<p><strong>ಬೆಂಗಳೂರು: </strong>ರಾಜ್ಯೋತ್ಸವ ಪ್ರಶಸ್ತಿ ಜೊತೆ ನೀಡುವ ಬಂಗಾರದ ಪದಕಗಳ ಕಣ್ಮರೆ ಮತ್ತು ಇಲಾಖೆಯ ಅನುದಾನ ದುರ್ಬಳಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ತನಿಖೆ ಎದುರಿಸುತ್ತಿರುವ ಅಧಿಕಾರಿಗೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರ ಹುದ್ದೆಯ ಪ್ರಭಾರ ಒಪ್ಪಿಸಲಾಗಿದೆ. ಇದರಿಂದ ತನಿಖೆಗೆ ಹಿನ್ನಡೆಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.<br /> <br /> ಪದಕ ನಾಪತ್ತೆ ಮತ್ತು ಹಣ ದುರುಪಯೋಗ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಬಿ.ಟಿ.ಮುನಿರಾಜು ಅವರು ಲೋಕಾಯುಕ್ತ ತನಿಖೆ ಎದುರಿಸುತ್ತಿದ್ದಾರೆ. ಆದರೆ ವಾರದ ಹಿಂದೆ ಅವರನ್ನೇ ಇಲಾಖೆಯ ಪ್ರಭಾರಿ ನಿರ್ದೇಶಕ ಹುದ್ದೆಗೆ ನೇಮಕ ಮಾಡಲಾಗಿದೆ.<br /> <br /> <strong>ಇಲಾಖೆಯ ಸಾರಥ್ಯ</strong>: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಮೇಶ್ ಬಿ.ಝಳಕಿ ಕಳೆದ ತಿಂಗಳು ಸೇವೆಯಿಂದ ನಿವೃತ್ತರಾದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಕೆ.ಆರ್.ನಿರಂಜನ ಅವರಿಗೆ ಹೆಚ್ಚುವರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಹುದ್ದೆಯನ್ನೂ ನೀಡಲಾಗಿದೆ.<br /> <br /> ಅದೇ ದಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯುಕ್ತ ಕೆ.ಆರ್.ರಾಮಕೃಷ್ಣ ಅವರೂ ನಿವೃತ್ತರಾಗಿದ್ದರು. ಈ ಹುದ್ದೆಗೆ ಇನ್ನೂ ಯಾರನ್ನೂ ನಿಯೋಜನೆ ಮಾಡಿಲ್ಲ. ಇಲಾಖೆಯಲ್ಲಿ ಈಗ ಪೂರ್ಣ ಪ್ರಮಾಣದ ಕಾರ್ಯದರ್ಶಿ, ಆಯುಕ್ತರು ಮತ್ತು ನಿರ್ದೇಶಕರೇ ಇಲ್ಲ. ನಿರ್ದೇಶಕರ ಹುದ್ದೆಯಲ್ಲಿ ಕುಳಿತಿರುವ ಮುನಿರಾಜು ಅವರ ಕೈಗೆ ಇಡೀ ಇಲಾಖೆ ಸಾರಥ್ಯ ಸಿಕ್ಕಂತಾಗಿದೆ.<br /> <br /> <strong>ತನಿಖಾ ತಂಡಕ್ಕೆ ದೂರು</strong>: ಮುನಿರಾಜು ಅವರಿಗೆ ನಿರ್ದೇಶಕರ ಹುದ್ದೆಯ ಪ್ರಭಾರ ಒಪ್ಪಿಸಿರುವುದಕ್ಕೆ ಇಲಾಖೆಯ ಒಳಗೇ ಅಸಮಾಧಾನ ವ್ಯಕ್ತವಾಗಿದ್ದು, ಕೆಲವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ ಎನ್ನಲಾಗಿದೆ.<br /> <br /> <strong>ಮಹತ್ವದ ಘಟ್ಟದಲ್ಲಿ ತನಿಖೆ:</strong> ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಕೆಲವರು ಈವರೆಗೂ ಪ್ರಶಸ್ತಿಯನ್ನೇ ಪಡೆದಿಲ್ಲ. ಅವರಿಗೆ ನೀಡಬೇಕಾದ ಚಿನ್ನದ ಪದಕ, ನಗದು ಮತ್ತು ಪ್ರಶಸ್ತಿ ಫಲಕಗಳು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ಸುಪರ್ದಿಯಲ್ಲೇ ಇವೆ. ಅದರಲ್ಲಿ ಕೆಲ ಪದಕಗಳೇ ಕಣ್ಮರೆ ಆಗಿವೆ.<br /> <br /> ಇಲಾಖೆಯಲ್ಲಿ ಕಲಾವಿದರು ಮತ್ತು ವಿವಿಧ ಕಾರ್ಯಕ್ರಮಗಳಿಗೆ ಅನುದಾನ ಬಿಡುಗಡೆಯಲ್ಲಿ ಅಕ್ರಮ ನಡೆದಿದೆ, ಚೆಕ್ ಮೂಲಕ ವ್ಯವಹರಿಸದೇ ಕೋಟ್ಯಂತರ ರೂಪಾಯಿ ದುರ್ಬಳಕೆ ನಡೆದಿದೆ ಎಂಬ ದೂರುಗಳಿವೆ. ಈ ಬಗ್ಗೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು, ಜೂನ್ 24ರಂದು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ಮೇಲೆ ದಾಳಿ ಮಾಡಿ, ಶೋಧ ನಡೆಸಿದ್ದರು. 200ಕ್ಕೂ ಹೆಚ್ಚು ಕಡತಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.<br /> <br /> <strong>‘ಪರಿಶೀಲಿಸಿ ಕ್ರಮ‘</strong><br /> ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ, ‘ಮುನಿರಾಜು ಅವರು ನಿರ್ದೇಶಕರ ಹುದ್ದೆಯ ಪ್ರಭಾರವನ್ನು ಮಾತ್ರ ಹೊಂದಿದ್ದಾರೆ. ಇಲಾಖೆಯ ಆಯುಕ್ತರಾಗಿದ್ದ ಕೆ.ಆರ್.ರಾಮಕೃಷ್ಣ ಅವರು ನಿವೃತ್ತರಾಗುವ ಸಂದರ್ಭದಲ್ಲಿ ಹಿರಿತನದ ಆಧಾರದಲ್ಲಿ ಮುನಿರಾಜು ಅವರಿಗೆ ಪ್ರಭಾರ ಒಪ್ಪಿಸಿದ್ದರು. ಈ ಬಗ್ಗೆ ನಾನು ಯಾವುದೇ ಆದೇಶ ಹೊರಡಿಸಿಲ್ಲ’ ಎಂದು ತಿಳಿಸಿದರು. ‘ಮುನಿರಾಜು ಲೋಕಾಯುಕ್ತ ತನಿಖೆ ಎದುರಿಸುತ್ತಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಸೋಮವಾರ ಈ ಕುರಿತು ಇಲಾಖೆ ಕಾರ್ಯದರ್ಶಿ ಜೊತೆ ಚರ್ಚಿಸಿ ನಂತರ ಸೂಕ್ತ ಕ್ರಮ ಕೈಗೊಳ್ಳುತ್ತೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯೋತ್ಸವ ಪ್ರಶಸ್ತಿ ಜೊತೆ ನೀಡುವ ಬಂಗಾರದ ಪದಕಗಳ ಕಣ್ಮರೆ ಮತ್ತು ಇಲಾಖೆಯ ಅನುದಾನ ದುರ್ಬಳಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ತನಿಖೆ ಎದುರಿಸುತ್ತಿರುವ ಅಧಿಕಾರಿಗೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರ ಹುದ್ದೆಯ ಪ್ರಭಾರ ಒಪ್ಪಿಸಲಾಗಿದೆ. ಇದರಿಂದ ತನಿಖೆಗೆ ಹಿನ್ನಡೆಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.<br /> <br /> ಪದಕ ನಾಪತ್ತೆ ಮತ್ತು ಹಣ ದುರುಪಯೋಗ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಬಿ.ಟಿ.ಮುನಿರಾಜು ಅವರು ಲೋಕಾಯುಕ್ತ ತನಿಖೆ ಎದುರಿಸುತ್ತಿದ್ದಾರೆ. ಆದರೆ ವಾರದ ಹಿಂದೆ ಅವರನ್ನೇ ಇಲಾಖೆಯ ಪ್ರಭಾರಿ ನಿರ್ದೇಶಕ ಹುದ್ದೆಗೆ ನೇಮಕ ಮಾಡಲಾಗಿದೆ.<br /> <br /> <strong>ಇಲಾಖೆಯ ಸಾರಥ್ಯ</strong>: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಮೇಶ್ ಬಿ.ಝಳಕಿ ಕಳೆದ ತಿಂಗಳು ಸೇವೆಯಿಂದ ನಿವೃತ್ತರಾದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಕೆ.ಆರ್.ನಿರಂಜನ ಅವರಿಗೆ ಹೆಚ್ಚುವರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಹುದ್ದೆಯನ್ನೂ ನೀಡಲಾಗಿದೆ.<br /> <br /> ಅದೇ ದಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯುಕ್ತ ಕೆ.ಆರ್.ರಾಮಕೃಷ್ಣ ಅವರೂ ನಿವೃತ್ತರಾಗಿದ್ದರು. ಈ ಹುದ್ದೆಗೆ ಇನ್ನೂ ಯಾರನ್ನೂ ನಿಯೋಜನೆ ಮಾಡಿಲ್ಲ. ಇಲಾಖೆಯಲ್ಲಿ ಈಗ ಪೂರ್ಣ ಪ್ರಮಾಣದ ಕಾರ್ಯದರ್ಶಿ, ಆಯುಕ್ತರು ಮತ್ತು ನಿರ್ದೇಶಕರೇ ಇಲ್ಲ. ನಿರ್ದೇಶಕರ ಹುದ್ದೆಯಲ್ಲಿ ಕುಳಿತಿರುವ ಮುನಿರಾಜು ಅವರ ಕೈಗೆ ಇಡೀ ಇಲಾಖೆ ಸಾರಥ್ಯ ಸಿಕ್ಕಂತಾಗಿದೆ.<br /> <br /> <strong>ತನಿಖಾ ತಂಡಕ್ಕೆ ದೂರು</strong>: ಮುನಿರಾಜು ಅವರಿಗೆ ನಿರ್ದೇಶಕರ ಹುದ್ದೆಯ ಪ್ರಭಾರ ಒಪ್ಪಿಸಿರುವುದಕ್ಕೆ ಇಲಾಖೆಯ ಒಳಗೇ ಅಸಮಾಧಾನ ವ್ಯಕ್ತವಾಗಿದ್ದು, ಕೆಲವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ ಎನ್ನಲಾಗಿದೆ.<br /> <br /> <strong>ಮಹತ್ವದ ಘಟ್ಟದಲ್ಲಿ ತನಿಖೆ:</strong> ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಕೆಲವರು ಈವರೆಗೂ ಪ್ರಶಸ್ತಿಯನ್ನೇ ಪಡೆದಿಲ್ಲ. ಅವರಿಗೆ ನೀಡಬೇಕಾದ ಚಿನ್ನದ ಪದಕ, ನಗದು ಮತ್ತು ಪ್ರಶಸ್ತಿ ಫಲಕಗಳು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ಸುಪರ್ದಿಯಲ್ಲೇ ಇವೆ. ಅದರಲ್ಲಿ ಕೆಲ ಪದಕಗಳೇ ಕಣ್ಮರೆ ಆಗಿವೆ.<br /> <br /> ಇಲಾಖೆಯಲ್ಲಿ ಕಲಾವಿದರು ಮತ್ತು ವಿವಿಧ ಕಾರ್ಯಕ್ರಮಗಳಿಗೆ ಅನುದಾನ ಬಿಡುಗಡೆಯಲ್ಲಿ ಅಕ್ರಮ ನಡೆದಿದೆ, ಚೆಕ್ ಮೂಲಕ ವ್ಯವಹರಿಸದೇ ಕೋಟ್ಯಂತರ ರೂಪಾಯಿ ದುರ್ಬಳಕೆ ನಡೆದಿದೆ ಎಂಬ ದೂರುಗಳಿವೆ. ಈ ಬಗ್ಗೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು, ಜೂನ್ 24ರಂದು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ಮೇಲೆ ದಾಳಿ ಮಾಡಿ, ಶೋಧ ನಡೆಸಿದ್ದರು. 200ಕ್ಕೂ ಹೆಚ್ಚು ಕಡತಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.<br /> <br /> <strong>‘ಪರಿಶೀಲಿಸಿ ಕ್ರಮ‘</strong><br /> ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ, ‘ಮುನಿರಾಜು ಅವರು ನಿರ್ದೇಶಕರ ಹುದ್ದೆಯ ಪ್ರಭಾರವನ್ನು ಮಾತ್ರ ಹೊಂದಿದ್ದಾರೆ. ಇಲಾಖೆಯ ಆಯುಕ್ತರಾಗಿದ್ದ ಕೆ.ಆರ್.ರಾಮಕೃಷ್ಣ ಅವರು ನಿವೃತ್ತರಾಗುವ ಸಂದರ್ಭದಲ್ಲಿ ಹಿರಿತನದ ಆಧಾರದಲ್ಲಿ ಮುನಿರಾಜು ಅವರಿಗೆ ಪ್ರಭಾರ ಒಪ್ಪಿಸಿದ್ದರು. ಈ ಬಗ್ಗೆ ನಾನು ಯಾವುದೇ ಆದೇಶ ಹೊರಡಿಸಿಲ್ಲ’ ಎಂದು ತಿಳಿಸಿದರು. ‘ಮುನಿರಾಜು ಲೋಕಾಯುಕ್ತ ತನಿಖೆ ಎದುರಿಸುತ್ತಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಸೋಮವಾರ ಈ ಕುರಿತು ಇಲಾಖೆ ಕಾರ್ಯದರ್ಶಿ ಜೊತೆ ಚರ್ಚಿಸಿ ನಂತರ ಸೂಕ್ತ ಕ್ರಮ ಕೈಗೊಳ್ಳುತ್ತೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>