು ಕೇಂದ್ರ ಬಜೆಟ್ ಟೀಕಿಸಿದರು.</p>.<p><strong>ಏಕೆ ಬಂಧಿಸಿಲ್ಲ?: </strong>‘2001ರಿಂದಲೇ ರವಿ ಪೂಜಾರಿ ಅಕ್ರಮ ಚಟುವಟಿಕೆ ನಡೆಸುತ್ತಿದ್ದಾನೆ. ಬಿಜೆಪಿಯವರು ಐದು ವರ್ಷ ರಾಜ್ಯ ಆಳಿದರು. ಆಗ ಏಕೆ ಆತನನ್ನು ಬಂಧಿಸಲಿಲ್ಲ’ ಎಂದು ಪ್ರಶ್ನಿಸಿದರು.</p>.<p>ರವಿ ಪೂಜಾರಿಯನ್ನು ಬಂಧಿಸಿದ್ದು ಸಮ್ಮಿಶ್ರ ಸರ್ಕಾರ ಎಂದು ಹೇಳಿಕೊಳ್ಳುವ ಬದಲು ಕಂಪ್ಲಿ ಶಾಸಕರನ್ನು ಬಂಧಿಸುವ ಪೌರುಷವನ್ನು ಕುಮಾರಸ್ವಾಮಿ ತೋರಲಿ ಎಂದು ಬಿಜೆಪಿ ಮಾಡಿರುವ ಟ್ವೀಟ್ಗೆ ಈ ರೀತಿ ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>