<p>ಬೆಂಗಳೂರು: ಐಎಎಸ್ ಅಧಿಕಾರಿಯೂ ಆದ ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿ ಎಸ್.ದಯಾಶಂಕರ್ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ.<br /> <br /> ಈ ಸಂಬಂಧ ಶುಕ್ರವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಲಿದ್ದು, ಒಂದೆರಡು ದಿನದಲ್ಲಿ ರಾಜ್ಯಪಾಲರು ಅದಕ್ಕೆ ಒಪ್ಪಿಗೆ ನೀಡಲಿದ್ದಾರೆ ಎಂದು ಗೊತ್ತಾಗಿದೆ.<br /> <br /> ಕೆಪಿಎಸ್ಸಿ ಸದಸ್ಯರಾಗಿದ್ದ ಎಸ್.ರುದ್ರೇಗೌಡ ಇದೇ 8ರಂದು ನಿವೃತ್ತಿಯಾಗಿದ್ದು, ಆ ಜಾಗಕ್ಕೆ ದಯಾಶಂಕರ್ ಅವರನ್ನು ನೇಮಿಸಲು ತೀರ್ಮಾನಿಸಲಾಗಿದೆ. ನಿವೃತ್ತಿಯಾದ ರುದ್ರೇಗೌಡ ಲಿಂಗಾಯತರು. ಈ ಕಾರಣಕ್ಕೆ ಅದೇ ಸಮುದಾಯದ ದಯಾಶಂಕರ್ ಅವರನ್ನು ನೇಮಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.<br /> <br /> ಕೆ.ಎ.ಎಸ್ಯೇತರ ಅಧಿಕಾರಿಯಾಗಿದ್ದ ಅವರಿಗೆ ಐಎಎಸ್ಗೆ ಬಡ್ತಿ ನೀಡಲಾಗಿತ್ತು. ಇವರ ಸೇವಾವಧಿ ಇನ್ನೂ ಮೂರುವರೆ ವರ್ಷ ಇದೆ. ಸದಸ್ಯರಾಗಿ ನೇಮಕವಾದರೆ ಅವರಿಗೆ ಆರು ವರ್ಷ ಸೇವೆ ಸಲ್ಲಿಸುವ ಅವಕಾಶ ಸಿಗುತ್ತದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಐಎಎಸ್ ಅಧಿಕಾರಿಯೂ ಆದ ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿ ಎಸ್.ದಯಾಶಂಕರ್ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ.<br /> <br /> ಈ ಸಂಬಂಧ ಶುಕ್ರವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಲಿದ್ದು, ಒಂದೆರಡು ದಿನದಲ್ಲಿ ರಾಜ್ಯಪಾಲರು ಅದಕ್ಕೆ ಒಪ್ಪಿಗೆ ನೀಡಲಿದ್ದಾರೆ ಎಂದು ಗೊತ್ತಾಗಿದೆ.<br /> <br /> ಕೆಪಿಎಸ್ಸಿ ಸದಸ್ಯರಾಗಿದ್ದ ಎಸ್.ರುದ್ರೇಗೌಡ ಇದೇ 8ರಂದು ನಿವೃತ್ತಿಯಾಗಿದ್ದು, ಆ ಜಾಗಕ್ಕೆ ದಯಾಶಂಕರ್ ಅವರನ್ನು ನೇಮಿಸಲು ತೀರ್ಮಾನಿಸಲಾಗಿದೆ. ನಿವೃತ್ತಿಯಾದ ರುದ್ರೇಗೌಡ ಲಿಂಗಾಯತರು. ಈ ಕಾರಣಕ್ಕೆ ಅದೇ ಸಮುದಾಯದ ದಯಾಶಂಕರ್ ಅವರನ್ನು ನೇಮಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.<br /> <br /> ಕೆ.ಎ.ಎಸ್ಯೇತರ ಅಧಿಕಾರಿಯಾಗಿದ್ದ ಅವರಿಗೆ ಐಎಎಸ್ಗೆ ಬಡ್ತಿ ನೀಡಲಾಗಿತ್ತು. ಇವರ ಸೇವಾವಧಿ ಇನ್ನೂ ಮೂರುವರೆ ವರ್ಷ ಇದೆ. ಸದಸ್ಯರಾಗಿ ನೇಮಕವಾದರೆ ಅವರಿಗೆ ಆರು ವರ್ಷ ಸೇವೆ ಸಲ್ಲಿಸುವ ಅವಕಾಶ ಸಿಗುತ್ತದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>