<p><strong>ಬೆಂಗಳೂರು:</strong> ಇಂಡಿ ಶಾಸಕ ಡಾ. ಸಾರ್ವಭೌಮ ಬಗಲಿ, ರಾಮನಗರ ಶಾಸಕ ಕೆ. ರಾಜು ಸೇರಿದಂತೆ ನಾಲ್ವರು ಶಾಸಕರು ಇನ್ನೂ ತಮ್ಮ ಆಸ್ತಿ ವಿವರ ಸಲ್ಲಿಸಿಲ್ಲ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್ ತಿಳಿಸಿದರು.<br /> <br /> ಇಲ್ಲಿನ ಲೋಕಾಯುಕ್ತ ಕಚೇರಿಯಲ್ಲಿ ಶನಿವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಜನಪ್ರತಿನಿಧಿಗಳು ತಮ್ಮ ಆಸ್ತಿ ವಿವರ ಸಲ್ಲಿಸಲು ಜೂನ್ 30 ಅಂತಿಮ ದಿನವಾಗಿತ್ತು. ಅಂದಿನವರೆಗೆ ವಿವರ ಸಲ್ಲಿಸದವರಿಗೆ ಆಗಸ್ಟ್ 30ರವರೆಗೂ ಅವಕಾಶ ಇತ್ತು. ಆದರೆ ನಾಲ್ವರು ಶಾಸಕರು ಇಂದಿನವರೆಗೂ ವಿವರ ಸಲ್ಲಿಸಿಲ್ಲ~ ಎಂದು ತಿಳಿಸಿದರು.<br /> <br /> ಆಸ್ತಿ ವಿವರ ಸಲ್ಲಿಸದ ಶಾಸಕರ ಹೆಸರನ್ನು ಪತ್ರಿಕೆಗಳ ಮೂಲಕ ಬಹಿರಂಗಪಡಿಸಲಾಗುವುದು. ವಾರ್ತಾ ಇಲಾಖೆಯ ನಿರ್ದೇಶಕರಿಗೆ ಈ ಕುರಿತು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.<br /> <br /> ಇಬ್ಬರು ವಿಧಾನ ಪರಿಷತ್ ಸದಸ್ಯರು ಶನಿವಾರ (ಸೆ. 3) ತಮ್ಮ ಆಸ್ತಿ ವಿವರ ಸಲ್ಲಿಸಿದ್ದಾರೆ. ಆದರೆ ಅವರು ಗಡುವನ್ನು ಮೀರಿರುವ ಕಾರಣ ಅವರ ಹೆಸರನ್ನೂ ಪತ್ರಿಕೆಗಳ ಮೂಲಕ ಬಹಿರಂಗ ಮಾಡಲಾಗುವುದು ಎಂದು ತಿಳಿಸಿದರು.<br /> <br /> ಆಸ್ತಿ ವಿವರ ಸಲ್ಲಿಸಲು ವಿಫಲರಾದವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲು ಅವಕಾಶ ಇದೆ. ಅವರಿಂದ ಬರುವ ಉತ್ತರ ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳಬಹುದು~ ಎಂದರು.<br /> <br /> <strong>`ಸ್ವಯಂಪ್ರೇರಿತ ಕ್ರಮ~:</strong> `ಡಾ. ಸಾರ್ವಭೌಮ ಬಗಲಿ, ಅವರ ಪುತ್ರ ಸಂಕೇತ ಬಗಲಿ ಮತ್ತು ವಿಜಾಪುರ ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಅನಿತಾ ಮಾಂಡ್ರೆ ಅವರು ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಫಲಾನುಭವಿಗಳಾಗಿದ್ದಾರೆ ಎಂಬ ಆರೋಪದ ಕುರಿತು ಸ್ವಯಂ ಪ್ರೇರಿತ ಕ್ರಮ ತೆಗೆದುಕೊಂಡಿದ್ದೇವೆ ಎಂದು ಪಾಟೀಲ್ ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಇಂಡಿ ಶಾಸಕ ಡಾ. ಸಾರ್ವಭೌಮ ಬಗಲಿ, ರಾಮನಗರ ಶಾಸಕ ಕೆ. ರಾಜು ಸೇರಿದಂತೆ ನಾಲ್ವರು ಶಾಸಕರು ಇನ್ನೂ ತಮ್ಮ ಆಸ್ತಿ ವಿವರ ಸಲ್ಲಿಸಿಲ್ಲ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್ ತಿಳಿಸಿದರು.<br /> <br /> ಇಲ್ಲಿನ ಲೋಕಾಯುಕ್ತ ಕಚೇರಿಯಲ್ಲಿ ಶನಿವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಜನಪ್ರತಿನಿಧಿಗಳು ತಮ್ಮ ಆಸ್ತಿ ವಿವರ ಸಲ್ಲಿಸಲು ಜೂನ್ 30 ಅಂತಿಮ ದಿನವಾಗಿತ್ತು. ಅಂದಿನವರೆಗೆ ವಿವರ ಸಲ್ಲಿಸದವರಿಗೆ ಆಗಸ್ಟ್ 30ರವರೆಗೂ ಅವಕಾಶ ಇತ್ತು. ಆದರೆ ನಾಲ್ವರು ಶಾಸಕರು ಇಂದಿನವರೆಗೂ ವಿವರ ಸಲ್ಲಿಸಿಲ್ಲ~ ಎಂದು ತಿಳಿಸಿದರು.<br /> <br /> ಆಸ್ತಿ ವಿವರ ಸಲ್ಲಿಸದ ಶಾಸಕರ ಹೆಸರನ್ನು ಪತ್ರಿಕೆಗಳ ಮೂಲಕ ಬಹಿರಂಗಪಡಿಸಲಾಗುವುದು. ವಾರ್ತಾ ಇಲಾಖೆಯ ನಿರ್ದೇಶಕರಿಗೆ ಈ ಕುರಿತು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.<br /> <br /> ಇಬ್ಬರು ವಿಧಾನ ಪರಿಷತ್ ಸದಸ್ಯರು ಶನಿವಾರ (ಸೆ. 3) ತಮ್ಮ ಆಸ್ತಿ ವಿವರ ಸಲ್ಲಿಸಿದ್ದಾರೆ. ಆದರೆ ಅವರು ಗಡುವನ್ನು ಮೀರಿರುವ ಕಾರಣ ಅವರ ಹೆಸರನ್ನೂ ಪತ್ರಿಕೆಗಳ ಮೂಲಕ ಬಹಿರಂಗ ಮಾಡಲಾಗುವುದು ಎಂದು ತಿಳಿಸಿದರು.<br /> <br /> ಆಸ್ತಿ ವಿವರ ಸಲ್ಲಿಸಲು ವಿಫಲರಾದವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲು ಅವಕಾಶ ಇದೆ. ಅವರಿಂದ ಬರುವ ಉತ್ತರ ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳಬಹುದು~ ಎಂದರು.<br /> <br /> <strong>`ಸ್ವಯಂಪ್ರೇರಿತ ಕ್ರಮ~:</strong> `ಡಾ. ಸಾರ್ವಭೌಮ ಬಗಲಿ, ಅವರ ಪುತ್ರ ಸಂಕೇತ ಬಗಲಿ ಮತ್ತು ವಿಜಾಪುರ ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಅನಿತಾ ಮಾಂಡ್ರೆ ಅವರು ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಫಲಾನುಭವಿಗಳಾಗಿದ್ದಾರೆ ಎಂಬ ಆರೋಪದ ಕುರಿತು ಸ್ವಯಂ ಪ್ರೇರಿತ ಕ್ರಮ ತೆಗೆದುಕೊಂಡಿದ್ದೇವೆ ಎಂದು ಪಾಟೀಲ್ ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>