<p><strong>ಕಲಬುರ್ಗಿ:</strong> ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯು ಸುಪ್ರೀಂ ಕೋರ್ಟ್ ತೀರ್ಪಿನಿಂದ ದುರ್ಬಲಗೊಂಡಿದೆ. ಈ ಸಮುದಾಯಗಳ ಹಿತರಕ್ಷಣೆಗಾಗಿ ಕೇಂದ್ರ ಸರ್ಕಾರ ಏಕೆ ಸುಗ್ರೀವಾಜ್ಞೆ ಹೊರಡಿಸಿಲ್ಲ’ ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದರು.</p>.<p>‘ಕೇಂದ್ರ ಸರ್ಕಾರ ತನಗೆ ಬೇಕಿರುವ ವಿಷಯಗಳಿಗೆ ಮಾತ್ರ ಆಸಕ್ತಿ ವಹಿಸುತ್ತಿದೆ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.</p>.<p>‘ದೌರ್ಜನ್ಯವೆಸಗಿದವರ ಮೇಲೆ ಎಫ್ಐಆರ್ ದಾಖಲಿಸಿ ತಕ್ಷಣ ಬಂಧಿಸದಿದ್ದರೆ ಅದು ದೌರ್ಜನ್ಯಕ್ಕೆ ದಾರಿಮಾಡಿ ಕೊಡುತ್ತದೆ. ಈ ಕಾಯ್ದೆ ಹಿಂದೆ ಹೇಗಿತ್ತೋ ಹಾಗೇ ಇರಬೇಕು’ ಎಂದು ಆಗ್ರಹಿಸಿದರು.</p>.<p>‘ಕಾಂಗ್ರೆಸ್ನ ಕೈಗೂ ಮುಸ್ಲಿಮರ ರಕ್ತದ ಕಲೆ ಅಂಟಿದೆ ಎಂಬ ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಹೇಳಿಕೆಯನ್ನು ಗಮನಿಸಿಲ್ಲ. ರಾಜ್ಯದಲ್ಲಿ ಪ್ರಚಾರಕ್ಕೆ ಪ್ರಿಯಾಂಕಾ ವಾದ್ರಾ ಬರಲ್ಲ. ಜೆಡಿಎಸ್ನೊಂದಿಗೆ ಚುನಾವಣೋತ್ತರ ಹೊಂದಾಣಿಕೆಯ ಪ್ರಶ್ನೆ ಊಹಾಪೋಹದಿಂದ ಕೂಡಿದೆ’ ಎಂದು ಅವರು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯು ಸುಪ್ರೀಂ ಕೋರ್ಟ್ ತೀರ್ಪಿನಿಂದ ದುರ್ಬಲಗೊಂಡಿದೆ. ಈ ಸಮುದಾಯಗಳ ಹಿತರಕ್ಷಣೆಗಾಗಿ ಕೇಂದ್ರ ಸರ್ಕಾರ ಏಕೆ ಸುಗ್ರೀವಾಜ್ಞೆ ಹೊರಡಿಸಿಲ್ಲ’ ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದರು.</p>.<p>‘ಕೇಂದ್ರ ಸರ್ಕಾರ ತನಗೆ ಬೇಕಿರುವ ವಿಷಯಗಳಿಗೆ ಮಾತ್ರ ಆಸಕ್ತಿ ವಹಿಸುತ್ತಿದೆ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.</p>.<p>‘ದೌರ್ಜನ್ಯವೆಸಗಿದವರ ಮೇಲೆ ಎಫ್ಐಆರ್ ದಾಖಲಿಸಿ ತಕ್ಷಣ ಬಂಧಿಸದಿದ್ದರೆ ಅದು ದೌರ್ಜನ್ಯಕ್ಕೆ ದಾರಿಮಾಡಿ ಕೊಡುತ್ತದೆ. ಈ ಕಾಯ್ದೆ ಹಿಂದೆ ಹೇಗಿತ್ತೋ ಹಾಗೇ ಇರಬೇಕು’ ಎಂದು ಆಗ್ರಹಿಸಿದರು.</p>.<p>‘ಕಾಂಗ್ರೆಸ್ನ ಕೈಗೂ ಮುಸ್ಲಿಮರ ರಕ್ತದ ಕಲೆ ಅಂಟಿದೆ ಎಂಬ ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಹೇಳಿಕೆಯನ್ನು ಗಮನಿಸಿಲ್ಲ. ರಾಜ್ಯದಲ್ಲಿ ಪ್ರಚಾರಕ್ಕೆ ಪ್ರಿಯಾಂಕಾ ವಾದ್ರಾ ಬರಲ್ಲ. ಜೆಡಿಎಸ್ನೊಂದಿಗೆ ಚುನಾವಣೋತ್ತರ ಹೊಂದಾಣಿಕೆಯ ಪ್ರಶ್ನೆ ಊಹಾಪೋಹದಿಂದ ಕೂಡಿದೆ’ ಎಂದು ಅವರು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>