ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಇಂದು ಬಿಜೆಪಿ ಶಕ್ತಿ ಪ್ರದರ್ಶನ

ಮೋದಿ, ಅಡ್ವಾಣಿ, ಸುಷ್ಮಾ ಗೈರು?
Published : 7 ಏಪ್ರಿಲ್ 2013, 19:30 IST
ಫಾಲೋ ಮಾಡಿ
Comments

ಬೆಂಗಳೂರು: ಚುನಾವಣಾ ತಯಾರಿಯ ಭಾಗವಾಗಿ ರಾಜ್ಯ ಬಿಜೆಪಿ ಆರಂಭಿಸಿದ್ದ `ವಿಜಯಸಂಕಲ್ಪ ಯಾತ್ರೆ'ಯ ಕೊನೆಯ ಸಮಾವೇಶ ಸೋಮವಾರ ಬೆಂಗಳೂರಿನ ಅರಮನೆ ಆವರಣದಲ್ಲಿ ನಡೆಯಲಿದೆ. ಇದು ಕಾರ್ಯಕರ್ತರ ಬೃಹತ್ ಶಕ್ತಿ ಪ್ರದರ್ಶನವಾಗಲಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಮುಖಂಡರಾದ ಅರುಣ್ ಜೇಟ್ಲಿ, ಧರ್ಮೇಂದ್ರ ಪ್ರಧಾನ್, ಅನಂತಕುಮಾರ್, ಡಿ.ವಿ.ಸದಾನಂದಗೌಡ, ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ, ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತಿತರರು ಭಾಗವಹಿಸಲಿದ್ದಾರೆ. ಆದರೆ ಎಲ್.ಕೆ.ಅಡ್ವಾಣಿ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಅವರು ಬರುತ್ತಿಲ್ಲ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಸಮಾರಂಭಕ್ಕೆ 40 ಅಡಿ ಅಗಲ ಹಾಗೂ 80 ಅಡಿ ಉದ್ದದ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ.

45 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT