ಆದರೆ, ಮೈಸೂರಿನಲ್ಲಿ ಇತ್ತೀಚೆಗೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ್ದ ಸಿದ್ದರಾಮಯ್ಯ, ‘ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರ ಬಿಟ್ಟು ಎಲ್ಲಿಗೂ ಹೋಗುವುದಿಲ್ಲ. ಇದು ನನಗೆ ರಾಜಕೀಯವಾಗಿ ಜನ್ಮ ಮತ್ತು ಮರುಜನ್ಮ ನೀಡಿದ ಕ್ಷೇತ್ರ. ಈ ಕ್ಷೇತ್ರದ ಮತದಾರರ ಜೊತೆಗೆ ನನಗೆ ಭಾವನಾತ್ಮಕ ಸಂಬಂಧ ಇದೆ’ ಎಂದು ಹೇಳಿದ್ದರು.