<p><strong>ಮೈಸೂರು/ ಚಾಮರಾಜನಗರ: </strong>ಪ್ರತಿಷ್ಠೆಯ ಕಣವಾಗಿರುವ ನಂಜನಗೂಡು ಹಾಗೂ ಗುಂಡ್ಲುಪೇಟೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಭಾನುವಾರ ಮತದಾನ ನಡೆಯಲಿದ್ದು, ಚುನಾವಣಾ ಆಯೋಗ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿವೆ.</p>.<p>ಎರಡೂ ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದ್ದು, ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಕೇಂದ್ರೀಯ ಅರೆ ಮೀಸಲು ಪೊಲೀಸ್ ಪಡೆಯ ತುಕಡಿಗಳು ಸೇರಿದಂತೆ ಸುಮಾರು 2,000 ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.</p>.<p>ನಂಜನಗೂಡು ಕ್ಷೇತ್ರದಲ್ಲಿ ಒಟ್ಟು 11 ಅಭ್ಯರ್ಥಿಗಳಿದ್ದರೂ ಕಾಂಗ್ರೆಸ್ನ ಕಳಲೆ ಕೇಶವಮೂರ್ತಿ ಹಾಗೂ ಬಿಜೆಪಿ ವಿ.ಶ್ರೀನಿವಾಸಪ್ರಸಾದ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಕಾಂಗ್ರೆಸ್ನಲ್ಲಿದ್ದ ಶ್ರೀನಿವಾಸಪ್ರಸಾದ್ ಅವರು ಡಿಸೆಂಬರ್ನಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಉಪಚುನಾವಣೆ ನಡೆಯುತ್ತಿದೆ.</p>.<p>ಗುಂಡ್ಲುಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ನ ಎಂ.ಸಿ.ಮೋಹನಕುಮಾರಿ (ಗೀತಾ) ಹಾಗೂ ಬಿಜೆಪಿ ಸಿ.ಎಸ್.ನಿರಂಜಕುಮಾರ್ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಎಚ್.ಎಸ್.ಮಹದೇವಪ್ರಸಾದ್ ಅಕಾಲಿಕ ನಿಧನದಿಂದಾಗಿ ಉಪಚುನಾವಣೆ ನಡೆಯುತ್ತಿದೆ.</p>.<p>ಉಪಚುನಾವಣಾ ಕರ್ತವ್ಯಕ್ಕೆ 1,375 ಸಿಬ್ಬಂದಿ ನಿಯೋಜಿಸಲಾಗಿದೆ. ಮತದಾನ ಮಾಡುವವರ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಹಿ ಹಾಕಲಾಗುತ್ತದೆ. ಮತದಾನಕ್ಕೆ ಅನುವು ಮಾಡಿಕೊಡಲು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಖಾನೆಗಳಿಗೆ ಹಾಗೂ ಇತರ ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.</p>.<p>ಉಪಚುನಾವಣೆಯು ಬಿಜೆಪಿ ಹಾಗೂ ಕಾಂಗ್ರೆಸ್ ಪಾಲಿಗೆ ಸತ್ವಪರೀಕ್ಷೆಯಾಗಿದ್ದು, ತನ್ನ ತೆಕ್ಕೆಯಲ್ಲಿರುವ ಕ್ಷೇತ್ರಗಳನ್ನು ಉಳಿಸಿಕೊಳ್ಳುವ ಅನಿವಾರ್ಯ ಕಾಂಗ್ರೆಸ್ಗೆ ಎದುರಾಗಿದೆ. ಚೊಚ್ಚಲ ಗೆಲುವಿನ ತವಕದಲ್ಲಿ ಬಿಜೆಪಿ ಇದೆ.</p>.<p>ಉಪಚುನಾವಣೆ ಘೋಷಣೆ ಆದಾಗಿನಿಂದ ಉಭಯ ಪಕ್ಷಗಳ ಘಟಾನುಘಟಿ ನಾಯಕರು ಅಖಾಡಕ್ಕಿಳಿದು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಇದರ ನಡುವೆ ಹಣ, ಮದ್ಯವೂ ಹರಿದಾಡಿದ ಆರೋಪವಿದೆ. ಅಭ್ಯರ್ಥಿಗಳು ಶನಿವಾರ ಮನೆಮನೆಗೆ ತೆರಳಿ ಮತಯಾಚಿಸುವ ಮೂಲಕ ಕೊನೆಯ ಹಂತದ ಕಸರತ್ತು ನಡೆಸಿದರು.</p>.<p><strong>ಮತ ಖಾತರಿ ವ್ಯವಸ್ಥೆ:</strong> ಪಾರದರ್ಶಕವಾಗಿ ಉಪಚುನಾವಣೆ ನಡೆಸುವ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಇದೇ ಮೊದಲ ಬಾರಿ ಮತ ಖಾತರಿ ಸೌಲಭ್ಯವಿರುವ ವಿವಿ ಪ್ಯಾಟ್ ಯಂತ್ರ ಬಳಸಲಾಗುತ್ತಿದೆ. ಏ. 13ರಂದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ.</p>.<p>* ನಂಜನಗೂಡು ಕ್ಷೇತ್ರದ 154 ಹಳ್ಳಿಗಳಲ್ಲಿ ಪೊಲೀಸರು ಕಾವಲು ಇರುತ್ತಾರೆ. ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ<br /> <strong>–ರವಿ ಡಿ.ಚನ್ನಣ್ಣನವರ, </strong>ಎಸ್ಪಿ, ಮೈಸೂರು</p>.<p>* ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು ವಿವಿ ಪ್ಯಾಟ್, ವಿದ್ಯುನ್ಮಾನ ಮತಯಂತ್ರಗಳನ್ನು ಹಲವು ಸುತ್ತುಗಳಲ್ಲಿ ತಪಾಸಣೆಗೆ ಒಳಪಡಿಸಲಾಗಿದೆ<br /> <strong>–ಡಿ.ರಂದೀಪ್, </strong>ಜಿಲ್ಲಾಧಿಕಾರಿ, ಮೈಸೂರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು/ ಚಾಮರಾಜನಗರ: </strong>ಪ್ರತಿಷ್ಠೆಯ ಕಣವಾಗಿರುವ ನಂಜನಗೂಡು ಹಾಗೂ ಗುಂಡ್ಲುಪೇಟೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಭಾನುವಾರ ಮತದಾನ ನಡೆಯಲಿದ್ದು, ಚುನಾವಣಾ ಆಯೋಗ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿವೆ.</p>.<p>ಎರಡೂ ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದ್ದು, ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಕೇಂದ್ರೀಯ ಅರೆ ಮೀಸಲು ಪೊಲೀಸ್ ಪಡೆಯ ತುಕಡಿಗಳು ಸೇರಿದಂತೆ ಸುಮಾರು 2,000 ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.</p>.<p>ನಂಜನಗೂಡು ಕ್ಷೇತ್ರದಲ್ಲಿ ಒಟ್ಟು 11 ಅಭ್ಯರ್ಥಿಗಳಿದ್ದರೂ ಕಾಂಗ್ರೆಸ್ನ ಕಳಲೆ ಕೇಶವಮೂರ್ತಿ ಹಾಗೂ ಬಿಜೆಪಿ ವಿ.ಶ್ರೀನಿವಾಸಪ್ರಸಾದ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಕಾಂಗ್ರೆಸ್ನಲ್ಲಿದ್ದ ಶ್ರೀನಿವಾಸಪ್ರಸಾದ್ ಅವರು ಡಿಸೆಂಬರ್ನಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಉಪಚುನಾವಣೆ ನಡೆಯುತ್ತಿದೆ.</p>.<p>ಗುಂಡ್ಲುಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ನ ಎಂ.ಸಿ.ಮೋಹನಕುಮಾರಿ (ಗೀತಾ) ಹಾಗೂ ಬಿಜೆಪಿ ಸಿ.ಎಸ್.ನಿರಂಜಕುಮಾರ್ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಎಚ್.ಎಸ್.ಮಹದೇವಪ್ರಸಾದ್ ಅಕಾಲಿಕ ನಿಧನದಿಂದಾಗಿ ಉಪಚುನಾವಣೆ ನಡೆಯುತ್ತಿದೆ.</p>.<p>ಉಪಚುನಾವಣಾ ಕರ್ತವ್ಯಕ್ಕೆ 1,375 ಸಿಬ್ಬಂದಿ ನಿಯೋಜಿಸಲಾಗಿದೆ. ಮತದಾನ ಮಾಡುವವರ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಹಿ ಹಾಕಲಾಗುತ್ತದೆ. ಮತದಾನಕ್ಕೆ ಅನುವು ಮಾಡಿಕೊಡಲು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಖಾನೆಗಳಿಗೆ ಹಾಗೂ ಇತರ ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.</p>.<p>ಉಪಚುನಾವಣೆಯು ಬಿಜೆಪಿ ಹಾಗೂ ಕಾಂಗ್ರೆಸ್ ಪಾಲಿಗೆ ಸತ್ವಪರೀಕ್ಷೆಯಾಗಿದ್ದು, ತನ್ನ ತೆಕ್ಕೆಯಲ್ಲಿರುವ ಕ್ಷೇತ್ರಗಳನ್ನು ಉಳಿಸಿಕೊಳ್ಳುವ ಅನಿವಾರ್ಯ ಕಾಂಗ್ರೆಸ್ಗೆ ಎದುರಾಗಿದೆ. ಚೊಚ್ಚಲ ಗೆಲುವಿನ ತವಕದಲ್ಲಿ ಬಿಜೆಪಿ ಇದೆ.</p>.<p>ಉಪಚುನಾವಣೆ ಘೋಷಣೆ ಆದಾಗಿನಿಂದ ಉಭಯ ಪಕ್ಷಗಳ ಘಟಾನುಘಟಿ ನಾಯಕರು ಅಖಾಡಕ್ಕಿಳಿದು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಇದರ ನಡುವೆ ಹಣ, ಮದ್ಯವೂ ಹರಿದಾಡಿದ ಆರೋಪವಿದೆ. ಅಭ್ಯರ್ಥಿಗಳು ಶನಿವಾರ ಮನೆಮನೆಗೆ ತೆರಳಿ ಮತಯಾಚಿಸುವ ಮೂಲಕ ಕೊನೆಯ ಹಂತದ ಕಸರತ್ತು ನಡೆಸಿದರು.</p>.<p><strong>ಮತ ಖಾತರಿ ವ್ಯವಸ್ಥೆ:</strong> ಪಾರದರ್ಶಕವಾಗಿ ಉಪಚುನಾವಣೆ ನಡೆಸುವ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಇದೇ ಮೊದಲ ಬಾರಿ ಮತ ಖಾತರಿ ಸೌಲಭ್ಯವಿರುವ ವಿವಿ ಪ್ಯಾಟ್ ಯಂತ್ರ ಬಳಸಲಾಗುತ್ತಿದೆ. ಏ. 13ರಂದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ.</p>.<p>* ನಂಜನಗೂಡು ಕ್ಷೇತ್ರದ 154 ಹಳ್ಳಿಗಳಲ್ಲಿ ಪೊಲೀಸರು ಕಾವಲು ಇರುತ್ತಾರೆ. ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ<br /> <strong>–ರವಿ ಡಿ.ಚನ್ನಣ್ಣನವರ, </strong>ಎಸ್ಪಿ, ಮೈಸೂರು</p>.<p>* ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು ವಿವಿ ಪ್ಯಾಟ್, ವಿದ್ಯುನ್ಮಾನ ಮತಯಂತ್ರಗಳನ್ನು ಹಲವು ಸುತ್ತುಗಳಲ್ಲಿ ತಪಾಸಣೆಗೆ ಒಳಪಡಿಸಲಾಗಿದೆ<br /> <strong>–ಡಿ.ರಂದೀಪ್, </strong>ಜಿಲ್ಲಾಧಿಕಾರಿ, ಮೈಸೂರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>