<p><strong>ಹುಬ್ಬಳ್ಳಿ: </strong>ಇಲ್ಲಿಯ ಉಣಕಲ್ ಸಿದ್ಧಪ್ಪಜ್ಜನ ತೊಟ್ಟಿಲೋತ್ಸವ ನಡೆಯುವ ಇದೇ 20ರಂದು ಮೂಲ ಗದ್ದುಗೆ ಮಠಕ್ಕೆ 94 ಕೆ.ಜಿ. ತೂಕದ ಬೆಳ್ಳಿ ರಥ ಅರ್ಪಿಸಲಾಗುತ್ತಿದೆ.<br /> <br /> ಸದ್ಗುರು ಸಿದ್ಧಪ್ಪಜ್ಜನ ಸೇವಾ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಬಿದರಿಕೊಪ್ಪ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಬೆಳ್ಳಿರಥ ಕುರಿತಾದ ವಿವರಗಳನ್ನು ನೀಡಿದರು.<br /> <br /> ಸಿದ್ಧಪ್ಪಜ್ಜನ ಸೇವಾ ಸಮಿತಿಯ ವತಿಯಿಂದ ಭಕ್ತರಿಂದ ದೇಣಿಗೆ ಸಂಗ್ರಹಿಸಿ ₨65 ಲಕ್ಷ ವೆಚ್ಚದಲ್ಲಿ 11.4 ಅಡಿ ಎತ್ತರದ ರಥ ನಿರ್ಮಿಸಲಾಗಿದೆ. ಇದೇ 19 ಹಾಗೂ 20ರಂದು ಎರಡು ದಿನ ಕಾಲ ರಥ ಅರ್ಪಣೆ ಕುರಿತಾದ ಧಾರ್ಮಿಕ ವಿಧಿ–ವಿಧಾನಗಳು ನಡೆಯಲಿವೆ ಎಂದರು.<br /> <br /> ಉತ್ತರ ಕನ್ನಡ ಜಿಲ್ಲೆ ಕುಮಟಾದ ಶಿಲ್ಪಿ ಸತೀಶ್ ಶೆಟ್ಟಿ ಸತತ ಆರು ತಿಂಗಳು ಶ್ರಮವಹಿಸಿ ಬೆಳ್ಳಿ ರಥ ನಿರ್ಮಿಸಿದ್ದು, 19ರಂದು ಬೆಳಿಗ್ಗೆ 8 ಗಂಟೆಗೆ ಬಾಲೇಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ ರಥ ಉದ್ಘಾಟಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಇಲ್ಲಿಯ ಉಣಕಲ್ ಸಿದ್ಧಪ್ಪಜ್ಜನ ತೊಟ್ಟಿಲೋತ್ಸವ ನಡೆಯುವ ಇದೇ 20ರಂದು ಮೂಲ ಗದ್ದುಗೆ ಮಠಕ್ಕೆ 94 ಕೆ.ಜಿ. ತೂಕದ ಬೆಳ್ಳಿ ರಥ ಅರ್ಪಿಸಲಾಗುತ್ತಿದೆ.<br /> <br /> ಸದ್ಗುರು ಸಿದ್ಧಪ್ಪಜ್ಜನ ಸೇವಾ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಬಿದರಿಕೊಪ್ಪ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಬೆಳ್ಳಿರಥ ಕುರಿತಾದ ವಿವರಗಳನ್ನು ನೀಡಿದರು.<br /> <br /> ಸಿದ್ಧಪ್ಪಜ್ಜನ ಸೇವಾ ಸಮಿತಿಯ ವತಿಯಿಂದ ಭಕ್ತರಿಂದ ದೇಣಿಗೆ ಸಂಗ್ರಹಿಸಿ ₨65 ಲಕ್ಷ ವೆಚ್ಚದಲ್ಲಿ 11.4 ಅಡಿ ಎತ್ತರದ ರಥ ನಿರ್ಮಿಸಲಾಗಿದೆ. ಇದೇ 19 ಹಾಗೂ 20ರಂದು ಎರಡು ದಿನ ಕಾಲ ರಥ ಅರ್ಪಣೆ ಕುರಿತಾದ ಧಾರ್ಮಿಕ ವಿಧಿ–ವಿಧಾನಗಳು ನಡೆಯಲಿವೆ ಎಂದರು.<br /> <br /> ಉತ್ತರ ಕನ್ನಡ ಜಿಲ್ಲೆ ಕುಮಟಾದ ಶಿಲ್ಪಿ ಸತೀಶ್ ಶೆಟ್ಟಿ ಸತತ ಆರು ತಿಂಗಳು ಶ್ರಮವಹಿಸಿ ಬೆಳ್ಳಿ ರಥ ನಿರ್ಮಿಸಿದ್ದು, 19ರಂದು ಬೆಳಿಗ್ಗೆ 8 ಗಂಟೆಗೆ ಬಾಲೇಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ ರಥ ಉದ್ಘಾಟಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>