ತಲ್ಲೂರು ಸುತ್ತಮುತ್ತ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಜಿಲ್ಲಾಧಿಕಾರಿ ಅವರು, ತಮ್ಮ ಹಾಗೂ ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಎರಡು ವಿಶೇಷ ತಂಡ ರಚನೆ ಮಾಡಿದ್ದರು. ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಅವರು ಭಾನುವಾರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ದಾಳಿ ನಡೆಸಿದಾಗ ಭಾರಿ ಸಂಖ್ಯೆಯಲ್ಲಿದ್ದ ದಂಧೆಕೋರರು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದರು. ಜಿಲ್ಲಾಧಿಕಾರಿ ಅವರಿಗೂ ಸಹ ಸಣ್ಣಪುಟ್ಟ ಗಾಯಗಳಾಗಿವೆ. ಈ ಬಗ್ಗೆ ಅವರು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನದ ದೂರು ದಾಖಲಿಸಿದ್ದಾರೆ.