ಗದಗ: ಲಕ್ಷ್ಮೇಶ್ವರದ ಲಿಂಬಯ್ಯಸ್ವಾಮಿಯ ಪ್ರತಿಭಾ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ‘ಮಾನವತಾವಾದಿ ಶ್ರೀ ಬಸವೇಶ್ವರ ಪ್ರಶಸ್ತಿ’ಗೆ ಚಿಕ್ಕಮಗಳೂರು ಜಿಲ್ಲೆಯ ಬೇಗಾರ ಗ್ರಾಮದ ಹೋಟೆಲ್ ಉದ್ಯಮಿ ಸುಧಾಕರ ಎಸ್. ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು ₹ 1 ಲಕ್ಷ ನಗದು ಹಾಗೂ ತಾಮ್ರ ಪತ್ರವನ್ನು ಒಳಗೊಂಡಿದೆ.
ಶೆಟ್ಟಿ ಅವರ ಸಮಾಜ ಸೇವೆಯನ್ನು ಗುರುತಿಸಿ ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ ಎಲ್. ಲಿಂಬಯ್ಯಸ್ವಾಮಿಮಠ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.