<p><strong>ಬೆಂಗಳೂರು:</strong> ಎತ್ತಿನಹೊಳೆ ಯೋಜನೆ ಅನುಷ್ಠಾನಗೊಳಿಸುವಲ್ಲಿ ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಸದಸ್ಯ ಡಿ.ಎಸ್. ವೀರಯ್ಯ ಮಂಗಳವಾರ ವಿಧಾನಪರಿಷತ್ನಲ್ಲಿ ಸಭಾಪತಿ ಪೀಠದ ಮುಂದೆ ಧರಣಿ ನಡೆಸಿದ ಪ್ರಸಂಗ ನಡೆಯಿತು.<br /> <br /> ನಿಯಮ 330ರ ಮೇರೆಗೆ ಈ ವಿಷಯ ಪ್ರಸ್ತಾಪಿಸಿದ ಅವರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಈ ವಿಷಯದಲ್ಲಿ ರಾಜಕೀಯವೂ ನಡೆಯುತ್ತಿದೆ. ಆದರೆ, ಇದು ರಾಜಕೀಯದ ಪ್ರಶ್ನೆ ಅಲ್ಲ. ಜನರ ಜೀವನ್ಮರಣದ ಪ್ರಶ್ನೆಯಾಗಿದೆ. ಕುಡಿಯುವ ನೀರಿಗಾಗಿ ಪರದಾಡುತ್ತಿರುವ ಜನರ ಶಾಪ ಸರ್ಕಾರಕ್ಕೆ ತಟ್ಟುತ್ತದೆ. ಸರ್ಕಾರ ಕುಡಿಯುವ ನೀರಿನ ವಿಷಯದಲ್ಲಿ ನಿರ್ಲಕ್ಷ್ಯವಹಿಸದೆ ಯೋಜನೆಯನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.<br /> <br /> ಇದೇ ವಿಷಯದ ಬಗ್ಗೆ ಮಾತನಾಡಿದ ಜೆಡಿಎಸ್ ನಾಯಕ ಎಂ.ಸಿ. ನಾಣಯ್ಯ, ನದಿ ನೀರನ್ನು ತಿರುಗಿಸುವ ಈ ಯೋಜನೆಗೆ ಸಾಕಷ್ಟು ವಿರೋಧವೂ ಇದೆ. ಆದ್ದರಿಂದ, ಜನರಲ್ಲಿ ಮೂಡಿರುವ ಗೊಂದಲ, ಆತಂಕಗಳನ್ನು ದೂರ ಮಾಡುವ ಬಗ್ಗೆ ಸರ್ಕಾರ ಚಿಂತನೆ ಮಾಡಬೇಕು. ಎಲ್ಲ ಪಕ್ಷಗಳ ನಾಯಕರ ಸಭೆ ನಡೆಸಬೇಕು. ಇದು ರಾಜ್ಯ ಸರ್ಕಾರದ ಯೋಜನೆಯಾಗಿರುವುದರಿಂದ ಈ ಯೋಜನೆಗೆ ಕೇಂದ್ರ ಸರ್ಕಾರ ಶಂಕು ಸ್ಥಾಪನೆ ಮಾಡಬಾರದು ಎಂದರು.<br /> <br /> ಬಿಜೆಪಿ ಸದಸ್ಯೆ ಪ್ರೊ.ಎಸ್.ಆರ್. ಲೀಲಾ ಮಾತನಾಡಿ, ಜಿಲ್ಲೆಗಳ ಮಧ್ಯೆ ದ್ವೇಷ ಬೆಳೆಸುವ ವಾತಾವರಣ ಕಲ್ಪಿಸುವುದು ಬೇಡ. ಯೋಜನೆ ಬಗ್ಗೆ ತಂತ್ರಜ್ಞರು ಮತ್ತು ರಾಜಕಾರಣಿಗಳ ಜತೆ ಪೂರ್ವಭಾವಿ ಸಭೆ ನಡೆಸಿ ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದರು.<br /> ನಂತರ ಜಲಸಂಪನ್ಮೂಲ ಸಚಿವ ಎಂ.ಬಿ . ಪಾಟೀಲ್ ಅವರಉತ್ತರದಿಂದ ಸಮಾಧಾನಗೊಳ್ಳದ ವೀರಯ್ಯ, ಸಭಾಪತಿ ಪೀಠದ ಮುಂದೆ ಕೆಲಕಾಲ ಧರಣಿ ನಡೆಸಿದರು.</p>.<p><strong>‘ಒಂದು ವಾರದಲ್ಲಿ ಕಾರ್ಯಾದೇಶ’</strong><br /> ಎತ್ತಿನಹೊಳೆ ಯೋಜನೆಯ ಅನುಷ್ಠಾನದ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಕಾಮಗಾರಿಗೆ ಒಂದು ವಾರದಲ್ಲಿ ಕಾರ್ಯಾದೇಶ ನೀಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು.</p>.<p>ಈಗಾಗಲೇ ₨ 12,912 ಕೋಟಿ ಮೊತ್ತದ ಪರಿಷ್ಕೃತ ವಿವರವಾದ ಯೋಜನಾ ವರದಿ ತಯಾರಿಸಲಾಗಿದೆ. ಇದು ಕೇವಲ ಕುಡಿಯುವ ನೀರಿನ ಯೋಜನೆಯಾಗಿರುವುದರಿಂದ ಪರಿಸರ ಇಲಾಖೆಯ ಅನುಮೋದನೆ ದೊರೆತಿದೆ. ಆದರೂ, ಜನರಲ್ಲಿ ಮೂಡಿರುವ ಆತಂಕಗಳನ್ನು ದೂರ ಮಾಡಲು ಶೀಘ್ರ ಜನಪ್ರತಿನಿಧಿಗಳ ಸಭೆ ಕರೆದು ಪರಿಹಾರ ರೂಪಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಎತ್ತಿನಹೊಳೆ ಯೋಜನೆ ಅನುಷ್ಠಾನಗೊಳಿಸುವಲ್ಲಿ ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಸದಸ್ಯ ಡಿ.ಎಸ್. ವೀರಯ್ಯ ಮಂಗಳವಾರ ವಿಧಾನಪರಿಷತ್ನಲ್ಲಿ ಸಭಾಪತಿ ಪೀಠದ ಮುಂದೆ ಧರಣಿ ನಡೆಸಿದ ಪ್ರಸಂಗ ನಡೆಯಿತು.<br /> <br /> ನಿಯಮ 330ರ ಮೇರೆಗೆ ಈ ವಿಷಯ ಪ್ರಸ್ತಾಪಿಸಿದ ಅವರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಈ ವಿಷಯದಲ್ಲಿ ರಾಜಕೀಯವೂ ನಡೆಯುತ್ತಿದೆ. ಆದರೆ, ಇದು ರಾಜಕೀಯದ ಪ್ರಶ್ನೆ ಅಲ್ಲ. ಜನರ ಜೀವನ್ಮರಣದ ಪ್ರಶ್ನೆಯಾಗಿದೆ. ಕುಡಿಯುವ ನೀರಿಗಾಗಿ ಪರದಾಡುತ್ತಿರುವ ಜನರ ಶಾಪ ಸರ್ಕಾರಕ್ಕೆ ತಟ್ಟುತ್ತದೆ. ಸರ್ಕಾರ ಕುಡಿಯುವ ನೀರಿನ ವಿಷಯದಲ್ಲಿ ನಿರ್ಲಕ್ಷ್ಯವಹಿಸದೆ ಯೋಜನೆಯನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.<br /> <br /> ಇದೇ ವಿಷಯದ ಬಗ್ಗೆ ಮಾತನಾಡಿದ ಜೆಡಿಎಸ್ ನಾಯಕ ಎಂ.ಸಿ. ನಾಣಯ್ಯ, ನದಿ ನೀರನ್ನು ತಿರುಗಿಸುವ ಈ ಯೋಜನೆಗೆ ಸಾಕಷ್ಟು ವಿರೋಧವೂ ಇದೆ. ಆದ್ದರಿಂದ, ಜನರಲ್ಲಿ ಮೂಡಿರುವ ಗೊಂದಲ, ಆತಂಕಗಳನ್ನು ದೂರ ಮಾಡುವ ಬಗ್ಗೆ ಸರ್ಕಾರ ಚಿಂತನೆ ಮಾಡಬೇಕು. ಎಲ್ಲ ಪಕ್ಷಗಳ ನಾಯಕರ ಸಭೆ ನಡೆಸಬೇಕು. ಇದು ರಾಜ್ಯ ಸರ್ಕಾರದ ಯೋಜನೆಯಾಗಿರುವುದರಿಂದ ಈ ಯೋಜನೆಗೆ ಕೇಂದ್ರ ಸರ್ಕಾರ ಶಂಕು ಸ್ಥಾಪನೆ ಮಾಡಬಾರದು ಎಂದರು.<br /> <br /> ಬಿಜೆಪಿ ಸದಸ್ಯೆ ಪ್ರೊ.ಎಸ್.ಆರ್. ಲೀಲಾ ಮಾತನಾಡಿ, ಜಿಲ್ಲೆಗಳ ಮಧ್ಯೆ ದ್ವೇಷ ಬೆಳೆಸುವ ವಾತಾವರಣ ಕಲ್ಪಿಸುವುದು ಬೇಡ. ಯೋಜನೆ ಬಗ್ಗೆ ತಂತ್ರಜ್ಞರು ಮತ್ತು ರಾಜಕಾರಣಿಗಳ ಜತೆ ಪೂರ್ವಭಾವಿ ಸಭೆ ನಡೆಸಿ ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದರು.<br /> ನಂತರ ಜಲಸಂಪನ್ಮೂಲ ಸಚಿವ ಎಂ.ಬಿ . ಪಾಟೀಲ್ ಅವರಉತ್ತರದಿಂದ ಸಮಾಧಾನಗೊಳ್ಳದ ವೀರಯ್ಯ, ಸಭಾಪತಿ ಪೀಠದ ಮುಂದೆ ಕೆಲಕಾಲ ಧರಣಿ ನಡೆಸಿದರು.</p>.<p><strong>‘ಒಂದು ವಾರದಲ್ಲಿ ಕಾರ್ಯಾದೇಶ’</strong><br /> ಎತ್ತಿನಹೊಳೆ ಯೋಜನೆಯ ಅನುಷ್ಠಾನದ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಕಾಮಗಾರಿಗೆ ಒಂದು ವಾರದಲ್ಲಿ ಕಾರ್ಯಾದೇಶ ನೀಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು.</p>.<p>ಈಗಾಗಲೇ ₨ 12,912 ಕೋಟಿ ಮೊತ್ತದ ಪರಿಷ್ಕೃತ ವಿವರವಾದ ಯೋಜನಾ ವರದಿ ತಯಾರಿಸಲಾಗಿದೆ. ಇದು ಕೇವಲ ಕುಡಿಯುವ ನೀರಿನ ಯೋಜನೆಯಾಗಿರುವುದರಿಂದ ಪರಿಸರ ಇಲಾಖೆಯ ಅನುಮೋದನೆ ದೊರೆತಿದೆ. ಆದರೂ, ಜನರಲ್ಲಿ ಮೂಡಿರುವ ಆತಂಕಗಳನ್ನು ದೂರ ಮಾಡಲು ಶೀಘ್ರ ಜನಪ್ರತಿನಿಧಿಗಳ ಸಭೆ ಕರೆದು ಪರಿಹಾರ ರೂಪಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>