<p>ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನದ ಅಭ್ಯರ್ಥಿ ಎಂದು ಜೆಡಿಎಸ್ ಘೋಷಿಸುವ ಸಾಧ್ಯತೆ ಇದೆ. ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇಲ್ಲಿ ಸೋಮವಾರ ಆರಂಭವಾಗಿದ್ದು, ಮಂಗಳವಾರ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.<br /> <br /> ಇದಲ್ಲದೆ, ದೇಶದ ರಾಜಕೀಯ ಪರಿಸ್ಥಿತಿ ಹಾಗೂ ಆರ್ಥಿಕ ವಿಚಾರಗಳ ಕುರಿತೂ ಕೆಲವು ನಿರ್ಣಯಗಳನ್ನು ಸಭೆ, ಮಂಗಳವಾರ ತೆಗೆದುಕೊಳ್ಳಲಿದೆ ಎಂದು ಗೊತ್ತಾಗಿದೆ.<br /> <br /> ಕಾಂಗ್ರೆಸ್ ಹಾಗೂ ಬಿಜೆಪಿ ಆಂತರಿಕ ಕಚ್ಚಾಟ ಎದುರಿಸುತ್ತಿರುವ ಕಾರಣ, ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ಘೋಷಿಸುವ ಸ್ಥಿತಿಯಲ್ಲಿ ಈಗ ಇಲ್ಲ. ಈ ಪರಿಸ್ಥಿತಿಯ ಲಾಭ ಪಡೆದುಕೊಳ್ಳಲು ಕುಮಾರಸ್ವಾಮಿ ಅವರನ್ನು ಜೆಡಿಎಸ್ನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂಬ ಸಲಹೆಯನ್ನು ಪಕ್ಷದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಪಿ.ಜಿ.ಆರ್. ಸಿಂಧ್ಯ ಅವರು ಮುಂದಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.<br /> <br /> ಈ ಸಲಹೆಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಸಮ್ಮತಿ ಸೂಚಿಸಿದ್ದಾರೆ. ನಿರ್ಣಯಗಳ ಕರಡು ಸಿದ್ಧಪಡಿಸಲು ಸಿಂಧ್ಯ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ರಾಜ್ಯದ ಈಗಿನ ರಾಜಕೀಯ ಪರಿಸ್ಥಿತಿ ಹಾಗೂ ರಾಷ್ಟ್ರದ ಆರ್ಥಿಕ ಪರಿಸ್ಥಿತಿ ಕುರಿತು ಸಭೆ ಚರ್ಚಿಸಿದೆ.<br /> <br /> ಸೋಮವಾರದ ಸಭೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಪಕ್ಷದ ವಕ್ತಾರ ವೈ.ಎಸ್.ವಿ. ದತ್ತ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರು, ಸ್ವಾಮಿ ವಿವೇಕಾನಂದ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಅವರ ಬೌದ್ಧಿಕ ಮಟ್ಟವನ್ನು ಹೋಲಿಸಿ ಮಾತನಾಡಿದ್ದನ್ನು ಕಟುವಾಗಿ ಟೀಕಿಸಿದರು. `ಗಡ್ಕರಿ ಅವರು ವಿವೇಕಾನಂದರಂಥ ಮಹಾನ್ ಚೇತನವನ್ನು ಅವಮಾನಿಸಿದ್ದಾರೆ. ಅವರು ರಾಷ್ಟ್ರದ ಕ್ಷಮೆ ಕೋರಬೇಕು~ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನದ ಅಭ್ಯರ್ಥಿ ಎಂದು ಜೆಡಿಎಸ್ ಘೋಷಿಸುವ ಸಾಧ್ಯತೆ ಇದೆ. ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇಲ್ಲಿ ಸೋಮವಾರ ಆರಂಭವಾಗಿದ್ದು, ಮಂಗಳವಾರ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.<br /> <br /> ಇದಲ್ಲದೆ, ದೇಶದ ರಾಜಕೀಯ ಪರಿಸ್ಥಿತಿ ಹಾಗೂ ಆರ್ಥಿಕ ವಿಚಾರಗಳ ಕುರಿತೂ ಕೆಲವು ನಿರ್ಣಯಗಳನ್ನು ಸಭೆ, ಮಂಗಳವಾರ ತೆಗೆದುಕೊಳ್ಳಲಿದೆ ಎಂದು ಗೊತ್ತಾಗಿದೆ.<br /> <br /> ಕಾಂಗ್ರೆಸ್ ಹಾಗೂ ಬಿಜೆಪಿ ಆಂತರಿಕ ಕಚ್ಚಾಟ ಎದುರಿಸುತ್ತಿರುವ ಕಾರಣ, ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ಘೋಷಿಸುವ ಸ್ಥಿತಿಯಲ್ಲಿ ಈಗ ಇಲ್ಲ. ಈ ಪರಿಸ್ಥಿತಿಯ ಲಾಭ ಪಡೆದುಕೊಳ್ಳಲು ಕುಮಾರಸ್ವಾಮಿ ಅವರನ್ನು ಜೆಡಿಎಸ್ನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂಬ ಸಲಹೆಯನ್ನು ಪಕ್ಷದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಪಿ.ಜಿ.ಆರ್. ಸಿಂಧ್ಯ ಅವರು ಮುಂದಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.<br /> <br /> ಈ ಸಲಹೆಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಸಮ್ಮತಿ ಸೂಚಿಸಿದ್ದಾರೆ. ನಿರ್ಣಯಗಳ ಕರಡು ಸಿದ್ಧಪಡಿಸಲು ಸಿಂಧ್ಯ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ರಾಜ್ಯದ ಈಗಿನ ರಾಜಕೀಯ ಪರಿಸ್ಥಿತಿ ಹಾಗೂ ರಾಷ್ಟ್ರದ ಆರ್ಥಿಕ ಪರಿಸ್ಥಿತಿ ಕುರಿತು ಸಭೆ ಚರ್ಚಿಸಿದೆ.<br /> <br /> ಸೋಮವಾರದ ಸಭೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಪಕ್ಷದ ವಕ್ತಾರ ವೈ.ಎಸ್.ವಿ. ದತ್ತ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರು, ಸ್ವಾಮಿ ವಿವೇಕಾನಂದ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಅವರ ಬೌದ್ಧಿಕ ಮಟ್ಟವನ್ನು ಹೋಲಿಸಿ ಮಾತನಾಡಿದ್ದನ್ನು ಕಟುವಾಗಿ ಟೀಕಿಸಿದರು. `ಗಡ್ಕರಿ ಅವರು ವಿವೇಕಾನಂದರಂಥ ಮಹಾನ್ ಚೇತನವನ್ನು ಅವಮಾನಿಸಿದ್ದಾರೆ. ಅವರು ರಾಷ್ಟ್ರದ ಕ್ಷಮೆ ಕೋರಬೇಕು~ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>