<p><strong>ಬೆಂಗಳೂರು: </strong>ಉಡುಪಿ ಮಠದಲ್ಲಿ ಪಂಕ್ತಿ ಬೇಧ, ಮಡೆ ಸ್ನಾನ ನಿಷೇಧ, ಜಾತಿ ತಾರತಮ್ಯ, ಅಸ್ಪೃಶ್ಯತಾ ಆಚರಣೆ, ಸಾಮಾಜಿಕ ಬಹಿಷ್ಕಾರಗಳಿಗೆ ತಡೆ ಸೇರಿದಂತೆ ಜನಸಂಖ್ಯೆಗೆ ಅನುಗುಣವಾಗಿ ದಲಿತರ ಅಭಿವೃದ್ಧಿಗೆ ನೆರವು ನೀಡಲು ಕೇಂದ್ರ ಸರ್ಕಾರ `ಶಾಸನ~ ರೂಪಿಸುವಂತೆ ಒತ್ತಾಯಿಸಿ ಅಂಬೇಡ್ಕರ್ ಜನ್ಮ ದಿನವಾದ ಇದೇ 14 ರಂದು ರಾಜ್ಯದಾದ್ಯಂತ ಹೋರಾಟ ನಡೆಸಲು ಸಿಪಿಐ(ಎಂ) ನಿರ್ಧರಿಸಿದೆ.<br /> <br /> ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಿಪಿಐ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಮಾರುತಿ ಮಾನ್ಪಡೆ, `ರಾಜ್ಯದ ಮುಜರಾಯಿ ಇಲಾಖೆ ಅಧೀನದಲ್ಲಿನ 250ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ವರ್ಣಬೇಧ ಪದ್ಧತಿ ನಡೆಯುತ್ತಿದೆ. ಈ ಪದ್ಧತಿಯನ್ನು ಸಚಿವರು ಹಾಗೂ ಬಿಜೆಪಿ ಶಾಸಕರೇ ಬೆಂಬಲ ಸೂಚಿಸುವ ಮೂಲಕ ಸಂವಿಧಾನದ ಆಶಯಗಳನ್ನು ಉಲ್ಲಂಘನೆ ಮಾಡುತ್ತಿದ್ದಾರೆ~ ಎಂದು ಆರೋಪಿಸಿದರು.<br /> <br /> `ಮಡೆ ಸ್ನಾನದ ಹೆಸರಿನಲ್ಲಿ ಜನರಲ್ಲಿ ಮೂಢನಂಬಿಕೆಗಳನ್ನು ಬಿತ್ತುತ್ತಿರುವುದು ವಿಷಾದನೀಯ. ದೇಶವು ಸ್ವಾತಂತ್ರ್ಯ ಪಡೆದು 64 ವರ್ಷಗಳಾದರೂ ಸಮಾಜ ತಲೆ ತಗ್ಗಿಸುಂತಹ ಜಾತಿ ತಾರತಮ್ಯ, ಅಸ್ಪೃಶ್ಯತಾ ಆಚರಣೆ, ದಲಿತರ ಮೇಲಿನ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಲೇ ಇವೆ. <br /> <br /> ದೇಶದಲ್ಲಿ ಪ್ರತಿ ವರ್ಷ ಸುಮಾರು 30 ಸಾವಿರ ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತಿವೆ. ಅದರಲ್ಲೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ~ ಎಂದು ದೂರಿದರು.<br /> <br /> ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಎನ್.ನಾಗರಾಜ್, ಬೆಂಗಳೂರು ಉತ್ತರ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಗೋಪಾಲಕೃಷ್ಣ ಅರಳಹಳ್ಳಿ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಉಡುಪಿ ಮಠದಲ್ಲಿ ಪಂಕ್ತಿ ಬೇಧ, ಮಡೆ ಸ್ನಾನ ನಿಷೇಧ, ಜಾತಿ ತಾರತಮ್ಯ, ಅಸ್ಪೃಶ್ಯತಾ ಆಚರಣೆ, ಸಾಮಾಜಿಕ ಬಹಿಷ್ಕಾರಗಳಿಗೆ ತಡೆ ಸೇರಿದಂತೆ ಜನಸಂಖ್ಯೆಗೆ ಅನುಗುಣವಾಗಿ ದಲಿತರ ಅಭಿವೃದ್ಧಿಗೆ ನೆರವು ನೀಡಲು ಕೇಂದ್ರ ಸರ್ಕಾರ `ಶಾಸನ~ ರೂಪಿಸುವಂತೆ ಒತ್ತಾಯಿಸಿ ಅಂಬೇಡ್ಕರ್ ಜನ್ಮ ದಿನವಾದ ಇದೇ 14 ರಂದು ರಾಜ್ಯದಾದ್ಯಂತ ಹೋರಾಟ ನಡೆಸಲು ಸಿಪಿಐ(ಎಂ) ನಿರ್ಧರಿಸಿದೆ.<br /> <br /> ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಿಪಿಐ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಮಾರುತಿ ಮಾನ್ಪಡೆ, `ರಾಜ್ಯದ ಮುಜರಾಯಿ ಇಲಾಖೆ ಅಧೀನದಲ್ಲಿನ 250ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ವರ್ಣಬೇಧ ಪದ್ಧತಿ ನಡೆಯುತ್ತಿದೆ. ಈ ಪದ್ಧತಿಯನ್ನು ಸಚಿವರು ಹಾಗೂ ಬಿಜೆಪಿ ಶಾಸಕರೇ ಬೆಂಬಲ ಸೂಚಿಸುವ ಮೂಲಕ ಸಂವಿಧಾನದ ಆಶಯಗಳನ್ನು ಉಲ್ಲಂಘನೆ ಮಾಡುತ್ತಿದ್ದಾರೆ~ ಎಂದು ಆರೋಪಿಸಿದರು.<br /> <br /> `ಮಡೆ ಸ್ನಾನದ ಹೆಸರಿನಲ್ಲಿ ಜನರಲ್ಲಿ ಮೂಢನಂಬಿಕೆಗಳನ್ನು ಬಿತ್ತುತ್ತಿರುವುದು ವಿಷಾದನೀಯ. ದೇಶವು ಸ್ವಾತಂತ್ರ್ಯ ಪಡೆದು 64 ವರ್ಷಗಳಾದರೂ ಸಮಾಜ ತಲೆ ತಗ್ಗಿಸುಂತಹ ಜಾತಿ ತಾರತಮ್ಯ, ಅಸ್ಪೃಶ್ಯತಾ ಆಚರಣೆ, ದಲಿತರ ಮೇಲಿನ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಲೇ ಇವೆ. <br /> <br /> ದೇಶದಲ್ಲಿ ಪ್ರತಿ ವರ್ಷ ಸುಮಾರು 30 ಸಾವಿರ ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತಿವೆ. ಅದರಲ್ಲೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ~ ಎಂದು ದೂರಿದರು.<br /> <br /> ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಎನ್.ನಾಗರಾಜ್, ಬೆಂಗಳೂರು ಉತ್ತರ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಗೋಪಾಲಕೃಷ್ಣ ಅರಳಹಳ್ಳಿ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>