<p><strong>ಚಾಮರಾಜನಗರ:</strong> ಸರ್ಕಾರಿ ವಾಹನದಲ್ಲೇ ಅಕ್ರಮವಾಗಿ 8 ಲಕ್ಷ ರೂ. ನಗದು ಸಾಗಿಸುತ್ತಿದ್ದ ಕೊಳ್ಳೇಗಾಲದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಂ. ನಾರಾಯಣಸ್ವಾಮಿ ಅವರು ಭಾನುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.<br /> <br /> ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಲಾಗಿದೆ. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ನೀಡಲು ಬೆಂಗಳೂರಿಗೆ ಈ ಹಣ ಸಾಗಿಸುತ್ತಿದ್ದರು ಎನ್ನಲಾಗಿದೆ. <br /> <br /> ಬೆಳಿಗ್ಗೆ ಅರಣ್ಯ ಇಲಾಖೆಗೆ ಸೇರಿದ ವಾಹನದಲ್ಲಿಯೇ ಸೂಟ್ಕೇಸ್ನಲ್ಲಿ ಹಣ ಸಾಗಿಸುತ್ತಿದ್ದರು. ಜಿಲ್ಲಾ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಸ್.ಇ. ಡಿಸೋಜ ನೇತೃತ್ವದ ತಂಡ ಕೊಳ್ಳೇಗಾಲ ಸಮೀಪದ ಅಣಗಳ್ಳಿ ಬಳಿ ನಾರಾಯಣಸ್ವಾಮಿ ಪ್ರಯಾಣಿಸುತ್ತಿದ್ದ ವಾಹನ ತಡೆದು ತಪಾಸಣೆ ನಡೆಸಿತು. <br /> <br /> ತಪಾಸಣೆಗೆ ನಾರಾಯಣಸ್ವಾಮಿ ವಿರೋಧ ವ್ಯಕ್ತಪಡಿಸಿದರು. ಐಎಫ್ಎಸ್ ಅಧಿಕಾರಿಯೊಬ್ಬರನ್ನು ರಸ್ತೆಯಲ್ಲಿ ನಿಲ್ಲಿಸಿ ತಪಾಸಣೆ ಮಾಡುವುದು ಸರಿಯಲ್ಲವೆಂದು ಅಸಹಕಾರ ತೋರಿದರು ಎನ್ನಲಾಗಿದೆ. ಕೊನೆಗೆ, ತಪಾಸಣೆ ನಡೆಸಿದಾಗ 500 ಮತ್ತು 1 ಸಾವಿರ ರೂ. ಮುಖ ಬೆಲೆಯ ನೋಟುಗಳಿದ್ದ 8 ಲಕ್ಷ ರೂಪಾಯಿ ಪತ್ತೆ ಆಯಿತು.<br /> <br /> ಜಿಲ್ಲಾ ಸೆಷನ್ಸ್ ನ್ಯಾಯಾಧೀಶರ ಮುಂದೆ ನಾರಾಯಣಸ್ವಾಮಿ ಅವರನ್ನು ಹಾಜರುಪಡಿಸಲಾಗಿದ್ದು, ಮಾರ್ಚ್ 30ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. <br /> <br /> ‘ಎರಡು ದಿನದ ಹಿಂದೆಯೇ ಗುತ್ತಿಗೆದಾರರಿಂದ ಪಡೆದ ಹಣವನ್ನು ಬೆಂಗಳೂರಿಗೆ ಸಾಗಿಸಲು ಮುಂದಾಗಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿ ನಾರಾಯಣಸ್ವಾಮಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಇದು ಅವರ ಸ್ವಂತ ಹಣವೇ ಅಥವಾ ಅಕ್ರಮವಾಗಿ ಪಡೆದಿರುವುದೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ’ ಎಂದು ಜಿಲ್ಲಾ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಡಿಸೋಜ ತಿಳಿಸಿದರು.</p>.<table align="right" border="1" cellpadding="1" cellspacing="1" width="200"><tbody><tr><td></td> </tr> <tr> <td style="text-align: center">ನಾರಾಯಣಸ್ವಾಮಿ</td> </tr> </tbody> </table>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಸರ್ಕಾರಿ ವಾಹನದಲ್ಲೇ ಅಕ್ರಮವಾಗಿ 8 ಲಕ್ಷ ರೂ. ನಗದು ಸಾಗಿಸುತ್ತಿದ್ದ ಕೊಳ್ಳೇಗಾಲದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಂ. ನಾರಾಯಣಸ್ವಾಮಿ ಅವರು ಭಾನುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.<br /> <br /> ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಲಾಗಿದೆ. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ನೀಡಲು ಬೆಂಗಳೂರಿಗೆ ಈ ಹಣ ಸಾಗಿಸುತ್ತಿದ್ದರು ಎನ್ನಲಾಗಿದೆ. <br /> <br /> ಬೆಳಿಗ್ಗೆ ಅರಣ್ಯ ಇಲಾಖೆಗೆ ಸೇರಿದ ವಾಹನದಲ್ಲಿಯೇ ಸೂಟ್ಕೇಸ್ನಲ್ಲಿ ಹಣ ಸಾಗಿಸುತ್ತಿದ್ದರು. ಜಿಲ್ಲಾ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಸ್.ಇ. ಡಿಸೋಜ ನೇತೃತ್ವದ ತಂಡ ಕೊಳ್ಳೇಗಾಲ ಸಮೀಪದ ಅಣಗಳ್ಳಿ ಬಳಿ ನಾರಾಯಣಸ್ವಾಮಿ ಪ್ರಯಾಣಿಸುತ್ತಿದ್ದ ವಾಹನ ತಡೆದು ತಪಾಸಣೆ ನಡೆಸಿತು. <br /> <br /> ತಪಾಸಣೆಗೆ ನಾರಾಯಣಸ್ವಾಮಿ ವಿರೋಧ ವ್ಯಕ್ತಪಡಿಸಿದರು. ಐಎಫ್ಎಸ್ ಅಧಿಕಾರಿಯೊಬ್ಬರನ್ನು ರಸ್ತೆಯಲ್ಲಿ ನಿಲ್ಲಿಸಿ ತಪಾಸಣೆ ಮಾಡುವುದು ಸರಿಯಲ್ಲವೆಂದು ಅಸಹಕಾರ ತೋರಿದರು ಎನ್ನಲಾಗಿದೆ. ಕೊನೆಗೆ, ತಪಾಸಣೆ ನಡೆಸಿದಾಗ 500 ಮತ್ತು 1 ಸಾವಿರ ರೂ. ಮುಖ ಬೆಲೆಯ ನೋಟುಗಳಿದ್ದ 8 ಲಕ್ಷ ರೂಪಾಯಿ ಪತ್ತೆ ಆಯಿತು.<br /> <br /> ಜಿಲ್ಲಾ ಸೆಷನ್ಸ್ ನ್ಯಾಯಾಧೀಶರ ಮುಂದೆ ನಾರಾಯಣಸ್ವಾಮಿ ಅವರನ್ನು ಹಾಜರುಪಡಿಸಲಾಗಿದ್ದು, ಮಾರ್ಚ್ 30ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. <br /> <br /> ‘ಎರಡು ದಿನದ ಹಿಂದೆಯೇ ಗುತ್ತಿಗೆದಾರರಿಂದ ಪಡೆದ ಹಣವನ್ನು ಬೆಂಗಳೂರಿಗೆ ಸಾಗಿಸಲು ಮುಂದಾಗಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿ ನಾರಾಯಣಸ್ವಾಮಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಇದು ಅವರ ಸ್ವಂತ ಹಣವೇ ಅಥವಾ ಅಕ್ರಮವಾಗಿ ಪಡೆದಿರುವುದೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ’ ಎಂದು ಜಿಲ್ಲಾ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಡಿಸೋಜ ತಿಳಿಸಿದರು.</p>.<table align="right" border="1" cellpadding="1" cellspacing="1" width="200"><tbody><tr><td></td> </tr> <tr> <td style="text-align: center">ನಾರಾಯಣಸ್ವಾಮಿ</td> </tr> </tbody> </table>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>