ಕುಂದಾಪುರ: ಕುಂದೇಶ್ವರ ದೇವಸ್ಥಾನದ ಹಿಂದಿನ ಆಡಳಿತ ಧರ್ಮದರ್ಶಿ, ಶೃಂಗೇರಿ ಶ್ರೀ ಶಾರದ ಪೀಠದ ಪ್ರಾಂತೀಯ ಧರ್ಮಾಧಿಕಾರಿ, ವಿಶ್ರಾಂತ ಉಪನ್ಯಾಸಕ, ಸಾಹಿತಿ ಹಾಗೂ ಹಿರಿಯ ವಿದ್ವಾಂಸ ಡಾ.ಎಚ್.ವಿ.ನರಸಿಂಹಮೂರ್ತಿ (72) ಅಲ್ಪಕಾಲದ ಅಸೌಖ್ಯದಿಂದಾಗಿ ಬೆಂಗಳೂರಿನ ತಮ್ಮ ಪುತ್ರನ ಮನೆಯಲ್ಲಿ ಭಾನುವಾರ ಬೆಳಿಗ್ಗೆ ನಿಧನರಾದರು.