ತುಮಕೂರು: ಎಂ.ಬಿ.ಪಾಟೀಲ ಅವರಂತಹವರು ಪಕ್ಷದಲ್ಲಿ ಬಹಳಷ್ಟು ಮುಖಂಡರು ಇದ್ದು, ಉಪಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ. ಅವರ ಹಿಂದೆ ಹತ್ತು ಹದಿನೈದು ಶಾಸಕರು ಇದ್ದಾರೆ ಎಂಬುದು ಸುಳ್ಳು ಮಾಹಿತಿ ಎಂದು ಕಾರ್ಮಿಕ ಸಚಿವ ವೆಂಕಟರಣಪ್ಪ ತಿಳಿಸಿದರು.
ನಗರದ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಇರುವುದೇ ಆರೋಪ ಮಾಡುವುದಕ್ಕೆ. ಅದರ ಬಗ್ಗೆ ಹೇಳುವ ಅವಶ್ಯಕತೆ ಇಲ್ಲ. ಸಮ್ಮಿಶ್ರ ಸರ್ಕಾರ 5 ವರ್ಷಗಳ ಕಾಲ ಸುಭದ್ರವಾಗಿ ಕಾರ್ಯನಿರ್ವಹಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಮಿಕ ಆರೋಗ್ಯ ವಿಮೆ (ಇಎಸ್ಐ), ಭವಿಷ್ಯ ನಿಧಿ (ಪಿಎಫ್) ಮತ್ತಿತರ ಹೆಸರಿನಲ್ಲಿ ಕಾರ್ಮಿಕರು ಹಾಗೂ ಕಟ್ಟಡ ಕಾರ್ಮಿಕರಿಂದ ಹಣ ವಸೂಲಿ ಮಾಡಿ ವಂಚನೆ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.