<p>ಬೆಂಗಳೂರು: ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯು ತಾಂತ್ರಿಕ ಶಿಕ್ಷಣ ಗುಣಮಟ್ಟ ಸುಧಾರಣೆ ಯೋಜನೆ-2ರ ಅಡಿಯಲ್ಲಿ ಉತ್ಕೃಷ್ಟ ಶಿಕ್ಷಣ ಕೇಂದ್ರ (ಸೆಂಟರ್ ಆಫ್ ಎಕ್ಸಲೆನ್ಸ್) ಸ್ಥಾಪನೆಗೆ ರಾಜ್ಯದ ಮೂರು ಎಂಜಿನಿಯರಿಂಗ್ ಕಾಲೇಜುಗಳನ್ನು ಆಯ್ಕೆ ಮಾಡಿದೆ.<br /> <br /> ಮಂಗಳವಾರ ವಿಧಾನಸೌಧದಲ್ಲಿ ಈ ಕುರಿತು ಪತ್ರಕರ್ತರ ಜೊತೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಅವರು, ಬೆಂಗಳೂರಿನ ಪಿಇಎಸ್ ಎಂಜಿನಿಯರಿಂಗ್ ಕಾಲೇಜು, ತುಮಕೂರಿನ ಸಿದ್ದಗಂಗಾ ಎಂಜಿನಿಯರಿಂಗ್ ಕಾಲೇಜು ಮತ್ತು ಬೆಂಗಳೂರಿನ ಆರ್.ವಿ. ಎಂಜಿನಿಯರಿಂಗ್ ಕಾಲೇಜುಗಳನ್ನು ಈ ಯೋಜನೆಗೆ ಆಯ್ಕೆ ಮಾಡಲಾಗಿದೆ. ಈ ಸಂಸ್ಥೆಗಳಲ್ಲಿ ಸ್ಥಾಪಿಸುವ ಕೇಂದ್ರಗಳಲ್ಲಿ ಸಂಶೋಧನೆಗೆ ಅವಕಾಶ ನೀಡಲಾಗುತ್ತದೆ ಎಂದರು.<br /> <br /> ದೇಶದಲ್ಲಿ ಇಂತಹ 30 ಕೇಂದ್ರಗಳನ್ನು ಅಸ್ತಿತ್ವಕ್ಕೆ ತರಲಾಗುತ್ತಿದೆ. ಈ ಕಾಲೇಜುಗಳಿಗೆ ತಲಾ ಐದು ಕೋಟಿ ರೂಪಾಯಿ ಅನುದಾನ ನೀಡಲಾಗುತ್ತದೆ. ಕೇಂದ್ರ ಸರ್ಕಾರ ಶೇಕಡ 75ರಷ್ಟು ಮತ್ತು ರಾಜ್ಯ ಸರ್ಕಾರ ಶೇ 25ರಷ್ಟು ಅನುದಾನ ಒದಗಿಸುತ್ತದೆ ಎಂದು ತಿಳಿಸಿದರು.<br /> <br /> ತಾಂತ್ರಿಕ ಶಿಕ್ಷಣ ಗುಣಮಟ್ಟ ಸುಧಾರಣೆ ಯೋಜನೆಯ ಅಡಿಯಲ್ಲಿ ಈಗಾಗಲೇ ರಾಜ್ಯದ 16 ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಾಂತ್ರಿಕ ಶಿಕ್ಷಣ ಗುಣಮಟ್ಟ ವೃದ್ಧಿ ಕಾರ್ಯಕ್ರಮ ಜಾರಿಯಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯು ತಾಂತ್ರಿಕ ಶಿಕ್ಷಣ ಗುಣಮಟ್ಟ ಸುಧಾರಣೆ ಯೋಜನೆ-2ರ ಅಡಿಯಲ್ಲಿ ಉತ್ಕೃಷ್ಟ ಶಿಕ್ಷಣ ಕೇಂದ್ರ (ಸೆಂಟರ್ ಆಫ್ ಎಕ್ಸಲೆನ್ಸ್) ಸ್ಥಾಪನೆಗೆ ರಾಜ್ಯದ ಮೂರು ಎಂಜಿನಿಯರಿಂಗ್ ಕಾಲೇಜುಗಳನ್ನು ಆಯ್ಕೆ ಮಾಡಿದೆ.<br /> <br /> ಮಂಗಳವಾರ ವಿಧಾನಸೌಧದಲ್ಲಿ ಈ ಕುರಿತು ಪತ್ರಕರ್ತರ ಜೊತೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಅವರು, ಬೆಂಗಳೂರಿನ ಪಿಇಎಸ್ ಎಂಜಿನಿಯರಿಂಗ್ ಕಾಲೇಜು, ತುಮಕೂರಿನ ಸಿದ್ದಗಂಗಾ ಎಂಜಿನಿಯರಿಂಗ್ ಕಾಲೇಜು ಮತ್ತು ಬೆಂಗಳೂರಿನ ಆರ್.ವಿ. ಎಂಜಿನಿಯರಿಂಗ್ ಕಾಲೇಜುಗಳನ್ನು ಈ ಯೋಜನೆಗೆ ಆಯ್ಕೆ ಮಾಡಲಾಗಿದೆ. ಈ ಸಂಸ್ಥೆಗಳಲ್ಲಿ ಸ್ಥಾಪಿಸುವ ಕೇಂದ್ರಗಳಲ್ಲಿ ಸಂಶೋಧನೆಗೆ ಅವಕಾಶ ನೀಡಲಾಗುತ್ತದೆ ಎಂದರು.<br /> <br /> ದೇಶದಲ್ಲಿ ಇಂತಹ 30 ಕೇಂದ್ರಗಳನ್ನು ಅಸ್ತಿತ್ವಕ್ಕೆ ತರಲಾಗುತ್ತಿದೆ. ಈ ಕಾಲೇಜುಗಳಿಗೆ ತಲಾ ಐದು ಕೋಟಿ ರೂಪಾಯಿ ಅನುದಾನ ನೀಡಲಾಗುತ್ತದೆ. ಕೇಂದ್ರ ಸರ್ಕಾರ ಶೇಕಡ 75ರಷ್ಟು ಮತ್ತು ರಾಜ್ಯ ಸರ್ಕಾರ ಶೇ 25ರಷ್ಟು ಅನುದಾನ ಒದಗಿಸುತ್ತದೆ ಎಂದು ತಿಳಿಸಿದರು.<br /> <br /> ತಾಂತ್ರಿಕ ಶಿಕ್ಷಣ ಗುಣಮಟ್ಟ ಸುಧಾರಣೆ ಯೋಜನೆಯ ಅಡಿಯಲ್ಲಿ ಈಗಾಗಲೇ ರಾಜ್ಯದ 16 ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಾಂತ್ರಿಕ ಶಿಕ್ಷಣ ಗುಣಮಟ್ಟ ವೃದ್ಧಿ ಕಾರ್ಯಕ್ರಮ ಜಾರಿಯಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>